AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮುಖ ದೃಶ್ಯ ಶೂಟ್ ಮಾಡಲು ಒಡಿಶಾಗೆ ಹಾರಿದ ಮಹೇಶ್ ಬಾಬು-ಪ್ರಿಯಾಂಕಾ ಚೋಪ್ರಾ

ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಅವರು ರಾಜಮೌಳಿ ನಿರ್ದೇಶನದ 'SSMB29' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೈದರಾಬಾದ್ ನಂತರ ಚಿತ್ರತಂಡ ಒಡಿಶಾಕ್ಕೆ ತೆರಳಿದೆ. ಅಲ್ಲಿ 12 ದಿನಗಳ ಚಿತ್ರೀಕರಣ ನಡೆಯಲಿದೆ. ಏಪ್ರಿಲ್‌ನಲ್ಲಿ ಚಿತ್ರದ ಅಧಿಕೃತ ಘೋಷಣೆ ಮತ್ತು ಟೀಸರ್ ಬಿಡುಗಡೆ ನಿರೀಕ್ಷಿಸಲಾಗಿದೆ .

ಪ್ರಮುಖ ದೃಶ್ಯ ಶೂಟ್ ಮಾಡಲು ಒಡಿಶಾಗೆ ಹಾರಿದ ಮಹೇಶ್ ಬಾಬು-ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ-ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on:Mar 06, 2025 | 10:34 AM

Share

ಮಹೇಶ್ ಬಾಬು ಹಾಗೂ ಪ್ರಿಯಾಂಕಾ ಚೋಪ್ರಾ ಅವರು ‘SSMB29’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ರಾಜಮೌಳಿ (SS Rajamouli) ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಅಧಿಕೃತ ಘೋಷಣೆ ಇನ್ನೂ ಆಗದೇ ಇದ್ದರೂ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದ ಮೊದಲ ಹಂತದ ಶೂಟ್ ಹೈದರಾಬಾದ್​ನಲ್ಲೇ ನಡೆದಿದೆ. ಎರಡನೇ ಹಂತದ ಶೂಟ್​ಗಾಗಿ ಇಡೀ ತಂಡ ಒಡಿಶಾಗೆ ತೆರಳಿದೆ. ಪ್ರಮುಖ ದೃಶ್ಯಗಳ ಶೂಟ್ ಇಲ್ಲಿ ನಡೆಯಲಿದೆ ಎಂದು ವರದಿ ಆಗಿದೆ.

ರಾಜಮೌಳಿ ಅವರು ಪ್ರತಿ ಸಿನಿಮಾ ಮಾಡುವ ಮೊದಲು ಅಧಿಕೃತ ಘೋಷಣೆ ಮಾಡುತ್ತಾರೆ. ಆದರೆ, ಈ ಬಾರಿ ಅವರು ಯಾವುದೇ ಮಾಹಿತಿ ನೀಡದೇ ಶೂಟ್ ಆರಂಭಿಸಿದ್ದಾರೆ. ಹೈದರಾಬಾದ್​ನ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಮೊದಲ ಹಂತದ ಶೂಟ್ ಮಾಡಿದ್ದ ಅವರು, ಈಗ ಒಡಿಶಾದಲ್ಲಿ ಶೂಟ್ ಮಾಡೋಕೆ ರೆಡಿ ಆಗಿದ್ದಾರೆ.

ಒಡಿಶಾದ ಕೊರಾಪುಟ್ ಎಂಬಲ್ಲಿ ಮುಂದಿನ 12 ದಿನ ಚಿತ್ರೀಕರಣ ನಡೆಯಲಿದೆ. ಮಹೇಶ್ ಬಾಬು ಹಾಗೂ ಪ್ರಿಯಾಂಕಾ ಚೋಪ್ರಾ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ. ಇವೆಲ್ಲವೂ ಪ್ರಮುಖ ದೃಶ್ಯಗಳೇ ಆಗಿವೆ ಎನ್ನಲಾಗಿದೆ. ಹಾಲಿವುಡ್​ನಲ್ಲಿ ಸೆಟಲ್ ಆಗಿರೋ ಪ್ರಿಯಾಂಕಾ ಚೋಪ್ರಾ, ಈ ಸಿನಿಮಾದ ಶೂಟ್​ಗಾಗಿ ಭಾರತಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ
Image
ಮಹೇಶ್ ಬಾಬು-ರಾಜಮೌಳಿ ಬಗ್ಗೆ ಅಪ್ಸೆಟ್​ ಆದ ಅಭಿಮಾನಿಗಳು; ಕಾರಣ ಏನು?
Image
ಆಫರ್ ಸಿಗದೇ ಬಾಲಿವುಡ್ ತೊರೆದಿದ್ದ ಪ್ರಿಯಾಂಕಾ? ಇದರಲ್ಲಿ ಸತ್ಯ ಎಷ್ಟು?
Image
ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ?
Image
ಎರಡು ಭಾಗದಲ್ಲಿ ಬರಲಿದೆ ಮಹೇಶ್​ಬಾಬು-ರಾಜಮೌಳಿ ಸಿನಿಮಾ; ಅಭಿಮಾನಿಗಳಿಗೆ ಬೇಸರ

ಏಪ್ರಿಲ್​ನಲ್ಲಿ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಟೀಸರ್ ರಿಲೀಸ್ ಮಾಡುವ ಮೂಲಕ ಚಿತ್ರದ ಹೈಪ್ ಹೆಚ್ಚಿಸೋ ಆಲೋಚನೆ ತಂಡದ್ದು. ಇದಾದ ಬಳಿಕ ಕೀನಾ ಹಾಗೂ ದಕ್ಷಿಣ ಆಫ್ರಿಕಾದ ವಿವಿಧ ಕಡೆಗಳಲ್ಲಿ ಶೂಟಿಂಗ್ ನಡೆಯಲಿದೆ. ಕಾಡುಗಳಲ್ಲಿ ಈ ಚಿತ್ರದ ಅಡ್ವೆಂಚರ್ ನಡೆಯಲಿದೆ.

ರಾಜಮೌಳಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ‘ಆರ್​ಆರ್​ಆರ್​’ ಚಿತ್ರದಲ್ಲಿ ರಾಜಮೌಳಿ ಆಸ್ಕರ್ ಕೂಡ ಗೆದ್ದು ಸದ್ದು ಮಾಡಿದರು. ಹೀಗಾಗಿ, ಹಾಲಿವುಡ್​ನಲ್ಲಿ ಅವರಿಗೆ ಮಾರುಕಟ್ಟೆ ಸೃಷ್ಟಿ ಆಗಿದೆ. ಕೆಎಲ್ ನಯನ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. ಇದನ್ನೂ ಓದಿ:

Published On - 8:42 am, Thu, 6 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?