AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮುಖ ದೃಶ್ಯ ಶೂಟ್ ಮಾಡಲು ಒಡಿಶಾಗೆ ಹಾರಿದ ಮಹೇಶ್ ಬಾಬು-ಪ್ರಿಯಾಂಕಾ ಚೋಪ್ರಾ

ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಅವರು ರಾಜಮೌಳಿ ನಿರ್ದೇಶನದ 'SSMB29' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೈದರಾಬಾದ್ ನಂತರ ಚಿತ್ರತಂಡ ಒಡಿಶಾಕ್ಕೆ ತೆರಳಿದೆ. ಅಲ್ಲಿ 12 ದಿನಗಳ ಚಿತ್ರೀಕರಣ ನಡೆಯಲಿದೆ. ಏಪ್ರಿಲ್‌ನಲ್ಲಿ ಚಿತ್ರದ ಅಧಿಕೃತ ಘೋಷಣೆ ಮತ್ತು ಟೀಸರ್ ಬಿಡುಗಡೆ ನಿರೀಕ್ಷಿಸಲಾಗಿದೆ .

ಪ್ರಮುಖ ದೃಶ್ಯ ಶೂಟ್ ಮಾಡಲು ಒಡಿಶಾಗೆ ಹಾರಿದ ಮಹೇಶ್ ಬಾಬು-ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ-ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on:Mar 06, 2025 | 10:34 AM

Share

ಮಹೇಶ್ ಬಾಬು ಹಾಗೂ ಪ್ರಿಯಾಂಕಾ ಚೋಪ್ರಾ ಅವರು ‘SSMB29’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ರಾಜಮೌಳಿ (SS Rajamouli) ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಅಧಿಕೃತ ಘೋಷಣೆ ಇನ್ನೂ ಆಗದೇ ಇದ್ದರೂ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದ ಮೊದಲ ಹಂತದ ಶೂಟ್ ಹೈದರಾಬಾದ್​ನಲ್ಲೇ ನಡೆದಿದೆ. ಎರಡನೇ ಹಂತದ ಶೂಟ್​ಗಾಗಿ ಇಡೀ ತಂಡ ಒಡಿಶಾಗೆ ತೆರಳಿದೆ. ಪ್ರಮುಖ ದೃಶ್ಯಗಳ ಶೂಟ್ ಇಲ್ಲಿ ನಡೆಯಲಿದೆ ಎಂದು ವರದಿ ಆಗಿದೆ.

ರಾಜಮೌಳಿ ಅವರು ಪ್ರತಿ ಸಿನಿಮಾ ಮಾಡುವ ಮೊದಲು ಅಧಿಕೃತ ಘೋಷಣೆ ಮಾಡುತ್ತಾರೆ. ಆದರೆ, ಈ ಬಾರಿ ಅವರು ಯಾವುದೇ ಮಾಹಿತಿ ನೀಡದೇ ಶೂಟ್ ಆರಂಭಿಸಿದ್ದಾರೆ. ಹೈದರಾಬಾದ್​ನ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಮೊದಲ ಹಂತದ ಶೂಟ್ ಮಾಡಿದ್ದ ಅವರು, ಈಗ ಒಡಿಶಾದಲ್ಲಿ ಶೂಟ್ ಮಾಡೋಕೆ ರೆಡಿ ಆಗಿದ್ದಾರೆ.

ಒಡಿಶಾದ ಕೊರಾಪುಟ್ ಎಂಬಲ್ಲಿ ಮುಂದಿನ 12 ದಿನ ಚಿತ್ರೀಕರಣ ನಡೆಯಲಿದೆ. ಮಹೇಶ್ ಬಾಬು ಹಾಗೂ ಪ್ರಿಯಾಂಕಾ ಚೋಪ್ರಾ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ. ಇವೆಲ್ಲವೂ ಪ್ರಮುಖ ದೃಶ್ಯಗಳೇ ಆಗಿವೆ ಎನ್ನಲಾಗಿದೆ. ಹಾಲಿವುಡ್​ನಲ್ಲಿ ಸೆಟಲ್ ಆಗಿರೋ ಪ್ರಿಯಾಂಕಾ ಚೋಪ್ರಾ, ಈ ಸಿನಿಮಾದ ಶೂಟ್​ಗಾಗಿ ಭಾರತಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ
Image
ಮಹೇಶ್ ಬಾಬು-ರಾಜಮೌಳಿ ಬಗ್ಗೆ ಅಪ್ಸೆಟ್​ ಆದ ಅಭಿಮಾನಿಗಳು; ಕಾರಣ ಏನು?
Image
ಆಫರ್ ಸಿಗದೇ ಬಾಲಿವುಡ್ ತೊರೆದಿದ್ದ ಪ್ರಿಯಾಂಕಾ? ಇದರಲ್ಲಿ ಸತ್ಯ ಎಷ್ಟು?
Image
ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ?
Image
ಎರಡು ಭಾಗದಲ್ಲಿ ಬರಲಿದೆ ಮಹೇಶ್​ಬಾಬು-ರಾಜಮೌಳಿ ಸಿನಿಮಾ; ಅಭಿಮಾನಿಗಳಿಗೆ ಬೇಸರ

ಏಪ್ರಿಲ್​ನಲ್ಲಿ ಚಿತ್ರದ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಟೀಸರ್ ರಿಲೀಸ್ ಮಾಡುವ ಮೂಲಕ ಚಿತ್ರದ ಹೈಪ್ ಹೆಚ್ಚಿಸೋ ಆಲೋಚನೆ ತಂಡದ್ದು. ಇದಾದ ಬಳಿಕ ಕೀನಾ ಹಾಗೂ ದಕ್ಷಿಣ ಆಫ್ರಿಕಾದ ವಿವಿಧ ಕಡೆಗಳಲ್ಲಿ ಶೂಟಿಂಗ್ ನಡೆಯಲಿದೆ. ಕಾಡುಗಳಲ್ಲಿ ಈ ಚಿತ್ರದ ಅಡ್ವೆಂಚರ್ ನಡೆಯಲಿದೆ.

ರಾಜಮೌಳಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ‘ಆರ್​ಆರ್​ಆರ್​’ ಚಿತ್ರದಲ್ಲಿ ರಾಜಮೌಳಿ ಆಸ್ಕರ್ ಕೂಡ ಗೆದ್ದು ಸದ್ದು ಮಾಡಿದರು. ಹೀಗಾಗಿ, ಹಾಲಿವುಡ್​ನಲ್ಲಿ ಅವರಿಗೆ ಮಾರುಕಟ್ಟೆ ಸೃಷ್ಟಿ ಆಗಿದೆ. ಕೆಎಲ್ ನಯನ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. ಇದನ್ನೂ ಓದಿ:

Published On - 8:42 am, Thu, 6 March 25

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?