AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀರೋಗಳಿಗೆ ಭಯ ಹುಟ್ಟಿಸುತ್ತಾಳೆ ಈ ಹುಡುಗಿ: ಶ್ರೀಲೀಲಾ ಬಗ್ಗೆ ಹೀಗೇಕೆಂದರು ಮಹೇಶ್ ಬಾಬು

Sreeleela: ನಟಿ ಶ್ರೀಲೀಲಾ ತೆಲುಗಿನಲ್ಲಿ ಟಾಪ್ ನಟಿಯಾಗಿದ್ದಾರೆ. ಹಲವು ದೊಡ್ಡ ನಟರೊಟ್ಟಿಗೆ ನಟಿಸುತ್ತಿದ್ದಾರೆ. ಇದೀಗ ನಟ ಮಹೇಶ್ ಬಾಬು, ಕನ್ನಡದ ನಟಿ ಶ್ರೀಲೀಲಾರನ್ನು ಕೊಂಡಾಡಿ ಮಾತನಾಡಿದ್ದಾರೆ.

ಹೀರೋಗಳಿಗೆ ಭಯ ಹುಟ್ಟಿಸುತ್ತಾಳೆ ಈ ಹುಡುಗಿ: ಶ್ರೀಲೀಲಾ ಬಗ್ಗೆ ಹೀಗೇಕೆಂದರು ಮಹೇಶ್ ಬಾಬು
ಮಂಜುನಾಥ ಸಿ.
|

Updated on: Jan 10, 2024 | 7:26 PM

Share

ಕನ್ನಡದ ನಟಿ ಶ್ರೀಲೀಲಾ (Sreeleela) ತೆಲುಗು ಚಿತ್ರರಂಗದಲ್ಲಿ ಬಹು ವೇಗವಾಗಿ ವೃತ್ತಿಯಲ್ಲಿ ಪ್ರಗತಿ ಸಾಧಿಸುತ್ತಿದ್ದಾರೆ. ಅತ್ಯಂತ ಕಡಿಮೆ ಅವಧಿಯಲ್ಲಿ ತೆಲುಗು ಚಿತ್ರರಂಗದ ಹಾಲಿ ಟಾಪ್ ನಟಿಯಾಗಿ ಶ್ರೀಲೀಲಾ ಗುರುತು ಪಡೆದುಕೊಂಡಿದ್ದಾರೆ. ತೆಲುಗಿನ ದೊಡ್ಡ ದೊಡ್ಡ ಸ್ಟಾರ್ ನಟರು ಶ್ರೀಲೀಲಾ ತಮ್ಮ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಬೇಕೆಂದು ಬಯಸುತ್ತಿದ್ದಾರೆ. ಸ್ಟಾರ್ ನಟರುಗಳು ಶ್ರೀಲೀಲಾರ ಪ್ರತಿಭೆ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಶ್ರೀಲೀಲಾ ನಟಿಸಿರುವ ‘ಗುಂಟೂರು ಖಾರಂ’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗಷ್ಟೆ ಗುಂಟೂರಿನಲ್ಲಿ ನಡೆಯಿತು ಈ ವೇಳೆ ನಟ ಮಹೇಶ್ ಬಾಬು, ಶ್ರೀಲೀಲಾರನ್ನು ಹೊಗಳಿ ಕೊಂಡಾಡಿದರು.

‘ಬಹಳ ವರ್ಷಗಳ ನಂತರ ನಮ್ಮ ತೆಲುಗು ಯುವತಿ ದೊಡ್ಡ ನಾಯಕಿಯಾಗುತ್ತಿರುವುದು ಬಹಳ ಖುಷಿ ನೀಡುತ್ತಿದೆ. ನಾನು ಈ ವರೆಗೆ ಕೆಲಸ ಮಾಡಿರುವ ನಟಿಯರಲ್ಲಿಯೇ ಅತ್ಯಂತ ಶ್ರಮಪಟ್ಟು, ಸಮರ್ಪಣಾ ಭಾವದೊಟ್ಟಿಗೆ ಕೆಲಸ ಮಾಡುವ ನಟಿ ಶ್ರೀಲೀಲಾ. ಅವರ ಶಾಟ್ ಇರಲಿ ಇಲ್ಲದೇ ಇರಲಿ ಕ್ಯಾರಾವ್ಯಾನ್​ಗೆ ಹೋಗದೆ ಅಲ್ಲಿಯೇ ಮಾನಿಟರ್ ಮುಂದೆ ಕುಳಿತುಕೊಂಡಿರುತ್ತಾರೆ. ನನಗೂ ಹಾಗೂ ನಮ್ಮ ತಂಡಕ್ಕೂ ಶ್ರೀಲೀಲಾ ಎಂದರೆ ಅಚ್ಚು ಮೆಚ್ಚು’ ಎಂದಿದ್ದಾರೆ ಮಹೇಶ್ ಬಾಬು.

‘‘ಈ ಹುಡುಗಿ ಜೊತೆ ಡ್ಯಾನ್ಸ್ ಮಾಡುವುದು ಅಬ್ಬ ಅಸಾಧ್ಯ. ಅದೆಂಥಹಾ ಡ್ಯಾನ್ಸ್ ಮಾಡುತ್ತೆ ಈ ಹುಡುಗಿ. ಹೀರೋಗಳಿಗೆ ಸುಸ್ತಾಗಿ ಕಾಲು ಬಿದ್ದು ಹೋಗುತ್ತೆ. ಈ ಹುಡುಗಿಯೊಟ್ಟಿಗೆ ಡ್ಯಾನ್ಸ್ ಮಾಡುವುದೆಂದರೆ ಭಯವಾಗುತ್ತೆ. ತಮ್ಮ ಕೆಲಸವನ್ನು ತಾನು ಎಂಜಾಯ್ ಮಾಡುತ್ತಾಳೆ ಈ ಹುಡುಗಿ. ಹೀಗೆಯೇ ವೃತ್ತಿಯನ್ನು ಎಂಜಾಯ್ ಮಾಡುತ್ತಾ ಮುಂದೆ ಸಾಗಿ, ಭವಿಷ್ಯದಲ್ಲಿ ಬಹಳ ಒಳ್ಳೆಯ ವೃತ್ತಿ ಜೀವನ ನಿಮ್ಮದಾಗುತ್ತದೆ’ ಎಂದು ಹಾರೈಸಿದ್ದಾರೆ ನಟ ಮಹೇಶ್ ಬಾಬು.

ಇದನ್ನೂ ಓದಿ:ಖಾಸಗಿ ವಿಮಾನದಲ್ಲಿ ಎಂಟ್ರಿ ಕೊಟ್ಟ ‘ಗುಂಟೂರು ಖಾರಂ’ ತಂಡ; ಹೈಲೈಟ್ ಆದ ಶ್ರೀಲೀಲಾ

ಅದೇ ಕಾರ್ಯಕ್ರಮದಲ್ಲಿ ಮಹೇಶ್ ಬಾಬು ಬಗ್ಗೆ ನಟಿ ಶ್ರೀಲೀಲಾ ಸಹ ಬಹಳ ಕೊಂಡಾಡಿದ್ದಾರೆ. ‘ಮಹೇಶ್ ಬಾಬು ಚಿನ್ನದ ಬೊಂಬೆಗೆ ಜೀವ ಬಂದಂತೆ ಇದ್ದಾರೆ’ ಎಂದೆಲ್ಲ ಹೇಳಿದರು. ಶ್ರೀಲೀಲಾ ಮಹೇಶ್ ಬಾಬು ಅವರನ್ನು ಅತಿಯಾಗಿ ಕೊಂಡಾಡಿ ಮಾಡಿದ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಹೇಶ್ ಬಾಬು ಹಾಗೂ ಶ್ರೀಲೀಲಾ ನಟಿಸಿರುವ ‘ಗುಂಟೂರು ಖಾರಂ’ ಸಿನಿಮಾ ಜನವರಿ 12ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾವನ್ನು ತ್ರಿವಿಕ್ರಮ್ ನಿರ್ದೇಶನ ಮಾಡಿದ್ದಾರೆ. ಸಿನಿಮಾವು ಆಕ್ಷನ್ ಹಾಗೂ ಭಾವುಕ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ಮಹೇಶ್ ಬಾಬು, ಶ್ರೀಲೀಲಾ ಜೊತೆಗೆ ರಮ್ಯಾ ಕೃಷ್ಣ, ಪ್ರಕಾಶ್ ರೈ, ಜಗಪತಿ ಬಾಬು, ಜಯರಾಂ, ರಾವ್ ರಮೇಶ್ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾಕ್ಕೆ ಎಸ್ ತಮನ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ