AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ ಮಹೇಶ್ ಬಾಬು; ಶೂಟಿಂಗ್ ಯಾವಾಗ?

ತ್ರಿವಿಕ್ರಂ ನಿರ್ದೇಶನದ ಮುಂದಿನ ಸಿನಿಮಾಗೆ ಮಹೇಶ್ ಬಾಬು ಹೀರೋ ಆಗಿದ್ದಾರೆ. ಈ ಸಿನಿಮಾದ ಕೆಲಸಗಳು ಮೊದಲು ಆರಂಭಗೊಳ್ಳಲಿದೆ.

ಹೊಸ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ ಮಹೇಶ್ ಬಾಬು; ಶೂಟಿಂಗ್ ಯಾವಾಗ?
ಮಹೇಶ್ ಬಾಬು
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 08, 2022 | 5:17 PM

Share

ನಟ ಮಹೇಶ್ ಬಾಬು (Mahesh Babu) ಅಭಿನಯದ ‘ಸರ್ಕಾರು ವಾರಿ ಪಾಟ’ ಸಿನಿಮಾ (Sarkaru Vaari Paata) ರಿಲೀಸ್​ಗೆ ರೆಡಿ ಇದೆ. ಈ ಚಿತ್ರ ಮೇ 12ರಂದು ತೆರೆಗೆ ಬರುತ್ತಿದ್ದು, ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಸಿನಿಮಾ ಹಾಡುಗಳು ಈಗಾಗಲೇ ಸಖತ್ ಹಿಟ್ ಆಗಿವೆ. ಚಿತ್ರದ ಟ್ರೇಲರ್ ಕೂಡ ಮೆಚ್ಚುಗೆ ಪಡೆದುಕೊಂಡಿದೆ. ಮಹೇಶ್ ಬಾಬು ಅವರು ಭಿನ್ನ ಗೆಟಪ್​​ನಲ್ಲಿ ಮಿಂಚಿದ್ದಾರೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಈಗ ಅವರ ಮುಂದಿನ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಒಂದು ಹೊರಬಿದ್ದಿದೆ. ಸ್ವತಃ ಮಹೇಶ್ ಬಾಬು ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ವರದಿ ಆಗಿದೆ.

ಮಹೇಶ್ ಬಾಬು ಹಾಗೂ ರಾಜಮೌಳಿ ಅವರು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಆದರೆ, ಈ ಚಿತ್ರ ಸೆಟ್ಟೇರುವುದಕ್ಕೂ ಮೊದಲು ಮತ್ತೊಂದು ಸಿನಿಮಾದ ಕೆಲಸವನ್ನು ಪೂರ್ಣಗೊಳಿಸಲಿದ್ದಾರೆ ಮಹೇಶ್ ಬಾಬು. ಹೌದು, ತ್ರಿವಿಕ್ರಂ ನಿರ್ದೇಶನದ ಮುಂದಿನ ಸಿನಿಮಾಗೆ ಮಹೇಶ್ ಬಾಬು ಹೀರೋ ಆಗಿದ್ದಾರೆ. ಈ ಸಿನಿಮಾದ ಕೆಲಸಗಳು ಮೊದಲು ಆರಂಭಗೊಳ್ಳಲಿದೆ.

ಮಹೇಶ್ ಬಾಬು ಅವರು ಸದ್ಯ, ‘ಸರ್ಕಾರಿ ವಾರು ಪಾಟ’ ಸಿನಿಮಾದ ಅಂತಿಮ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ನಾನಾ ಕಡೆಗಳಿಗೆ ತೆರಳುತ್ತಿದ್ದಾರೆ. ಈ ಸಿನಿಮಾ ತೆರೆಕಂಡ ಬಳಿಕ ಅವರು ಒಂದು ಸಣ್ಣ ಬ್ರೇಕ್​ ತೆಗೆದುಕೊಳ್ಳಲಿದ್ದಾರೆ. ಇದಾದ ಬಳಿಕ ಜೂನ್​ ತಿಂಗಳಲ್ಲಿ ಹೊಸ ಸಿನಿಮಾ ಕೆಲಸ ಆರಂಭಿಸಲಿದ್ದಾರೆ. ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಫಿಕ್ಸ್ ಆಗಿಲ್ಲ. ಸಿನಿಮಾ ಕೆಲಸಗಳು ಆರಂಭಗೊಂಡ ನಂತರದಲ್ಲಿ ಟೈಟಲ್​ ಅನಾವರಣ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ಮಸ್ತ್​ ಮನರಂಜನೆ ನೀಡಲಿದ್ದಾರೆ ಮಹೇಶ್​ ಬಾಬು-ಕೀರ್ತಿ ಸುರೇಶ್​; ಈ ಫೋಟೋದಲ್ಲಿದೆ ಝಲಕ್​
Image
‘ಸರ್ಕಾರು ವಾರಿ ಪಾಟ’ ಟ್ರೇಲರ್​ನಲ್ಲಿ ಆ್ಯಕ್ಷನ್ ಮೂಲಕ ಮಿಂಚಿದ ಮಹೇಶ್ ಬಾಬು; ಚಿತ್ರದ ಕಥೆ ಏನು?
Image
ಬಿಡುಗಡೆಗೂ ಮುನ್ನವೇ ಲೀಕ್​ ಆಯ್ತು ಮಹೇಶ್​ ಬಾಬು ಹೊಸ ಸಿನಿಮಾದ ದೃಶ್ಯಗಳು; ಫ್ಯಾನ್ಸ್​ ಗರಂ
Image
ಒಂದೇ ಒಂದು ಪೋಸ್ಟರ್​ನಿಂದ ‘ಸರ್ಕಾರು ವಾರಿ ಪಾಟ’ ಟ್ರೇಲರ್​ ಬಗ್ಗೆ ಕೌತುಕ ಕೆರಳಿಸಿದ ಮಹೇಶ್​ ಬಾಬು

ಮಹೇಶ್ ಬಾಬು 28ನೇ ಸಿನಿಮಾ ಇದಾಗಿದೆ. ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ. ಪೂಜಾ ಹೆಗ್ಡೆ ಅವರಿಗೆ ಈಗಾಗಲೇ ದಕ್ಷಿಣ ಭಾರತದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಹಲವು ಸ್ಟಾರ್​​ಗಳಿಗೆ ಅವರು ನಾಯಕಿ ಆಗಿ ನಟಿಸಿದ್ದಾರೆ. ಈಗ ಅವರು ಮಹೇಶ್ ಬಾಬು ಚಿತ್ರಕ್ಕೆ ನಾಯಕಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ, ಪ್ರೀ-ಪ್ರೊಡಕ್ಷನ್​ ಕೆಲಸಗಳು ಪ್ರಗತಿಯಲ್ಲಿವೆ. ಇನ್ನು ಕೆಲವೇ ದಿನಗಳಲ್ಲಿ ಆ ಕೆಲಸಗಳು ಪೂರ್ಣಗೊಳ್ಳಲಿವೆ. ಎಸ್​. ಥಮನ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಿನಿಮಾದ ರಿಲೀಸ್ ಡೇಟ್​​ ಅನೌನ್ಸ್ ಆಗಲಿದೆ.  ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾವನ್ನು ಪರಶುರಾಮ್ ಅವರು ನಿರ್ದೇಶಿಸಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ