AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ಬಣ್ಣದ ಐಶಾರಾಮಿ ಕಾರು ಖರೀದಿಸಿದ ಮಹೇಶ್ ಬಾಬು: ಬೆಲೆ ಎಷ್ಟು ಗೊತ್ತೆ?

Mahesh Babu: ನಟ ಮಹೇಶ್ ಬಾಬು ಹೊಸ ರೇಂಜ್ ರೋವರ್ ಕಾರು ಖರೀದಿಸಿದ್ದಾರೆ. ಬೆಲೆ ಎಷ್ಟು ಗೊತ್ತೆ?

ಚಿನ್ನದ ಬಣ್ಣದ ಐಶಾರಾಮಿ ಕಾರು ಖರೀದಿಸಿದ ಮಹೇಶ್ ಬಾಬು: ಬೆಲೆ ಎಷ್ಟು ಗೊತ್ತೆ?
ಮಹೇಶ್ ಬಾಬು
ಮಂಜುನಾಥ ಸಿ.
|

Updated on: Aug 05, 2023 | 10:01 PM

Share

ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟರಲ್ಲಿ ಮಹೇಶ್ ಬಾಬು (Mahesh Babu) ಸಹ ಒಬ್ಬರು. ಸಿನಿಮಾ ನಟನೆ ಜೊತೆಗೆ ಹಲವು ಜನಪ್ರಿಯ ಬ್ರ್ಯಾಂಡ್​ಗಳ ಜಾಹೀರಾತುಗಳಿಗೂ ಅವರು ಬೇಡಿಕೆಯ ನಟರು. ವರ್ಷಕ್ಕೆ ಒಂದು ಹೆಚ್ಚೆಂದರೆ ಎರಡನೇ ಸಿನಿಮಾ ಮಾಡಿದರೂ ಸಹ ಭಾರಿ ದೊಡ್ಡ ಸಂಭಾವನೆಯನ್ನೇ (remuneration) ಮಹೇಶ್ ಪಡೆಯುತ್ತಾರೆ. ಸಂಭಾವನೆಯ ಗಾತ್ರಕ್ಕೆ ತಕ್ಕಂತೆ ಅವರ ಜೀವನ ಶೈಲಿಯೂ ಇದೆ. ಅವರ ದೊಡ್ಡ ಸಂಭಾವನೆಗೆ ತಕ್ಕಂತೆ ಭಾರಿ ಮೊತ್ತದ ಕಾರ್ ಒಂದನ್ನು ನಟ ಮಹೇಶ್ ಬಾಬು ಖರೀದಿ ಮಾಡಿದ್ದಾರೆ.

ಮಹೇಶ್ ಬಾಬು ಇತ್ತೀಚೆಗಷ್ಟೆ ರೇಂಜ್ ರೋವರ್ ಕಾರು ಖರೀದಿಸಿದ್ದಾರೆ. ಸಾಮಾನ್ಯವಾಗಿ ಎಲ್ಲರೂ ಗ್ರಾಫೈಟ್ ಬ್ಲ್ಯಾಕ್, ಬ್ಲ್ಯಾಕ್, ಬಿಳಿ ಬಣ್ಣದ ರೇಂಜ್ ರೋವರ್ ಕಾರು ಖರೀದಿ ಮಾಡಿದರೆ, ಮಹೇಶ್ ಬಾಬು ಮಾತ್ರ ಚಿನ್ನದ ಬಣ್ಣದ ರೇಂಜ್ ರೋವರ್ ಖರೀದಿ ಮಾಡಿದ್ದಾರೆ. ಈ ಕಾರಿಗೆ ಬರೋಬ್ಬರಿ 5.4 ಕೋಟಿ ರೂಪಾಯಿ ತೆತ್ತಿದ್ದಾರೆ ಮಹೇಶ್ ಬಾಬು. ರೇಂಜ್ ರೋವರ್ ನ ಮಾದರಿಗಳಲ್ಲಿಯೇ ಅತ್ಯಂತ ದುಬಾರಿ ಮಾದರಿಯ ಕಾರು ಇದಾಗಿದೆ.

ಇದನ್ನೂ ಓದಿ:ಮುಂಚೆಯೇ ಒಂದೇ ಸಿನಿಮಾದಲ್ಲಿ ಕೆಲಸ ಮಾಡಿದ್ದರು ಮಹೇಶ್ ಬಾಬು-ರಾಜಮೌಳಿ: ಯಾವುದು ಆ ಸಿನಿಮಾ?

ಮಹೇಶ್ ಬಾಬು ಮಾತ್ರವೇ ಅಲ್ಲದೆ ತೆಲುಗಿನ ಇತರೆ ಕೆಲವು ನಟರ ಮೆಚ್ಚಿನ ಕಾರು ರೇಂಜ್ ರೋವರ್ ಆಗಿದೆ. ನಟ ಚಿರಂಜೀವಿ, ಜೂ ಎನ್​ಟಿಆರ್, ನಾಗ ಚೈತನ್ಯ ಇತರೆ ಕೆಲವು ನಟರುಗಳ ಬಳಿ ರೇಂಜ್ ರೋವರ್ ಕಾರು ಇದೆ. ಆದರೆ ಯಾರ ಬಳಿಯೂ ಚಿನ್ನದ ಬಣ್ಣದ, ಇಷ್ಟು ಅಡ್ವಾನ್ಸ್ ತಂತ್ರಜ್ಞಾನವುಳ್ಳ ರೇಂಜ್ ರೋವರ್ ಕಾರು ಇಲ್ಲ. ಸ್ವತಃ ಮಹೇಶ್ ಬಾಬು ಬಳಿ ರೇಂಜ್ ರೋವರ್ ವೋಗ್ ಮಾದರಿ ಕಾರು ಇದೆ. ಅದರ ಜೊತೆಗೆ ಈಗ ಗೋಲ್ಡ್ ಎಡಿಷನ್ ಕಾರನ್ನು ಖರೀದಿ ಮಾಡಿದ್ದಾರೆ.

ಮಹೇಶ್ ಬಾಬು ಬಳಿ ಹಲವು ಐಶಾರಾಮಿ ಕಾರುಗಳಿವೆ. ರೋಲ್ಸ್ ರಾಯ್ಸ್ ಗೋಸ್ಟ್, ಆಡಿ 7, ಬಿಎಂಡಬ್ಲು 7, ರೋಲ್ಸ್ ರಾಯ್ಸ್ ವೋಗ್, ಬೆಂಜ್ ಎಸ್ ಕ್ಲಾಸ್, ಇನ್ನೋವಾ ಕ್ರಿಸ್ಟಾ ಕಾರುಗಳಿವೆ. ಇವುಗಳ ಜೊತೆಗೆ ಈಗ ರೇಂಜ್ ರೋವರ್ ಹೊಸ ಕಾರು ಸಹ ಸೇರ್ಪಡೆಯಾಗಿದೆ.

ಮಹೇಶ್ ಬಾಬು ಐಶಾರಾಮಿ ಜೀವನ ನಡೆಸುವ ನಟ. ಶೂಟಿಂಗ್ ಇಲ್ಲದ ಸಮಯವನ್ನು ಕುಟುಂಬದೊಟ್ಟಿಗೆ ಬಹುತೇಕ ಹೊರದೇಶದಲ್ಲಿಯೇ ಕಳೆಯುತ್ತಾರೆ ಮಹೇಶ್ ಬಾಬು. ಮಹೇಶ್ ಬಾಬು ಅವರ ಇಬ್ಬರು ಮಕ್ಕಳ ವಿದ್ಯಾಭ್ಯಾಸ ನಡೆಯುತ್ತಿರುವುದು ಸಹ ವಿದೇಶದಲ್ಲಿಯೇ. ವಿದೇಶದಲ್ಲಿ ಐಶಾರಾಮಿ ಮನೆಯನ್ನು ಸಹ ಮಹೇಶ್ ಬಾಬು ಹೊಂದಿದ್ದಾರೆ. ಅಂತೆಯೇ ಹೈದರಾಬಾದ್​ನಲ್ಲಿ ಸಹ ಭಾರಿ ಬಂಗಲೆಯೊಂದನ್ನು ಮಹೇಶ್ ಹೊಂದಿದ್ದಾರೆ.

ಸಿನಿಮಾಗಳ ವಿಷಯಕ್ಕೆ ಬರುವುದಾದರೆ ಮಹೇಶ್ ಬಾಬು ಪ್ರಸ್ತುತ ‘ಗುಂಟೂರು ಖಾರಂ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾವನ್ನು ತೆಲುಗಿನ ಜನಪ್ರಿಯ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕತೆಯಲ್ಲಿ ತಿದ್ದುಪಡಿಗಳ ಕಾರಣದಿಂದಾಗಿ ಸಿನಿಮಾದ ಚಿತ್ರೀಕರಣ ನಿರೀಕ್ಷೆಗಿಂತಲೂ ತಡವಾಗಿ ನಡೆಯುತ್ತಿದೆ. ‘ಗುಂಟೂರು ಖಾರಂ’ ಸಿನಿಮಾದ ಬಿಡುಗಡೆ ಬಳಿಕ ಮಹೇಶ್ ಬಾಬು, ರಾಜಮೌಳಿ ಜೊತೆಗಿನ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಆ ಸಿನಿಮಾದ ಮೇಲೆ ವಿಶ್ವದ ಸಿನಿಮಾ ಪ್ರೇಮಿಗಳು ನಿರೀಕ್ಷೆ ಇರಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ