AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ಮಹೇಶ್​ ಬಾಬುಗೆ ಇರಲಿದೆ 8 ಗೆಟಪ್​?

ಸ್ಟಾರ್​ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಜೊತೆಗಿನ ಸಿನಿಮಾಗಾಗಿ ನಟ ಮಹೇಶ್​ ಬಾಬು ಅವರು ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಪ್ರೀ-ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ. ಮಹೇಶ್ ಬಾಬು ಅವರ ಪಾತ್ರಕ್ಕೆ ಲುಕ್​ ಟೆಸ್ಟ್​ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಅವರಿಗೆ ಹಲವು ಗೆಟಪ್​ಗಳು ಇರಲಿವೆ. ಆ ಬಗ್ಗೆ ಟಾಲಿವುಡ್​ ಅಂಗಳದಲ್ಲಿ ಗಾಸಿಪ್​ ಹರಿದಾಡುತ್ತಿವೆ.

ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ಮಹೇಶ್​ ಬಾಬುಗೆ ಇರಲಿದೆ 8 ಗೆಟಪ್​?
ರಾಜಮೌಳಿ, ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Mar 04, 2024 | 7:26 PM

Share

ನಟ ಮಹೇಶ್​ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾದ ಬಳಿಕ ಮುಂದಿನ ಚಿತ್ರದ ಕಡೆಗೆ ಗಮನ ಹರಿಸಿದ್ದಾರೆ. ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಹಾಗೂ ಮಹೇಶ್​ ಬಾಬು ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಹೊಸ ಚಿತ್ರದ (SSMB 29) ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಸಿನಿಮಾಗಾಗಿ ಮಹೇಶ್​ ಬಾಬು ಅವರು ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಶೀರ್ಷಿಕೆ ಬಹಿರಂಗ ಆಗಿರದ ಈ ಸಿನಿಮಾ ಬಗ್ಗೆ ಒಂದು ತಾಜಾ ಗಾಸಿಪ್​ ಕೇಳಿಬರುತ್ತಿದೆ. ಈ ಚಿತ್ರದಲ್ಲಿ ಮಹೇಶ್​ ಬಾಬು (Mahesh Babu) ಅವರಿಗೆ 8 ಗೆಟಪ್​ಗಳು ಇರಲಿವೆ ಎಂದು ಹೇಳಲಾಗುತ್ತಿದೆ.

ರಾಜಮೌಳಿ ನಿರ್ದೇಶನ ಮಾಡುವ ಸಿನಿಮಾಗಳಲ್ಲಿ ಹೀರೋಗಳ ಗೆಟಪ್​ಗೆ ಹೆಚ್ಚು ಮಹತ್ವ ನೀಡಲಾಗುತ್ತದೆ. ಅದಕ್ಕಾಗಿ ಹೀರೋಗಳು ಹಗಲಿರುಳು ಕಷ್ಟಪಡಬೇಕು. ಅದಕ್ಕೆ ಈಗ ಮಹೇಶ್​ ಬಾಬು ಕೂಡ ಬದ್ಧರಾಗಿದ್ದಾರೆ. ಈ ಸಿನಿಮಾಗಾಗಿ ಲುಕ್​ ಟೆಸ್ಟ್​ ನಡೆಯುತ್ತಿದೆ. ಒಂದಲ್ಲ ಎರಡಲ್ಲ, ಬರೋಬ್ಬರಿ 8 ಗೆಟಪ್​ಗಳನ್ನು ಈಗಾಗಲೇ ಫೈನಲ್​ ಮಾಡಲಾಗಿದೆ ಎಂದು ಗಾಸಿಪ್​ ಹರಡಿದೆ. ಇದನ್ನು ಕೇಳಿ ಮಹೇಶ್​ ಬಾಬು ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿಲ್ಲ ಮಹೇಶ್​ ಬಾಬು; ಇದು ರಾಜಮೌಳಿ ಆದೇಶ

ಇದು ಮಹೇಶ್​ ಬಾಬು ನಟನೆಯ 29ನೇ ಸಿನಿಮಾ. ಹಾಗಾಗಿ ತಾತ್ಕಾಲಿಕವಾಗಿ ‘SSMB 29’ ಎಂದು ಕರೆಯಲಾಗುತ್ತಿದೆ. ಈ ಚಿತ್ರದಲ್ಲಿನ ಮಹೇಶ್​ ಬಾಬು ಅವರ ಯಾವುದೇ ಗೆಟಪ್​ ಬಹಿರಂಗ ಆಗುವಂತಿಲ್ಲ. ಹಾಗಾಗಿ ರಾಜಮೌಳಿ ಅವರು ಕೆಲವು ಷರತ್ತುಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಇನ್ಮುಂದೆ ಮಹೇಶ್​ ಬಾಬು ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿಲ್ಲ ಎಂದು ರಾಜಮೌಳಿ ಅವರು ಹೇಳಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತಕ್ಕೆ ದಿನಾಂಕ ನಿಗದಿ

ನಿರೀಕ್ಷಿಸಿದ ರೀತಿಯಲ್ಲಿ ‘ಗುಂಟೂರು ಖಾರಂ’ ಸಿನಿಮಾ ಕಲೆಕ್ಷನ್​ ಮಾಡಲಿಲ್ಲ. ಹಾಗಾಗಿ ಮಹೇಶ್​ ಬಾಬು ಅವರು ಮುಂದಿನ ಸಿನಿಮಾದಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ಇದೆ. ರಾಜಮೌಳಿ ಜೊತೆ ಅವರು ಕೈ ಜೋಡಿಸುತ್ತಿರುವುದರಿಂದ ಸಹಜವಾಗಿಯೇ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಎಲ್ಲರೂ ಊಹಿಸಿದ್ದಾರೆ. ಹಾಗಂತ ಆ ಗೆಲುವು ಸುಲಭಕ್ಕೆ ದಕ್ಕುವುದಿಲ್ಲ. ಮಹೇಶ್​ ಬಾಬು ಅವರು ಈ ಚಿತ್ರಕ್ಕೆ ವರ್ಷಗಟ್ಟಲೆ ಕಾಲ್​ಶೀಟ್​ ನೀಡಲಿದ್ದಾರೆ. ಆದಷ್ಟು ಬೇಗ ಈ ಚಿತ್ರತಂಡದಿಂದ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಆಸ್ಕರ್​ ಪುರಸ್ಕೃತ ಮ್ಯೂಸಿಕ್​ ಕಂಪೋಸರ್​ ಎಂಎಂ ಕೀರವಾಣಿ ಅವರು ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ