AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಚಿತ್ರವನ್ನು ಹಾಡಿ ಹೊಗಳಿದ ಮಹೇಶ್​ ಬಾಬು; ಈ ಪರಿ ಪ್ರಶಂಸೆಗೆ ಅಲ್ಲು ಅರ್ಜುನ್​ ಪ್ರತಿಕ್ರಿಯೆ ಏನು?

ಮಹೇಶ್​ ಬಾಬು ಅವರಿಗೆ ‘ಪುಷ್ಪ’ ಸಿನಿಮಾ ಸಖತ್​ ಇಷ್ಟ ಆಗಿದೆ. ಈ ಸಿನಿಮಾದಲ್ಲಿನ ಹಲವು ಅಂಶಗಳನ್ನು ಅವರು ಮೆಚ್ಚಿಕೊಂಡಿದ್ದಾರೆ.

‘ಪುಷ್ಪ’ ಚಿತ್ರವನ್ನು ಹಾಡಿ ಹೊಗಳಿದ ಮಹೇಶ್​ ಬಾಬು; ಈ ಪರಿ ಪ್ರಶಂಸೆಗೆ ಅಲ್ಲು ಅರ್ಜುನ್​ ಪ್ರತಿಕ್ರಿಯೆ ಏನು?
ಮಹೇಶ್​ ಬಾಬು, ಅಲ್ಲು ಅರ್ಜುನ್
TV9 Web
| Edited By: |

Updated on:Jan 07, 2022 | 1:17 PM

Share

ಕಡು ಬರಗಾಲದಲ್ಲೂ ಬಂಗಾರದ ಬೆಳೆ ತೆಗೆದ ಸಿನಿಮಾ ಎಂದರೆ ಅದು ‘ಪುಷ್ಪ’. ಕೊರೊನಾ 3ನೇ ಹಾವಳಿ ಶುರು ಆಗುವುದಕ್ಕಿಂತ ಮುನ್ನವೇ ಈ ಸಿನಿಮಾ ಗೆದ್ದು ಬೀಗಿದೆ. ವಿಶ್ವಾದ್ಯಂತ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿರುವುದು ಈ ಚಿತ್ರದ ಹೆಗ್ಗಳಿಕೆ. ಅಲ್ಲು ಅರ್ಜುನ್​ (Allu Arjun) ನಟನೆಯ ಈ ಸಿನಿಮಾವನ್ನು ಪ್ರೇಕ್ಷಕರು ಮಾತ್ರವಲ್ಲದೇ ಸೂಪರ್​ ಸ್ಟಾರ್​ ಕಲಾವಿದರು ಕೂಡ ಮೆಚ್ಚಿಕೊಂಡಿದ್ದಾರೆ. ನಟ ಮಹೇಶ್​ ಬಾಬು (Mahesh Babu) ಅವರು ಇತ್ತೀಚೆಗೆ ‘ಪುಷ್ಪ’ ಚಿತ್ರ ವೀಕ್ಷಿಸಿದ್ದಾರೆ. ಬಳಿಕ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ಇಂಥ ಸ್ಟಾರ್​ ಕಲಾವಿದರಿಂದ ಮೆಚ್ಚುಗೆ ಸಿಕ್ಕಿರುವುದಕ್ಕೆ ‘ಪುಷ್ಪ’ (Pushpa Movie) ತಂಡದವರು ಫುಲ್​ ಖುಷ್​ ಆಗಿದ್ದಾರೆ. ಈ ಚಿತ್ರಕ್ಕೆ ಸುಕುಮಾರ್ (Sukumar)​ ನಿರ್ದೇಶನ ಮಾಡಿದ್ದು, ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿಯಾಗಿ ನಟಿಸಿದ್ದಾರೆ.

ಮಹೇಶ್​ ಬಾಬು ಅವರಿಗೆ ‘ಪುಷ್ಪ’ ಸಿನಿಮಾ ಸಖತ್​ ಇಷ್ಟ ಆಗಿದೆ. ಈ ಸಿನಿಮಾದಲ್ಲಿನ ಹಲವು ಅಂಶಗಳನ್ನು ಅವರು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್​​ ಮಾಡಿರುವ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ‘ಅಲ್ಲು ಅರ್ಜುನ್​ ನಟನೆಯ ಪುಷ್ಪ ಚಿತ್ರ ಅಚ್ಚರಿ ಮೂಡಿಸುತ್ತದೆ, ಒರಿಜಿನಲ್​ ಮತ್ತು ಸೆನ್ಸೇಷನಲ್​ ಆಗಿದೆ. ನಟನೆ ಅದ್ಭುತವಾಗಿದೆ. ಸುಕುಮಾರ್​ ನಿರ್ದೇಶನದ ಸಿನಿಮಾಗಳು ಪ್ರಾಮಾಣಿಕವಾಗಿ ಮತ್ತು ರಾ ಆಗಿರುತ್ತವೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಬೇರೆ ಎಲ್ಲ ಸಿನಿಮಾಗಳಿಗಿಂತ ಇದು ಭಿನ್ನವಾಗಿದೆ’ ಎಂದು ಮಹೇಶ್​ ಬಾಬು ಟ್ವೀಟ್​ ಮಾಡಿದ್ದಾರೆ.

ಮಹೇಶ್​ ಬಾಬು ನೀಡಿದ ಮೆಚ್ಚುಗೆಗೆ ಪ್ರತಿಯಾಗಿ ಅಲ್ಲು ಅರ್ಜುನ್​ ಧನ್ಯವಾದ ತಿಳಿಸಿದ್ದಾರೆ. ‘ಮಹೇಶ್​ ಬಾಬು ಅವರೇ ನಿಮಗೆ ತುಂಬ ಧನ್ಯವಾಗಳು. ನಟನೆ ಮತ್ತು ಎಲ್ಲರ ಕೆಲಸವನ್ನು ನೀವು ಇಷ್ಟಪಟ್ಟಿದ್ದೀರಿ. ಹೃತ್ಪೂರ್ವಕವಾದ ಈ ಹೊಗಳಿಕೆಯನ್ನು ಕೇಳಿ ಧನ್ಯನಾದೆ’ ಎಂದು ಅಲ್ಲು ಅರ್ಜುನ್​ ಟ್ವೀಟ್ ಮಾಡಿದ್ದಾರೆ.

ಮಹೇಶ್​ ಬಾಬುಗೆ ಕೊರೊನಾ ಪಾಸಿಟಿವ್​:

ನಟ ಮಹೇಶ್​ ಬಾಬು ಅವರಿಗೆ ಕೊವಿಡ್ ಪಾಸಿಟಿವ್​ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಂಡ ಹೊರತಾಗಿಯೂ ಕೊವಿಡ್​ ಪಾಸಿಟಿವ್​ ಆಗಿದೆ ಎಂದು ಅವರು ಬೇಸರ ಹೊರ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ‘ನನ್ನ ಎಲ್ಲಾ ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ಈ ಪತ್ರ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಸಹ, ನನಗೆ ಕೊವಿಡ್​ 19 ಅಂಟಿದೆ. ನಾನು ಮನೆಯಲ್ಲಿ ಕ್ವಾರಂಟೈನ್​ ಆಗಿದ್ದೇನೆ. ವೈದ್ಯರ ಸೂಚನೆ ಹಾಗೂ ಮಾರ್ಗದರ್ಶನವನ್ನು ಅನುಸರಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

‘ಬೇರೆಯವರ ಚಿತ್ರದಲ್ಲಿ ನಾನು 2ನೇ ಹೀರೋ​ ಆಗಲ್ಲ’; ಖಡಕ್​ ಉತ್ತರ ಕೊಟ್ಟ ಅಲ್ಲು ಅರ್ಜುನ್​

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?

Published On - 1:15 pm, Fri, 7 January 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ