AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮುಖ ದೃಶ್ಯ ಶೂಟ್ ಮಾಡಲು ಒಡಿಶಾಗೆ ಹಾರಿದ ಮಹೇಶ್ ಬಾಬು-ಪ್ರಿಯಾಂಕಾ ಚೋಪ್ರಾ

ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಅವರು ರಾಜಮೌಳಿ ನಿರ್ದೇಶನದ 'SSMB29' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೈದರಾಬಾದ್ ನಂತರ ಚಿತ್ರತಂಡ ಒಡಿಶಾಕ್ಕೆ ತೆರಳಿದೆ. ಅಲ್ಲಿ 12 ದಿನಗಳ ಚಿತ್ರೀಕರಣ ನಡೆಯಲಿದೆ. ಏಪ್ರಿಲ್‌ನಲ್ಲಿ ಚಿತ್ರದ ಅಧಿಕೃತ ಘೋಷಣೆ ಮತ್ತು ಟೀಸರ್ ಬಿಡುಗಡೆ ನಿರೀಕ್ಷಿಸಲಾಗಿದೆ .

ಪ್ರಮುಖ ದೃಶ್ಯ ಶೂಟ್ ಮಾಡಲು ಒಡಿಶಾಗೆ ಹಾರಿದ ಮಹೇಶ್ ಬಾಬು-ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ-ಮಹೇಶ್ ಬಾಬು
Follow us
ರಾಜೇಶ್ ದುಗ್ಗುಮನೆ
|

Updated on:Mar 06, 2025 | 10:34 AM

ಮಹೇಶ್ ಬಾಬು ಹಾಗೂ ಪ್ರಿಯಾಂಕಾ ಚೋಪ್ರಾ ಅವರು ‘SSMB29’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ರಾಜಮೌಳಿ (SS Rajamouli) ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಅಧಿಕೃತ ಘೋಷಣೆ ಇನ್ನೂ ಆಗದೇ ಇದ್ದರೂ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದ ಮೊದಲ ಹಂತದ ಶೂಟ್ ಹೈದರಾಬಾದ್​ನಲ್ಲೇ ನಡೆದಿದೆ. ಎರಡನೇ ಹಂತದ ಶೂಟ್​ಗಾಗಿ ಇಡೀ ತಂಡ ಒಡಿಶಾಗೆ ತೆರಳಿದೆ. ಪ್ರಮುಖ ದೃಶ್ಯಗಳ ಶೂಟ್ ಇಲ್ಲಿ ನಡೆಯಲಿದೆ ಎಂದು ವರದಿ ಆಗಿದೆ.

ರಾಜಮೌಳಿ ಅವರು ಪ್ರತಿ ಸಿನಿಮಾ ಮಾಡುವ ಮೊದಲು ಅಧಿಕೃತ ಘೋಷಣೆ ಮಾಡುತ್ತಾರೆ. ಆದರೆ, ಈ ಬಾರಿ ಅವರು ಯಾವುದೇ ಮಾಹಿತಿ ನೀಡದೇ ಶೂಟ್ ಆರಂಭಿಸಿದ್ದಾರೆ. ಹೈದರಾಬಾದ್​ನ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಮೊದಲ ಹಂತದ ಶೂಟ್ ಮಾಡಿದ್ದ ಅವರು, ಈಗ ಒಡಿಶಾದಲ್ಲಿ ಶೂಟ್ ಮಾಡೋಕೆ ರೆಡಿ ಆಗಿದ್ದಾರೆ.

ಒಡಿಶಾದ ಕೊರಾಪುಟ್ ಎಂಬಲ್ಲಿ ಮುಂದಿನ 12 ದಿನ ಚಿತ್ರೀಕರಣ ನಡೆಯಲಿದೆ. ಮಹೇಶ್ ಬಾಬು ಹಾಗೂ ಪ್ರಿಯಾಂಕಾ ಚೋಪ್ರಾ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ. ಇವೆಲ್ಲವೂ ಪ್ರಮುಖ ದೃಶ್ಯಗಳೇ ಆಗಿವೆ ಎನ್ನಲಾಗಿದೆ. ಹಾಲಿವುಡ್​ನಲ್ಲಿ ಸೆಟಲ್ ಆಗಿರೋ ಪ್ರಿಯಾಂಕಾ ಚೋಪ್ರಾ, ಈ ಸಿನಿಮಾದ ಶೂಟ್​ಗಾಗಿ ಭಾರತಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ
Image
ಮಹೇಶ್ ಬಾಬು-ರಾಜಮೌಳಿ ಬಗ್ಗೆ ಅಪ್ಸೆಟ್​ ಆದ ಅಭಿಮಾನಿಗಳು; ಕಾರಣ ಏನು?
Image
ಆಫರ್ ಸಿಗದೇ ಬಾಲಿವುಡ್ ತೊರೆದಿದ್ದ ಪ್ರಿಯಾಂಕಾ? ಇದರಲ್ಲಿ ಸತ್ಯ ಎಷ್ಟು?
Image
ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ?
Image
ಎರಡು ಭಾಗದಲ್ಲಿ ಬರಲಿದೆ ಮಹೇಶ್​ಬಾಬು-ರಾಜಮೌಳಿ ಸಿನಿಮಾ; ಅಭಿಮಾನಿಗಳಿಗೆ ಬೇಸರ

ಏಪ್ರಿಲ್​ನಲ್ಲಿ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಟೀಸರ್ ರಿಲೀಸ್ ಮಾಡುವ ಮೂಲಕ ಚಿತ್ರದ ಹೈಪ್ ಹೆಚ್ಚಿಸೋ ಆಲೋಚನೆ ತಂಡದ್ದು. ಇದಾದ ಬಳಿಕ ಕೀನಾ ಹಾಗೂ ದಕ್ಷಿಣ ಆಫ್ರಿಕಾದ ವಿವಿಧ ಕಡೆಗಳಲ್ಲಿ ಶೂಟಿಂಗ್ ನಡೆಯಲಿದೆ. ಕಾಡುಗಳಲ್ಲಿ ಈ ಚಿತ್ರದ ಅಡ್ವೆಂಚರ್ ನಡೆಯಲಿದೆ.

ರಾಜಮೌಳಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ‘ಆರ್​ಆರ್​ಆರ್​’ ಚಿತ್ರದಲ್ಲಿ ರಾಜಮೌಳಿ ಆಸ್ಕರ್ ಕೂಡ ಗೆದ್ದು ಸದ್ದು ಮಾಡಿದರು. ಹೀಗಾಗಿ, ಹಾಲಿವುಡ್​ನಲ್ಲಿ ಅವರಿಗೆ ಮಾರುಕಟ್ಟೆ ಸೃಷ್ಟಿ ಆಗಿದೆ. ಕೆಎಲ್ ನಯನ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. ಇದನ್ನೂ ಓದಿ:

Published On - 8:42 am, Thu, 6 March 25

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್