AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವೇದಿಕೆ ಮೇಲೆ ಮಹೇಶ್ ಬಾಬು ಸರಳತೆಯನ್ನು ಕೊಂಡಾಡಿದ ಸಲ್ಮಾನ್ ಖಾನ್

ಮಹೇಶ್ ಬಾಬು ಪತ್ನಿ ನಮ್ರತಾ ಸಹೋದರಿ ಅಂದರೆ ಮಹೇಶ್ ಬಾಬು ಅತ್ತಿಗೆ ಶಿಲ್ಪಾ ದೊಡ್ಮನೆಯಲ್ಲಿ ಇದ್ದಾರೆ. ಶಿಲ್ಪಾ ಮನೆಯ ಸದಸ್ಯರೊಬ್ಬರಿಂದ ಅಗೌರವದ ವರ್ತನೆಯನ್ನು ಎದುರಿಸಿದರು. ಇದಾದ ಬಳಿಕ ಸಲ್ಮಾನ್ ಖಾನ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ.

ಬಿಗ್ ಬಾಸ್ ವೇದಿಕೆ ಮೇಲೆ ಮಹೇಶ್ ಬಾಬು ಸರಳತೆಯನ್ನು ಕೊಂಡಾಡಿದ ಸಲ್ಮಾನ್ ಖಾನ್
ಸಲ್ಮಾನ್-ಮಹೇಶ್ ಬಾಬು
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 26, 2024 | 10:01 AM

Share

ಮಹೇಶ್ ಬಾಬು ಅವರ ಅಭಿಮಾನಿ ಬಳಗ ತುಂಬಾನೇ ದೊಡ್ಡದಿದೆ. ಅನೇಕ ಸೆಲೆಬ್ರಿಟಿಗಳು ಮಹೇಶ್ ಬಾಬು ಅವರ ಅಭಿಮಾನಿ. ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಾಗ ಅವರು ಸಖತ್ ಸಿಂಪಲ್ ಆಗಿ ಇರುತ್ತಾರೆ. ಈಗ ಮಹೇಶ್ ಬಾಬು ಅವರ ಬಗ್ಗೆ ಸಲ್ಮಾನ್ ಖಾನ್ ಅವರು ಸ್ಟೇಟ್​ಮೆಂಟ್ ಒಂದನ್ನು ನೀಡಿದ್ದಾರೆ. ಈ ಸ್ಟೇಟ್​ಮೆಂಟ್ ಸಖತ್ ವೈರಲ್ ಆಗಿದೆ. ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಅನೇಕರು ಸಲ್ಮಾನ್ ಖಾನ್ ಅವರನ್ನು ಹೊಗಳಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಸಹೋದರಿ ಅಂದರೆ ಮಹೇಶ್ ಬಾಬು ಅತ್ತಿಗೆ ಶಿಲ್ಪಾ ದೊಡ್ಮನೆಯಲ್ಲಿ ಇದ್ದಾರೆ. ಶಿಲ್ಪಾ ಮನೆಯ ಸದಸ್ಯರೊಬ್ಬರಿಂದ ಅಗೌರವದ ವರ್ತನೆಯನ್ನು ಎದುರಿಸಿದರು. ಇದಾದ ಬಳಿಕ ಸಲ್ಮಾನ್ ಖಾನ್ ಅವರು ಈ ವಿಚಾರವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ಮಹೇಶ್ ಬಾಬು ಅವರ ಉದಾಹರಣೆಯನ್ನು ನೀಡಿದ್ದಾರೆ.

‘ಶಿಲ್ಪಾ ಅವರ ಭಾವ ತೆರೆಮೇಲೆ ಬೇರೆಯದೇ ರೀತಿ ಕಾಣಿಸಿಕೊಳ್ಳುತ್ತಾರೆ. ಅವರಿಗೆ ಯಾವ ರೀತಿಯ ಪಾತ್ರ ಸಿಕ್ಕಿತೋ ಅದನ್ನು ಮಾಡುತ್ತಾರೆ. ಅವರು ತೆರೆಮೇಲೆ ಆ್ಯಟಿಟ್ಯೂಡ್ ತೋರಿಸಬಹುದು. ಆದರೆ, ನಿಜ ಜೀವನದಲ್ಲಿ ಅವರು ಸರಳ ವ್ಯಕ್ತಿ. ಫ್ಯಾಮಿಲಿ ಮ್ಯಾನ್’ ಎಂದರು ಸಲ್ಮಾನ್ ಖಾನ್. ಇದಕ್ಕೆ ಶಿಲ್ಪಾ ಖುಷಿಯಾದರು.

ಶಿಲ್ಪಾ ಅವರು ನಮ್ರತಾ ಶಿರೋಡ್ಕರ್ ಜೊತೆ ಒಳ್ಳೆಯ ಬಾಂಡಿಂಗ್ ಹೊಂದಿದ್ದಾರೆ. ಇವರ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಮಾತು ಎದುರಾಗಿತ್ತು. ಆದರೆ, ಇದನ್ನು ಶಿಲ್ಪಾ ಅವರು ಅಲ್ಲಗಳೆದಿದ್ದಾರೆ. ಇವರ ಮಧ್ಯೆ ಒಳ್ಳೆಯ ಬಾಂಡಿಂಗ್ ಇದ್ದು ಅದನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಅದೇ ರೀತಿ ಮಹೇಶ್ ಬಾಬು ಜೊತೆಯೂ ಶಿಲ್ಪಾ ಅವರು ಒಳ್ಳೆಯ ನಂಟು ಹೊಂದಿದ್ದಾರೆ.  ಶಿಲ್ಪಾ ಅವರು ದೊಡ್ಮನೆಯಲ್ಲಿ ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಅವರಿಗೆ ಮಹೇಶ್ ಬಾಬು ಅಭಿಮಾನಿಗಳಿಂದಲೂ ಮತಗಳು ಸಿಗುತ್ತಿವೆ. ಇದು ಅವರ ಉಳಿದುಕೊಳ್ಳುವಿಕೆಗೆ ಸಾಕಷ್ಟು ಸಹಕಾರಿ ಆಗಿದೆ.

ಇದನ್ನೂ ಓದಿ: ಪವನ್ ಕಲ್ಯಾಣ್, ಮಹೇಶ್ ಬಾಬು, ಪ್ರಭಾಸ್ ಬಗ್ಗೆ ಅಲ್ಲು ಅರ್ಜುನ್ ಹೇಳಿದ್ದೇನು?

ಸಿನಿಮಾ ವಿಚಾರಕ್ಕೆ ಬರೋದಾದರೆ ಮಹೇಶ್ ಬಾಬು ‘SSMB29’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ರಾಜಮೌಳಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮಹೇಶ್ ಬಾಬು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಗುಂಟೂರು ಖಾರಂ’ ಚಿತ್ರದಲ್ಲಿ. ಈ ಸಿನಿಮಾ ವೀಕ್ಷಕರಿಂದ ಮಿಶ್ರಪ್ರತಿಕ್ರಿಯೆ ಪಡೆದುಕೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ