AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಹೊಸ ಸಿನಿಮಾದ ಹೆಸರು ಘೋಷಣೆ: ಹೆಸರಲ್ಲೇ ಇದೆ ಖಾರ

Mahesh Babu: ಮಹೇಶ್ ಬಾಬು ಹೊಸ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕವೂ ಘೋಷಿಸಲಾಗಿದೆ.

ಮಹೇಶ್ ಬಾಬು ಹೊಸ ಸಿನಿಮಾದ ಹೆಸರು ಘೋಷಣೆ: ಹೆಸರಲ್ಲೇ ಇದೆ ಖಾರ
ಮಹೇಶ್ ಬಾಬು
ಮಂಜುನಾಥ ಸಿ.
|

Updated on: May 31, 2023 | 9:06 PM

Share

ಮಹೇಶ್ ಬಾಬು (Mahesh Babu) ಈಗ ನಟಿಸುತ್ತಿರುವ ಸಿನಿಮಾಕ್ಕಿಂತಲೂ ಅವರ ಮುಂದೆ ನಟಿಸಲಿರುವ ಸಿನಿಮಾದ ಬಗ್ಗೆಯೇ ಹೆಚ್ಚು ಚರ್ಚೆಯಾಗುತ್ತಿದೆ. ಮಹೇಶ್ ಬಾಬು, ರಾಜಮೌಳಿ (Rajamouli) ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನಟಿಸಲಿದ್ದಾರೆ. ಆದರೆ ಪ್ರಸ್ತುತ ತ್ರಿವಿಕ್ರಮ್ ಶ್ರೀನಿವಾಸ್ (Trivikram Srinivas) ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಬಹುತೇಕ ಅಂತಿಮ ಹಂತದಲ್ಲಿದೆ. ಇದೀಗ ಇಂದು (ಮೇ 31) ಸಿನಿಮಾದ ಹೆಸರು ಘೋಷಣೆ ಮಾಡಲಾಗಿದ್ದು, ಪಕ್ಕಾ ಕಮರ್ಶಿಯಲ್ ಹೆಸರನ್ನೇ ಸಿನಿಮಾಕ್ಕೆ ಇಡಲಾಗಿದೆ.

ಮಹೇಶ್ ಬಾಬು-ತ್ರಿವಿಕ್ರಮ್ ಶ್ರೀನಿವಾಸ್ ಜೋಡಿಯ ಹೊಸ ಸಿನಿಮಾದ ಹೆಸರು ‘ಗುಂಟೂರು ಖಾರಂ’ ಸಿನಿಮಾಕ್ಕೆ ಇಷ್ಟು ದಿನ ಎಸ್ಎಸ್​ಎಂಬಿ28 ಎಂದು ಕರೆಯಲಾಗುತ್ತಿದ್ದ ಈ ಸಿನಿಮಾಕ್ಕೆ ಇನ್ನು ಮುಂದೆ ಗುಂಟೂರು ಖಾರಂ ಎಂದು ಹೆಸರು. ಗುಂಟೂರು ಖಾರ ತನ್ನ ಅತಿಯಾದ ಖಾರ, ಗಾಟಿಗೆ ಬಹಳ ಜನಪ್ರಿಯ ಇದೀಗ ಅದೇ ಹೆಸರನ್ನು ಸಿನಿಮಾಕ್ಕೆ ಇಟ್ಟಿದ್ದಾರೆ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್.

ಗುಂಟೂರು ಖಾರ ಸಿನಿಮಾದ ಪೋಸ್ಟರ್ ಹಾಗೂ ಟೀಸರ್ ಸಹ ಇಂದು ಬಿಡುಗಡೆ ಆಗಿದ್ದು ಕೆಂಪು ಬಣ್ಣದ ಚೌಕಳಿಗಳುಳ್ಳ ಶರ್ಟ್ ಧರಿಸಿ ಹಣೆಗೆ ಕೆಂಪು ಪಟ್ಟಿ ಕಟ್ಟಿಕೊಂಡು ಬೀಡಿ ಸೇದುತ್ತಿರುವ ಮಹೇಶ್ ಬಾಬು ಚಿತ್ರವನ್ನು ಸಿನಿಮಾದ ಹೆಸರಿನ ಜೊತೆಗೆ ಬಿಡುಗಡೆ ಮಾಡಲಾಗಿದೆ. ಸಿನಿಮಾದ ಹೊಸ ಪೋಸ್ಟರ್ ಅನ್ನು ಮಹೇಶ್ ಬಾಬು, ಅವರ ಪತ್ನಿ ನಮ್ರತಾ ಶಿರೋಡ್ಕರ್ ಸೇರಿದಂತೆ ಹಲವರು ಹಂಚಿಕೊಂಡಿದ್ದಾರೆ. ಮಹೇಶ್ ಬಾಬು ಅಭಿಮಾನಿಗಳು ಸಹ ಸಿನಿಮಾದ ಬಗ್ಗೆ ಕುತೂಹಲ, ನಿರೀಕ್ಷೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಪಡಿಸಿದ್ದಾರೆ. ಟೀಸರ್​ನಲ್ಲಿ ಮಹೇಶ್ ಬಾಬು ಖಳರನ್ನು ಚಚ್ಚಿ ಚಿಂದಿ ಉಡಾಯಿಸುತ್ತಿರುವ ಕೆಲವು ದೃಶ್ಯಗಳನ್ನು ತೋರಿಸಲಾಗಿದೆ.

ಇದನ್ನೂ ಓದಿ:ರಾಜಮೌಳಿ-ಮಹೇಶ್ ಬಾಬು ಸಿನಿಮಾ ಸೆಟ್ಟೇರುವುದು ಯಾವಾಗ? ರಾಜಮೌಳಿ ತಂದೆ ಕೊಟ್ಟರು ಉತ್ತರ

ಮಹೇಶ್ ಬಾಬು ನಟಿಸುತ್ತಿರುವ ಗುಂಟೂರು ಖಾರಂ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ. ಇದೇ ಸಿನಿಮಾದಲ್ಲಿ ಕನ್ನಡತಿ ಶ್ರೀಲೀಲಾ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಬಾಲಿವುಡ್ ನಟರೊಬ್ಬರು ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸಿನಿಮಾಕ್ಕೆ ತಮನ್ ಸಂಗೀತ ನೀಡಿದ್ದು, ಸಿನಿಮಾ ನಿರ್ಮಾಣ ಮಾಡಿರುವುದು ರಾಧಾ ಕೃಷ್ಣ. ಗುಂಟೂರು ಖಾರಂ ಸಿನಿಮಾವು ಮುಂದಿನ ವರ್ಷ ಜನವರಿ 13ಕ್ಕೆ ಬಿಡುಗಡೆ ಆಗಲಿದೆ.

ತ್ರಿವಿಕ್ರಮ್ ಶ್ರೀನಿವಾಸ್ ಜೊತೆಗೆ ಮಹೇಶ್ ಬಾಬುಗಿದು ಮೂರನೇ ಸಿನಿಮಾ. ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶಕತೆಯಲ್ಲಿ ಮಹೇಶ್ ಬಾಬು ಮೊದಲು ನಟಿಸಿದ್ದ ಅತಿಥಿ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು ಅದಾದ ಬಳಿಕ ಖಲೇಜ ಹೆಸರಿನ ಸಿನಿಮಾದಲ್ಲಿ ನಟಿಸಿದರು ಆ ಸಿನಿಮಾ ಸಹ ಸೂಪರ್ ಹಿಟ್ ಆಯಿತು. ಇದೀಗ ಮೂರನೇ ಬಾರಿ ಈ ಯಶಸ್ವಿ ಜೋಡಿ ಒಂದಾಗುತ್ತಿದೆ.

ಗುಂಟೂರು ಖಾರಂ ಸಿನಿಮಾದ ಬಳಿಕ ಮಹೇಶ್ ಬಾಬು ರಾಜಮೌಳಿ ಜೊತೆಗೆ ಸಿನಿಮಾದಲ್ಲಿ ನಟಿಸಲಿದ್ದಾರೆ. ಆ ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿವೆ. ಆರ್​ಆರ್​ಆರ್ ಸಿನಿಮಾ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜಮೌಳಿ ಹೆಸರು ಮಾಡಿದ್ದು, ಮಹೇಶ್ ಬಾಬು ಜೊತೆಗಿನ ಸಿನಿಮಾವನ್ನು ಅಂತರಾಷ್ಟ್ರೀಯ ಗುಣಮಟ್ಟದಲ್ಲಿಯೇ ರಾಜಮೌಳಿ ನಿರ್ದೇಶಿಸಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ