AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Devi Passes Away: ಮಹೇಶ್​ ಬಾಬು ತಾಯಿ ಇಂದಿರಾ ದೇವಿ ನಿಧನ; ‘ಪ್ರಿನ್ಸ್​’ ಕುಟುಂಬದಲ್ಲಿ ಶೋಕ

Mahesh Babu Mother Indira Devi: ಬುಧವಾರ (ಸೆ.28) ನಸುಕಿನ 4 ಗಂಟೆಗೆ ಇಂದಿರಾ ದೇವಿ ನಿಧನರಾದರು ಎಂದು ಮಹೇಶ್​ ಬಾಬು ಕುಟುಂಬದವರು ತಿಳಿಸಿದ್ದಾರೆ. ಅವರ ಅಗಲಿಕೆಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ.

Indira Devi Passes Away: ಮಹೇಶ್​ ಬಾಬು ತಾಯಿ ಇಂದಿರಾ ದೇವಿ ನಿಧನ; ‘ಪ್ರಿನ್ಸ್​’ ಕುಟುಂಬದಲ್ಲಿ ಶೋಕ
ಮಹೇಶ್ ಬಾಬು, ಇಂದಿರಾ ದೇವಿ
TV9 Web
| Updated By: ಮದನ್​ ಕುಮಾರ್​|

Updated on:Sep 28, 2022 | 9:15 AM

Share

ತೆಲುಗಿನ ಖ್ಯಾತ ನಟ ಮಹೇಶ್​ ಬಾಬು (Mahesh Babu) ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅವರ ತಾಯಿ ಇಂದಿರಾ ದೇವಿ (Indira Devi) ನಿಧನರಾಗಿದ್ದಾರೆ. ಈ ಸುದ್ದಿ ಕೇಳಿ ಮಹೇಶ್​ ಬಾಬು ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಕಳೆದ ಕೆಲವು ದಿನಗಳಿಂದ ಇಂದಿರಾ ದೇವಿ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಹೈದರಾಬಾದ್​ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ. ಬುಧವಾರ (ಸೆ.28) ನಸುಕಿನ 4 ಗಂಟೆಗೆ ಇಂದಿರಾ ದೇವಿ ನಿಧನರಾದರು (Indira Devi Death) ಎಂದು ಮಹೇಶ್​ ಬಾಬು ಕುಟುಂಬದವರು ತಿಳಿಸಿದ್ದಾರೆ.

ಮಹೇಶ್​ ಬಾಬು ಅವರದ್ದು ಸಿನಿಮಾ ಹಿನ್ನೆಲೆಯ ಕುಟುಂಬ. ಮಹೇಶ್​ ಬಾಬು ತಂದೆ ಕೃಷ್ಣ ಅವರು ಟಾಲಿವುಡ್​ನಲ್ಲಿ ಸೂಪರ್ ಸ್ಟಾರ್​ ಆಗಿ ಮಿಂಚಿದ್ದರು. ಅವರ ಪುತ್ರ ರಮೇಶ್​ ಬಾಬು ಅವರು ಈ ವರ್ಷ ಆರಂಭದಲ್ಲಿ ಕೊನೆಯುಸಿರು ಎಳೆದಿದರು. ಈಗ ಕೃಷ್ಣ ಪತ್ನಿ ಇಂದಿರಾ ದೇವಿ ನಿಧನದಿಂದ ಇಡೀ ಕುಟುಂಬದಲ್ಲಿ ಶೋಕ ಆವರಿಸಿದೆ. ಆಪ್ತರು, ಅಭಿಮಾನಿಗಳು, ಸೆಲೆಬ್ರಿಟಿಗಳು ಮಹೇಶ್​ ಬಾಬು ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.

ಇದನ್ನೂ ಓದಿ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ಇಂದಿರಾ ದೇವಿ ಅವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆಗಾಗಿ ಸಕಲ ಸಿದ್ಧತೆ ನಡೆಯುತ್ತಿದೆ. ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲು ಅನುಕೂಲ ಆಗಲಿ ಎಂದು ಇಂದಿರಾ ದೇವಿ ಅವರ ಮೃತದೇಹವನ್ನು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಪದ್ಮಾಲಯ ಸ್ಡುಡಿಯೋಸ್​ನಲ್ಲಿ​ ಇರಿಸಲಾಗುವುದು. ನಂತರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮಹೇಶ್​ ಬಾಬು ಅವರು ಕುಟುಂಬಕ್ಕೆ ಹೆಚ್ಚು ಸಮಯ ಮೀಸಲಿಡುತ್ತಾರೆ. ಕೆಲವೇ ದಿನಗಳ ಹಿಂದೆ ಅವರು ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜೊತೆ ಹೊಸ ಚಿತ್ರದ ಶೂಟಿಂಗ್​ ಆರಂಭಿಸಿದ್ದರು. ಮಹೇಶ್​ ಬಾಬು ಅವರ ಹೊಸ ಲುಕ್​ ಕೂಡ ವೈರಲ್​ ಆಗಿತ್ತು. ಶೂಟಿಂಗ್​ ಸೆಟ್​ನಲ್ಲಿ ಅವರು ಕಾಣಿಸಿಕೊಂಡ ಫೋಟೋ ಗಮನ ಸೆಳೆದಿತ್ತು. ಈಗ ತಾಯಿಯ ನಿಧನದಿಂದ ಅವರಿಗೆ ತೀವ್ರ ನೋವುಂಟಾಗಿದೆ. ಹಾಗಾಗಿ ಒಂದಷ್ಟು ದಿನಗಳ ಕಾಲ ಸಿನಿಮಾ ಚಟುವಟಿಕೆಗಳಿಗೆ ಅವರು ಬ್ರೇಕ್​ ನೀಡಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Wed, 28 September 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!