AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವೇದಿಕೆ ಮೇಲೆ ಮಹೇಶ್ ಬಾಬು ಸರಳತೆಯನ್ನು ಕೊಂಡಾಡಿದ ಸಲ್ಮಾನ್ ಖಾನ್

ಮಹೇಶ್ ಬಾಬು ಪತ್ನಿ ನಮ್ರತಾ ಸಹೋದರಿ ಅಂದರೆ ಮಹೇಶ್ ಬಾಬು ಅತ್ತಿಗೆ ಶಿಲ್ಪಾ ದೊಡ್ಮನೆಯಲ್ಲಿ ಇದ್ದಾರೆ. ಶಿಲ್ಪಾ ಮನೆಯ ಸದಸ್ಯರೊಬ್ಬರಿಂದ ಅಗೌರವದ ವರ್ತನೆಯನ್ನು ಎದುರಿಸಿದರು. ಇದಾದ ಬಳಿಕ ಸಲ್ಮಾನ್ ಖಾನ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ.

ಬಿಗ್ ಬಾಸ್ ವೇದಿಕೆ ಮೇಲೆ ಮಹೇಶ್ ಬಾಬು ಸರಳತೆಯನ್ನು ಕೊಂಡಾಡಿದ ಸಲ್ಮಾನ್ ಖಾನ್
ಸಲ್ಮಾನ್-ಮಹೇಶ್ ಬಾಬು
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 26, 2024 | 10:01 AM

Share

ಮಹೇಶ್ ಬಾಬು ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಅನೇಕ ಸೆಲೆಬ್ರಿಟಿಗಳು ಮಹೇಶ್ ಬಾಬು ಅವರ ಅಭಿಮಾನಿ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಅವರು ಸಖತ್ ಸಿಂಪಲ್ ಆಗಿ ಇರುತ್ತಾರೆ. ಈಗ ಮಹೇಶ್ ಬಾಬು ಅವರ ಬಗ್ಗೆ ಸಲ್ಮಾನ್ ಖಾನ್ ಅವರು ಸ್ಟೇಟ್​ಮೆಂಟ್ ಒಂದನ್ನು ನೀಡಿದ್ದಾರೆ. ಈ ಸ್ಟೇಟ್​ಮೆಂಟ್ ಸಖತ್ ವೈರಲ್ ಆಗಿದೆ. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಅನೇಕರು ಸಲ್ಮಾನ್ ಖಾನ್ ಅವರನ್ನು ಹೊಗಳಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಸಹೋದರಿ ಅಂದರೆ ಮಹೇಶ್ ಬಾಬು ಅತ್ತಿಗೆ ಶಿಲ್ಪಾ ದೊಡ್ಮನೆಯಲ್ಲಿ ಇದ್ದಾರೆ. ಶಿಲ್ಪಾ ಮನೆಯ ಸದಸ್ಯರೊಬ್ಬರಿಂದ ಅಗೌರವದ ವರ್ತನೆಯನ್ನು ಎದುರಿಸಿದರು. ಇದಾದ ಬಳಿಕ ಸಲ್ಮಾನ್ ಖಾನ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ಮಹೇಶ್ ಬಾಬು ಅವರ ಉದಾಹರಣೆಯನ್ನು ನೀಡಿದ್ದಾರೆ.

‘ಶಿಲ್ಪಾ ಅವರ ಭಾವ ತೆರೆಮೇಲೆ ಬೇರೆಯದೇ ರೀತಿ ಕಾಣಿಸಿಕೊಳ್ಳುತ್ತಾರೆ. ಅವರಿಗೆ ಯಾವ ರೀತಿಯ ಪಾತ್ರ ಸಿಕ್ಕಿತೋ ಅದನ್ನು ಮಾಡುತ್ತಾರೆ. ಅವರು ತೆರೆಮೇಲೆ ಆ್ಯಟಿಟ್ಯೂಡ್ ತೋರಿಸಬಹುದು. ಆದರೆ, ನಿಜ ಜೀವನದಲ್ಲಿ ಅವರು ಸರಳ ವ್ಯಕ್ತಿ. ಫ್ಯಾಮಿಲಿ ಮ್ಯಾನ್’ ಎಂದರು ಸಲ್ಮಾನ್ ಖಾನ್. ಇದಕ್ಕೆ ಶಿಲ್ಪಾ ಖುಷಿಯಾದರು.

ಶಿಲ್ಪಾ ಅವರು ನಮ್ರತಾ ಶಿರೋಡ್ಕರ್ ಜೊತೆ ಒಳ್ಳೆಯ ಬಾಂಡಿಂಗ್ ಹೊಂದಿದ್ದಾರೆ. ಇವರ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಮಾತು ಎದುರಾಗಿತ್ತು. ಆದರೆ, ಇದನ್ನು ಶಿಲ್ಪಾ ಅವರು ಅಲ್ಲಗಳೆದಿದ್ದಾರೆ. ಇವರ ಮಧ್ಯೆ ಒಳ್ಳೆಯ ಬಾಂಡಿಂಗ್ ಇದ್ದು ಅದನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಅದೇ ರೀತಿ ಮಹೇಶ್ ಬಾಬು ಜೊತೆಯೂ ಶಿಲ್ಪಾ ಅವರು ಒಳ್ಳೆಯ ನಂಟು ಹೊಂದಿದ್ದಾರೆ.  ಶಿಲ್ಪಾ ಅವರು ದೊಡ್ಮನೆಯಲ್ಲಿ ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಅವರಿಗೆ ಮಹೇಶ್ ಬಾಬು ಅಭಿಮಾನಿಗಳಿಂದಲೂ ಮತಗಳು ಸಿಗುತ್ತಿವೆ. ಇದು ಅವರ ಉಳಿದುಕೊಳ್ಳುವಿಕೆಗೆ ಸಾಕಷ್ಟು ಸಹಕಾರಿ ಆಗಿದೆ.

ಇದನ್ನೂ ಓದಿ: ಪವನ್ ಕಲ್ಯಾಣ್, ಮಹೇಶ್ ಬಾಬು, ಪ್ರಭಾಸ್ ಬಗ್ಗೆ ಅಲ್ಲು ಅರ್ಜುನ್ ಹೇಳಿದ್ದೇನು?

ಸಿನಿಮಾ ವಿಚಾರಕ್ಕೆ ಬರೋದಾದರೆ ಮಹೇಶ್ ಬಾಬು ‘SSMB29’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಾಜಮೌಳಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮಹೇಶ್ ಬಾಬು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಗುಂಟೂರು ಖಾರಂ’ ಚಿತ್ರದಲ್ಲಿ. ಈ ಸಿನಿಮಾ ವೀಕ್ಷಕರಿಂದ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ