AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹ ನಟನ ಮೇಲೆ ಮಹೇಶ್ ಬಾಬು ಮೂತ್ರ ಮಾಡುವ ದೃಶ್ಯಕ್ಕೆ ಅಸಹ್ಯ ವ್ಯಕ್ತಪಡಿಸಿದ ಫ್ಯಾನ್ಸ್

ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ 12ರಂದು ತೆರೆಗೆ ಬಂದು ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಮಧ್ಯೆ ಸಿನಿಮಾದಲ್ಲಿ ಬರುವ ದೃಶ್ಯವೊಂದಕ್ಕೆ ಫ್ಯಾನ್ಸ್ ವಿರೋಧ ವ್ಯಕ್ತಪಡಿಸಿದ್ದಾರೆ

ಸಹ ನಟನ ಮೇಲೆ ಮಹೇಶ್ ಬಾಬು ಮೂತ್ರ ಮಾಡುವ ದೃಶ್ಯಕ್ಕೆ ಅಸಹ್ಯ ವ್ಯಕ್ತಪಡಿಸಿದ ಫ್ಯಾನ್ಸ್
ಮಹೇಶ್ ಬಾಬು
TV9 Web
| Edited By: |

Updated on: May 13, 2022 | 2:54 PM

Share

ನಟ ಮಹೇಶ್ ಬಾಬು (Mahesh Babu) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ಗೌರವ ಇದೆ. ಅವರು ಸದಾ ವಿವಾದಗಳಿಂದ ದೂರ ಇರಲು ಬಯಸುತ್ತಾರೆ. ಯಾವುದಾದರೂ ವಿಚಾರ ವಿವಾದದ ಕಿಡಿ ಹೊತ್ತಿಸುತ್ತದೆ ಎನ್ನುವ ಸೂಚನೆ ಸಿಕ್ಕರೆ ಸಾಕು ಅತ್ತ ಸುಳಿಯುವುದೂ ಇಲ್ಲ. ‘ಹಿಂದಿ ಚಿತ್ರರಂಗಕ್ಕೆ ನನ್ನನ್ನು ಭರಿಸುವ ಶಕ್ತಿ ಇಲ್ಲ’ ಎಂದು ಅವರು ಇತ್ತೀಚೆಗೆ ಹೇಳಿದ್ದು ಸಾಕಷ್ಟು ಚರ್ಚೆ ಸೃಷ್ಟಿ ಮಾಡಿತ್ತು. ಈಗ ಮಹೇಶ್ ಬಾಬು ಅವರ ಕಟ್ಟಾಭಿಮಾನಿಗಳು ಅವರ ಬಗ್ಗೆ ಹಾಗೂ ನಿರ್ದೇಶಕ ಪರಶುರಾಮ್ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಇದಕ್ಕೆ ಕಾರಣವಾಗಿದ್ದು ‘ಸರ್ಕಾರು ವಾರಿ ಪಾಟ’ ಸಿನಿಮಾದ (Sarkaru Vaari Paata Movie) ಒಂದು ದೃಶ್ಯ.

ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ 12ರಂದು ತೆರೆಗೆ ಬಂದು ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಸಿನಿಮಾ ಮಹೇಶ್ ಬಾಬು ಅವರ ಡೈಹಾರ್ಡ್​ ಫ್ಯಾನ್ಸ್​ಗೆ ಹೆಚ್ಚು ಇಷ್ಟವಾಗಿದೆ. ಈ ಮಧ್ಯೆ ಸಿನಿಮಾದಲ್ಲಿ ಬರುವ ದೃಶ್ಯವೊಂದಕ್ಕೆ ಫ್ಯಾನ್ಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮಹೇಶ್ ಬಾಬು ಅವರು ಈ ದೃಶ್ಯ ಮಾಡಲು ಒಪ್ಪಬಾರದಿತ್ತು ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಕಥಾನಾಯಕ ಮಾಹಿ (ಮಹೇಶ್ ಬಾಬು) ತನಗೆ ನಿದ್ರೆ ಬರುವುದಿಲ್ಲ ಎಂದು ನಾಯಕಿ ಕಲಾವತಿಯನ್ನು (ಕೀರ್ತಿ ಸುರೇಶ್) ಮನೆಗೆ ಕರೆಸಿಕೊಳ್ಳುತ್ತಾನೆ. ಕಲಾವತಿ ಮಾವ ಸುಬ್ಬರಾಜು (ಸುಬ್ಬರಾಜು) ಕೂಡ ಅವಳ ಜತೆ ಬರುತ್ತಾನೆ. ರಾತ್ರಿ ಮಾಹಿ ಮಲಗಿದ್ದಾಗ ಲ್ಯಾಪ್​ಟಾಪ್ ಕದಿಯಲು ಸುಬ್ಬರಾಜು ಮುಂದಾಗುತ್ತಾನೆ. ಈ ವೇಳೆ ಮಾಹಿ ನಿದ್ದೆಯಲ್ಲಿ ನಡೆದು ಬರುತ್ತಾನೆ. ಮಾಹಿಯಿಂದ ತಪ್ಪಿಸಿಕೊಳ್ಳೋಕೆ ಸುಬ್ಬರಾಜು ಟಾಯ್ಲೆಟ್​ಗೆ ಓಡಿ ಹೋಗಿ ಕಮೋಡ್​ಮೇಲೆ ಕೂರತ್ತಾನೆ. ಮಾಹಿ ಕೂಡ ಅಲ್ಲಿಗೆ ಹೋಗುತ್ತಾನೆ. ಮಾಹಿ ಟಾಯ್ಲೆಟ್​ನಿಂದ ಹೊರ ಬಂದಾಗ ಸುಬ್ಬರಾಜುನ ತಲೆಯಿಂದ ಮೂತ್ರ ಬೀಳುತ್ತಿರುವ ರೀತಿಯಲ್ಲಿ ದೃಶ್ಯವನ್ನು ತೋರಿಸಲಾಗಿದೆ. ಇಲ್ಲಿ ನೇರವಾಗಿ ಏನನ್ನೂ ತೋರಿಸದಿದ್ದರೂ ಫ್ಯಾನ್ಸ್ ಈ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ
Image
ಮಹೇಶ್​ ಬಾಬು ಮಾತಿಗೆ ಬೆಂಬಲ ನೀಡಿದ ಕಂಗನಾ; ಬಾಲಿವುಡ್ ವರ್ಸಸ್​​ ಸೌತ್​ ಚರ್ಚೆ ಇನ್ನಷ್ಟು ಜೋರು
Image
‘ಒಮ್ಮೆ ನೋಡಬಹುದು, ಹೆಚ್ಚು ಮನರಂಜನೆ ಇಲ್ಲ’: ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಪ್ರೇಕ್ಷಕರ ಪ್ರಾಮಾಣಿಕ ವಿಮರ್ಶೆ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?

ಇದು ಸಂಪೂರ್ಣವಾಗಿ ಕಾಮಿಡಿ ಉದ್ದೇಶದಿಂದ ಹೆಣೆದ ದೃಶ್ಯ. ಆದರೆ, ಇಷ್ಟು ಕೀಳುಮಟ್ಟದಲ್ಲಿ ದೃಶ್ಯವನ್ನು ತೋರಿಸಬಾರದಿತ್ತು ಎಂಬುದು ಫ್ಯಾನ್ಸ್ ಅಭಿಪ್ರಾಯ. ಈ ಬಗ್ಗೆ ಮಹೇಶ್ ಬಾಬು ಆಗಲಿ ಚಿತ್ರತಂಡದವರಾಗಲಿ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಒಳ್ಳೆಯ ಕಲೆಕ್ಷನ್ ಮಾಡಿದ ‘ಸರ್ಕಾರು ವಾರಿ ಪಾಟ’

ಕೇವಲ ತೆಲುಗಿನಲ್ಲಿ ರಿಲೀಸ್​ ಆದ ‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಪ್ರೇಕ್ಷಕರು ಭರ್ಜರಿ ರೆಸ್ಪಾನ್ಸ್​ ನೀಡಿದ್ದಾರೆ. ಫಸ್ಟ್​ ಡೇ ಬರೋಬ್ಬರಿ 45 ಕೋಟಿ ರೂಪಾಯಿ ಗಳಿಕೆ ಆಗಿದೆ ಎಂಬ ವರದಿ ಆಗಿದೆ. ‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ಅವರು ಮಾಸ್ ಅವತಾರ ತಾಳಿದ್ದಾರೆ. ಬ್ಯಾಂಕಿಂಗ್​ ಕ್ಷೇತ್ರದ ಕುರಿತಾದ ಕಥೆಯನ್ನು ಇಟ್ಟುಕೊಂಡು ಅವರು ಪ್ರೇಕ್ಷಕರಿಗೆ ಸಂದೇಶ ನೀಡಲು ಪ್ರಯತ್ನಿಸಿದ್ದಾರೆ. ಪರಶುರಾಮ್​ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ಮಹೇಶ್​ ಬಾಬು ಅವರಿಗೆ ಜೋಡಿಯಾಗಿ ಕೀರ್ತಿ ಸುರೇಶ್​ ನಟಿಸಿದ್ದಾರೆ. ಅದ್ದೂರಿ ಆ್ಯಕ್ಷನ್​ ದೃಶ್ಯಗಳನ್ನು ಮಹೇಶ್​ ಬಾಬು ಫ್ಯಾನ್ಸ್​ ಇಷ್ಟಪಟ್ಟಿದ್ದಾರೆ. ಒಟ್ಟಾರೆಯಾಗಿ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್​ ಮಾಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್