Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ಮಹೇಶ್​ ಬಾಬುಗೆ ಇರಲಿದೆ 8 ಗೆಟಪ್​?

ಸ್ಟಾರ್​ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಜೊತೆಗಿನ ಸಿನಿಮಾಗಾಗಿ ನಟ ಮಹೇಶ್​ ಬಾಬು ಅವರು ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಪ್ರೀ-ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ. ಮಹೇಶ್ ಬಾಬು ಅವರ ಪಾತ್ರಕ್ಕೆ ಲುಕ್​ ಟೆಸ್ಟ್​ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಅವರಿಗೆ ಹಲವು ಗೆಟಪ್​ಗಳು ಇರಲಿವೆ. ಆ ಬಗ್ಗೆ ಟಾಲಿವುಡ್​ ಅಂಗಳದಲ್ಲಿ ಗಾಸಿಪ್​ ಹರಿದಾಡುತ್ತಿವೆ.

ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ಮಹೇಶ್​ ಬಾಬುಗೆ ಇರಲಿದೆ 8 ಗೆಟಪ್​?
ರಾಜಮೌಳಿ, ಮಹೇಶ್​ ಬಾಬು
Follow us
ಮದನ್​ ಕುಮಾರ್​
|

Updated on: Mar 04, 2024 | 7:26 PM

ನಟ ಮಹೇಶ್​ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾದ ಬಳಿಕ ಮುಂದಿನ ಚಿತ್ರದ ಕಡೆಗೆ ಗಮನ ಹರಿಸಿದ್ದಾರೆ. ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಹಾಗೂ ಮಹೇಶ್​ ಬಾಬು ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಹೊಸ ಚಿತ್ರದ (SSMB 29) ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈ ಸಿನಿಮಾಗಾಗಿ ಮಹೇಶ್​ ಬಾಬು ಅವರು ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಶೀರ್ಷಿಕೆ ಬಹಿರಂಗ ಆಗಿರದ ಈ ಸಿನಿಮಾ ಬಗ್ಗೆ ಒಂದು ತಾಜಾ ಗಾಸಿಪ್​ ಕೇಳಿಬರುತ್ತಿದೆ. ಈ ಚಿತ್ರದಲ್ಲಿ ಮಹೇಶ್​ ಬಾಬು (Mahesh Babu) ಅವರಿಗೆ 8 ಗೆಟಪ್​ಗಳು ಇರಲಿವೆ ಎಂದು ಹೇಳಲಾಗುತ್ತಿದೆ.

ರಾಜಮೌಳಿ ನಿರ್ದೇಶನ ಮಾಡುವ ಸಿನಿಮಾಗಳಲ್ಲಿ ಹೀರೋಗಳ ಗೆಟಪ್​ಗೆ ಹೆಚ್ಚು ಮಹತ್ವ ನೀಡಲಾಗುತ್ತದೆ. ಅದಕ್ಕಾಗಿ ಹೀರೋಗಳು ಹಗಲಿರುಳು ಕಷ್ಟಪಡಬೇಕು. ಅದಕ್ಕೆ ಈಗ ಮಹೇಶ್​ ಬಾಬು ಕೂಡ ಬದ್ಧರಾಗಿದ್ದಾರೆ. ಈ ಸಿನಿಮಾಗಾಗಿ ಲುಕ್​ ಟೆಸ್ಟ್​ ನಡೆಯುತ್ತಿದೆ. ಒಂದಲ್ಲ ಎರಡಲ್ಲ, ಬರೋಬ್ಬರಿ 8 ಗೆಟಪ್​ಗಳನ್ನು ಈಗಾಗಲೇ ಫೈನಲ್​ ಮಾಡಲಾಗಿದೆ ಎಂದು ಗಾಸಿಪ್​ ಹರಡಿದೆ. ಇದನ್ನು ಕೇಳಿ ಮಹೇಶ್​ ಬಾಬು ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿಲ್ಲ ಮಹೇಶ್​ ಬಾಬು; ಇದು ರಾಜಮೌಳಿ ಆದೇಶ

ಇದು ಮಹೇಶ್​ ಬಾಬು ನಟನೆಯ 29ನೇ ಸಿನಿಮಾ. ಹಾಗಾಗಿ ತಾತ್ಕಾಲಿಕವಾಗಿ ‘SSMB 29’ ಎಂದು ಕರೆಯಲಾಗುತ್ತಿದೆ. ಈ ಚಿತ್ರದಲ್ಲಿನ ಮಹೇಶ್​ ಬಾಬು ಅವರ ಯಾವುದೇ ಗೆಟಪ್​ ಬಹಿರಂಗ ಆಗುವಂತಿಲ್ಲ. ಹಾಗಾಗಿ ರಾಜಮೌಳಿ ಅವರು ಕೆಲವು ಷರತ್ತುಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಇನ್ಮುಂದೆ ಮಹೇಶ್​ ಬಾಬು ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿಲ್ಲ ಎಂದು ರಾಜಮೌಳಿ ಅವರು ಹೇಳಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತಕ್ಕೆ ದಿನಾಂಕ ನಿಗದಿ

ನಿರೀಕ್ಷಿಸಿದ ರೀತಿಯಲ್ಲಿ ‘ಗುಂಟೂರು ಖಾರಂ’ ಸಿನಿಮಾ ಕಲೆಕ್ಷನ್​ ಮಾಡಲಿಲ್ಲ. ಹಾಗಾಗಿ ಮಹೇಶ್​ ಬಾಬು ಅವರು ಮುಂದಿನ ಸಿನಿಮಾದಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ಇದೆ. ರಾಜಮೌಳಿ ಜೊತೆ ಅವರು ಕೈ ಜೋಡಿಸುತ್ತಿರುವುದರಿಂದ ಸಹಜವಾಗಿಯೇ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಎಲ್ಲರೂ ಊಹಿಸಿದ್ದಾರೆ. ಹಾಗಂತ ಆ ಗೆಲುವು ಸುಲಭಕ್ಕೆ ದಕ್ಕುವುದಿಲ್ಲ. ಮಹೇಶ್​ ಬಾಬು ಅವರು ಈ ಚಿತ್ರಕ್ಕೆ ವರ್ಷಗಟ್ಟಲೆ ಕಾಲ್​ಶೀಟ್​ ನೀಡಲಿದ್ದಾರೆ. ಆದಷ್ಟು ಬೇಗ ಈ ಚಿತ್ರತಂಡದಿಂದ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಆಸ್ಕರ್​ ಪುರಸ್ಕೃತ ಮ್ಯೂಸಿಕ್​ ಕಂಪೋಸರ್​ ಎಂಎಂ ಕೀರವಾಣಿ ಅವರು ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ