AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

120 ದೇಶಗಳಲ್ಲಿ ಬಿಡುಗಡೆ ಆಗಲಿದೆ ಮಹೇಶ್ ಬಾಬು-ರಾಜಮೌಳಿ ಸಿನಿಮಾ

Mahesh Babu-SS Rajamouli: ಮಹೇಶ್ ಬಾಬು ನಟಿಸಿ ರಾಜಮೌಳಿ ನಿರ್ದೇಶನ ಮಾಡುತ್ತಿರುವ ಸಿನಿಮಾ ವಿಶ್ವ ಮಟ್ಟದಲ್ಲಿ ಅತ್ಯಂತ ನಿರೀಕ್ಷಿತ ಸಿನಿಮಾ. ಈ ಸಿನಿಮಾ ಮೂಲಕ ಭಾರತೀಯ ಸಿನಿಮಾ ಅನ್ನು ವಿಶ್ವಕ್ಕೆ ತಲುಪಿಸುವ ಪ್ರಯತ್ನವನ್ನು ರಾಜಮೌಳಿ ಮಾಡುತ್ತಿದ್ದಾರೆ. 120ಕ್ಕೂ ಹೆಚ್ಚು ದೇಶಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

120 ದೇಶಗಳಲ್ಲಿ ಬಿಡುಗಡೆ ಆಗಲಿದೆ ಮಹೇಶ್ ಬಾಬು-ರಾಜಮೌಳಿ ಸಿನಿಮಾ
Ss Rajamuli
ಮಂಜುನಾಥ ಸಿ.
|

Updated on: Sep 03, 2025 | 11:17 AM

Share

ರಾಜಮೌಳಿ (Rajamouli) ನಿರ್ದೇಶಿಸಿ ಮಹೇಶ್ ಬಾಬು (Mahesh Babu) ನಟಿಸಿರುವ ಸಿನಿಮಾದ ಶೂಟಿಂಗ್ ಭರದಿಂದ ಸಾಗಿದೆ. ವಿಶ್ವ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿರುವ ಸಿನಿಮಾಗಳಲ್ಲಿ ಇದು ಸಹ ಒಂದಾಗಿದ್ದು, ಈ ಸಿನಿಮಾ ಈ ವರೆಗಿನ ಭಾರತದ ಅತಿ ದೊಡ್ಡ ಬಜೆಟ್ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಚಿತ್ರೀಕರಣ ಹೈದರಾಬಾದ್, ರಾಜಸ್ಥಾನಗಳ ಬಳಿಕ ಈಗ ಕೀನ್ಯಾನಲ್ಲಿ ನಡೆಯುತ್ತಿದ್ದು, ಇತ್ತೀಚೆಗಷ್ಟೆ ಕೀನ್ಯಾ ಅಧ್ಯಕ್ಷರನ್ನು ಸಹ ರಾಜಮೌಳಿ ಭೇಟಿ ಮಾಡಿದರು.

ಕೀನ್ಯಾದ ನಿಜ ಅರಣ್ಯದಲ್ಲಿ, ವನ್ಯ ಜೀವಿಗಳ ನಡುವೆ ರಾಜಮೌಳಿ, ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ಸಹ ನಟಿಸುತ್ತಿದ್ದು ಅವರೂ ಸಹ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಕೀನ್ಯಾದ ಶೂಟಿಂಗ್ ಶೆಡ್ಯೂಲ್ ಅನ್ನು ರಾಜಮೌಳಿ ಮತ್ತು ತಂಡ ಮುಗಿಸಿದೆ ಎನ್ನಲಾಗುತ್ತಿದೆ. ಅದರ ಬೆನ್ನಲ್ಲೆ ರಾಜಮೌಳಿ ಹಾಗೂ ಅವರ ಪುತ್ರ ಕಾರ್ತಿಕೇಯ ಅವರುಗಳು ಭೇಟಿ ಮಾಡಿದ್ದಾರೆ.

ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಅಲ್ಲ, ಪ್ಯಾನ್ ವರ್ಲ್ಡ್ ಲೆವೆಲ್​​​ನಲ್ಲಿ ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾ ಭಾರತೀಯ ಭಾಷೆಗಳಲ್ಲಿ ಮಾತ್ರವೇ ಅಲ್ಲದೆ ಇಂಗ್ಲೀಷ್​​ನಲ್ಲಿಯೂ ನಿರ್ಮಾಣಗೊಳ್ಳಲಿದೆ ಹಾಗೂ ವಿಶ್ವದಾದ್ಯಂತ 120ಕ್ಕೂ ಹೆಚ್ಚು ದೇಶಗಳಲ್ಲಿ ಏಕಕಾಲಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಅಲ್ಲಿಗೆ ವಿಶ್ವದ ಮುಕ್ಕಾಲುವಾಸಿ ದೇಶಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುವುದು ಬಹುತೇಕ ಖಾತ್ರಿ ಆಗಿದೆ.

ಇದನ್ನೂ ಓದಿ: ಬಾಲಿವುಡ್​ ಮೇಲೆ ಮುನಿಸಿಕೊಂಡ ರಾಜಮೌಳಿ? ಕಾರಣ ಏನು?

‘ಬಾಹುಬಲಿ’, ‘ಆರ್​ಆರ್ಆರ್’ ಸಿನಿಮಾಗಳು ಹಲವಾರು ಪ್ರಮುಖ ದೇಶಗಳಲ್ಲಿ ಬಿಡುಗಡೆ ಆಗಿದ್ದವು. ಈಗ ಮಹೇಶ್ ಬಾಬು-ರಾಜಮೌಳಿ ಕಾಂಬಿನೇಷನ್​​ನ ಸಿನಿಮಾ ಭಾರತೀಯ ಸಿನಿಮಾದ ರೀಚ್ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಮುಂದಾಗಿದೆ. ‘ಬಾಹುಬಲಿ’ ಮೂಲಕ ಪ್ಯಾನ್ ಇಂಡಿಯಾ, ‘ಆರ್​​ಆರ್​​ಆರ್’ ಮೂಲಕ ಪ್ಯಾನ್ ವರ್ಲ್ಡ್​ಗೆ ಸಿನಿಮಾ ಅನ್ನು ರೀಚ್ ಮಾಡಿಸಿದ್ದ ರಾಜಮೌಳಿ ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಇದರಿಂದ ಭಾರತೀಯ ಸಿನಿಮಾಗಳಿಗೆ ವಿಶ್ವ ಮಟ್ಟದಲ್ಲಿ ಬೇಡಿಕೆ ಇನ್ನಷ್ಟು ಹೆಚ್ಚಾಗಲಿದೆ.

ಮಹೇಶ್ ಬಾಬು ನಟಿಸಿ, ರಾಜಮೌಳಿ ನಿರ್ದೇಶನ ಮಾಡುತ್ತಿರುವ ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ, ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾನಲ್ಲಿ ಕೆಲ ಹೆಸರಾಂತ ಹಾಲಿವುಡ್ ನಟರೂ ಸಹ ಇದ್ದಾರೆ. ಕೆಲವು ಹೆಸರಾಂತ ಹಾಲಿವುಡ್ ತಂತ್ರಜ್ಞರು ಸಹ ಈ ಸಿನಿಮಾಕ್ಕಾಗಿ ಕೆಲಸ ಮಾಡಿದ್ದಾರೆ. ಸಿನಿಮಾವು ಅಡ್ವೇಂಚರ್ ಆಕ್ಷನ್ ಥ್ರಿಲ್ಲರ್ ಜಾನರ್​​ಗೆ ಸೇರಿದ ಸಿನಿಮಾ ಆಗಿದೆ. ‘ಇಂಡಿಯಾನಾ ಜೋನ್ಸ್‘, ‘ಮಿಷನ್ ಇಂಪಾಸಿಬಲ್’ ಮಾದರಿಯಲ್ಲಿ ನಾಯಕ ಒಂದು ಮಿಷನ್​​ಗಾಗಿ ಬೇರೆ ಬೇರೆ ದೇಶಗಳಿಗೆ ಪ್ರಯಾಣಿಸುವ ಅಲ್ಲಿ ಎದುರಾಗುವ ಸಂಕಷ್ಟಗಳನ್ನು ಬುದ್ಧಿಬಲ, ತೋಳ್ಬಲಗಳಿಂದ ಎದುರಿಸಿ ಗೆದ್ದು ಬರುವ ಕತೆ ಸಿನಿಮಾನಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ