AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನಿಗಾಗಿ ಪಾಪರಾಜಿ ಕೆಲಸ ಮಾಡಿದ ಮಹೇಶ್ ಬಾಬು ಮಗ ಗೌತಮ್

ಪ್ರತಿ ಸಿನಿಮಾ ತೆರೆಗೆ ಬಂದ ಬಳಿಕ ಮಹೇಶ್ ಬಾಬು ಅವರು ಕುಟುಂಬದ ಜತೆ ವಿದೇಶಕ್ಕೆ ತೆರಳುವುದು ವಾಡಿಕೆ. ಈ ಮೊದಲಿನಿಂದಲೂ ಅವರು ಇದನ್ನು ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಅವರ ಟ್ರಿಪ್​ ಸ್ವಲ್ಪ ಜೋರಾಗಿಯೇ ಇದೆ.

ಅಪ್ಪನಿಗಾಗಿ ಪಾಪರಾಜಿ ಕೆಲಸ ಮಾಡಿದ ಮಹೇಶ್ ಬಾಬು ಮಗ ಗೌತಮ್
ಮಹೇಶ್ ಬಾಬು ಕುಟುಂಬ
TV9 Web
| Edited By: |

Updated on: Aug 02, 2022 | 8:05 PM

Share

ಮಹೇಶ್ ಬಾಬು (Mahesh Babu) ಅವರು ಒಂದರಮೇಲೆ ಒಂದರಂತೆ ಟ್ರಿಪ್​ ಮಾಡುತ್ತಿದ್ದಾರೆ. ‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡ ಬಳಿಕ ಜರ್ಮನಿಗೆ ತೆರಳಿದ್ದ ಮಹೇಶ್ ಬಾಬು ಆ್ಯಂಡ್ ಫ್ಯಾಮಿಲಿ ನಂತರ ನ್ಯೂಯಾರ್ಕ್​​ಗೆ ಪ್ರಯಾಣ ಬೆಳೆಸಿತ್ತು. ಈಗ ಮಹೇಶ್ ಬಾಬು ಫ್ಯಾಮಿಲಿ ಸ್ವಿಜರ್​​ಲ್ಯಾಂಡ್​​ನಲ್ಲಿ ಇದ್ದಾರೆ. ಪತ್ನಿ ನಮ್ರತಾ, ಮಗಳು ಸಿತಾರಾ (Sitara Ghattamaneni ) ಹಾಗೂ ಮಗ ಗೌತಮ್ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್​ಗಳು ಬರುತ್ತಿವೆ. ಮಹೇಶ್ ಬಾಬು ಅವರ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಪ್ರತಿ ಸಿನಿಮಾ ತೆರೆಗೆ ಬಂದ ಬಳಿಕ ಮಹೇಶ್ ಬಾಬು ಅವರು ಕುಟುಂಬದ ಜತೆ ವಿದೇಶಕ್ಕೆ ತೆರಳುವುದು ವಾಡಿಕೆ. ಈ ಮೊದಲಿನಿಂದಲೂ ಅವರು ಇದನ್ನು ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಅವರ ಟ್ರಿಪ್​ ಸ್ವಲ್ಪ ಜೋರಾಗಿಯೇ ಇದೆ. ಹೊಸ ಸಿನಿಮಾ ಕೆಲಸಕ್ಕೂ ಮುನ್ನ ಅವರು ಮೂರನೇ ದೇಶ ಸುತ್ತುತ್ತಿದ್ದಾರೆ.

ಮಹೇಶ್ ಬಾಬು ಹಾಗೂ ಸಿತಾರಾ ರಸ್ತೆಯೊಂದರಲ್ಲಿ ನಿಂತಿದ್ದಾರೆ. ಈ ಫೋಟೋವನ್ನು ಮಹೇಶ್ ಬಾಬು ಅವರ ಮಗ ಗೌತಮ್​ ಕ್ಲಿಕ್ಕಿಸಿದ್ದಾರೆ. ಈ ಫೋಟೋವನ್ನು ಹಂಚಿಕೊಂಡಿರುವ ನಮ್ರತಾ ಅವರು, ‘ನಮ್ಮ ಕುಟುಂಬದ ಪಾಪರಾಜಿ’ ಎಂದು ಬರೆದುಕೊಂಡಿದ್ದಾರೆ. ಸೆಲೆಬ್ರಿಟಿಗಳು ಸಾರ್ವಜನಿಕ ಪ್ರದೇಶಗಳಲ್ಲಿ ಎದುರಾದರೆ ಅವರ ಫೋಟೋ ಕ್ಲಿಕ್ಕಿಸೋಕೆ ಒಂದಷ್ಟು ಮಂದಿ ಸಾಲುಗಟ್ಟಿ ನಿಲ್ಲುತ್ತಾರೆ. ಅವರನ್ನು ಪಾಪರಾಜಿಗಳು ಎಂದು ಕರೆಯಲಾಗುತ್ತದೆ. ಈ ರೀತಿಯಲ್ಲಿ ಕ್ಲಿಕ್ ಮಾಡಿದ ಫೋಟೋಗಳನ್ನು ಪಾಪರಾಜಿಗಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಅದೇ ರೀತಿ ಕೆಲಸವನ್ನು ಗೌತಮ್ ಕೂಡ ಮಾಡಿದ್ದಾರೆ. ಈ ಕಾರಣಕ್ಕೆ ಗೌತಮ್​ಗೆ ಪಾಪರಾಜಿ ಎಂಬ ಟ್ಯಾಗ್ ನೀಡಿದ್ದಾರೆ ನಮ್ರತಾ.

ಇದನ್ನೂ ಓದಿ
Image
ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ಇದನ್ನೂ ಓದಿ: ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್

ಮಹೇಶ್​ ಬಾಬು ‘ಸರ್ಕಾರು ವಾರಿ ಪಾಟ’ ಚಿತ್ರದ ಗೆಲುವಿನ ಬಳಿಕ ತ್ರಿವಿಕ್ರಂ ಶ್ರೀನಿವಾಸ್ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರ ಈಗಾಗಲೇ ಸೆಟ್ಟೇರಿದೆ. ಇತ್ತೀಚೆಗೆ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿತ್ತು. ಈ ಸಿನಿಮಾ ತೆರೆಕಂಡ ಬಳಿಕ ಎಸ್​.ಎಸ್​. ರಾಜಮೌಳಿ ಜತೆ ಮಹೇಶ್ ಬಾಬು ಕೈ ಜೋಡಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!