AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?

Mahesh Babu | SS Rajamouli: ಮಹೇಶ್​ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಸೆಟ್ಟೇರುವುದಕ್ಕೂ ಮುನ್ನವೇ ಅಂತೆ-ಕಂತೆಗಳು ಕೇಳಿಬರಲು ಆರಂಭ ಆಗಿದೆ.

‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?
ಮಹೇಶ್ ಬಾಬು, ರಾಜಮೌಳಿ
Follow us
TV9 Web
| Updated By: ಮದನ್​ ಕುಮಾರ್​

Updated on: Jul 07, 2022 | 7:15 AM

ಯಶಸ್ವಿ ನಿರ್ದೇಶಕ ರಾಜಮೌಳಿ (SS Rajamouli) ಅವರ ಜೊತೆ ಕೆಲಸ ಮಾಡಲು ಎಲ್ಲ ಹೀರೋಗಳು ನಾಮುಂದು ತಾಮುಂದು ಎನ್ನುತ್ತಾರೆ. ಯಾಕೆಂದರೆ, ರಾಜಮೌಳಿ ನಿರ್ದೇಶನದ ಚಿತ್ರದಲ್ಲಿ ನಟಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುದು ಎಲ್ಲರಿಗೂ ತಿಳಿದಿದೆ. ಈವರೆಗೂ ರಾಜಮೌಳಿ ಸೋತಿದ್ದೇ ಇಲ್ಲ. ಅವರ ಸಿನಿಮಾಗಳು ವಿಶ್ವಮಟ್ಟದಲ್ಲಿ ಸೌಂಡು ಮಾಡುತ್ತವೆ. ಈ ವರ್ಷ ತೆರೆಕಂಡ ‘ಆರ್​ಆರ್​ಆರ್​’ (RRR) ಚಿತ್ರ ಬ್ಲಾಕ್​ಬಸ್ಟರ್​ ಹಿಟ್​ ಆಯಿತು. ಈ ಸಿನಿಮಾದಿಂದ ಜ್ಯೂ. ಎನ್​ಟಿಆರ್​ ಹಾಗೂ ರಾಮ್​ ಚರಣ್​ ಅವರಿಗೆ ಭರ್ಜರಿ ಗೆಲುವು ಸಿಕ್ಕಿದೆ. ರಾಜಮೌಳಿ ಅವರು ನಿರ್ದೇಶನ ಮಾಡಲಿರುವ ಮುಂದಿನ ಸಿನಿಮಾ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಟಾಲಿವುಡ್​ ‘ಪ್ರಿನ್ಸ್​’ ಮಹೇಶ್​ ಬಾಬು (Mahesh Babu) ಜೊತೆ ಅವರು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಪ್ರಾಜೆಕ್ಟ್​ ಕುರಿತು ಕೆಲವು ಇಂಟರೆಸ್ಟಿಂಗ್​ ಗಾಸಿಪ್​ಗಳು ಕೇಳಿಬರುತ್ತಿವೆ.

ರಾಜಮೌಳಿ ಅವರ ಸಿನಿಮಾಗಳು ಹೇಗಿರುತ್ತವೆ ಎಂಬುದು ಎಲ್ಲರಿಗೂ ಗೊತ್ತಿದೆ. ಒಂದು ಚಿತ್ರಕ್ಕಾಗಿ ಅವರು ಹಲವು ವರ್ಷ ಮೀಸಲಿಡುತ್ತಾರೆ. ನಟರಿಂದ ನೂರಾರು ದಿನಗಳ ಡೇಟ್ಸ್​ ಕೇಳುತ್ತಾರೆ. ಪಾತ್ರಕ್ಕೆ ತಕ್ಕಂತೆ ಗೆಟಪ್​ ಬದಲಿಸಿಕೊಳ್ಳಬೇಕು ಎಂದು ಕೂಡ ಕಲಾವಿದರಿಗೆ ಅವರು ತಾಕೀತು ಮಾಡುತ್ತಾರೆ. ಆದರೆ ಈ ಕಂಡೀಷನ್​ಗೆ ಒಪ್ಪಿಕೊಳ್ಳಲು ಮಹೇಶ್​ ಬಾಬು ಸಿದ್ಧರಿಲ್ಲ ಎಂಬ ಗುಸುಗುಸು ಹಬ್ಬಿದೆ.

ರಾಜಮೌಳಿ ಜೊತೆ ಸೇರಿಕೊಂಡು ಒಂದೇ ಸಿನಿಮಾಗಾಗಿ ಎರಡು-ಮೂರು ವರ್ಷ ಮೀಸಲಿಡಲು ಮಹೇಶ್​ ಬಾಬು ಸಿದ್ಧರಿಲ್ಲ. ಹಾಗಾಗಿ ಅವರು ಕೆಲವು ಕಂಡೀಷನ್​ ಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ತಮಗೆ ಯಾವುದೇ ವಿಶೇಷ ಗೆಟಪ್​ ಇರಬಾರದು. ಆ ಮೂಲಕ ಏಕಕಾಲಕ್ಕೆ ತಾವು ಬೇರೆ ಸಿನಿಮಾದಲ್ಲೂ ತೊಡಗಿಕೊಳ್ಳಲು ಅನುಕೂಲ ಆಗಬೇಕು ಎಂದು ರಾಜಮೌಳಿಗೆ ಮಹೇಶ್​ ಬಾಬು ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ
Image
‘ಆರ್​ಆರ್​ಆರ್​’ ಸಿನಿಮಾ ಹೊಸ ದಾಖಲೆ; ಹಾಲಿವುಡ್ ಅವಾರ್ಡ್​ ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆದ ರಾಜಮೌಳಿ ಚಿತ್ರ
Image
ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ರಾಜಮೌಳಿಯ ಚಿತ್ರದಲ್ಲಿ ದೊಡ್ಡ ದೊಡ್ಡ ಪೋಷಕ ಕಲಾವಿದರು ಇರುತ್ತಾರೆ. ಆಗ ಸಹಜವಾಗಿಯೇ ಡೇಟ್​ ಕ್ಲ್ಯಾಶ್​ ಆಗುವ ಸಾಧ್ಯತೆ ಇರುತ್ತದೆ. ಇದು ಮಹೇಶ್​ ಬಾಬುಗೆ ಇಷ್ಟವಿಲ್ಲ. ‘ನಮಗೆ ಅಂಥ ಬ್ಯುಸಿ ಕಲಾವಿದರು ಬೇಡ. ನನ್ನ ಡೇಟ್ಸ್​ಗೆ ಯಾವಾಗ ಬೇಕಿದ್ದರೂ ಅಡ್ಜೆಸ್ಟ್​ ಮಾಡಿಕೊಳ್ಳುವಂತಹ ಕಲಾವಿದರನ್ನು ಮಾತ್ರ ಆಯ್ಕೆ ಮಾಡಿಕೊಳ್ಳಿ’ ಎಂದು ಮಹೇಶ್​ ಬಾಬು ಕಂಡೀಷನ್​ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ವಿಚಾರಗಳ ಬಗ್ಗೆ ಚಿತ್ರತಂಡದ ಯಾರೊಬ್ಬರೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಸದ್ಯ ಕೇಳಿಬಂದಿರುವುದೆಲ್ಲ ಬರೀ ಅಂತೆ-ಕಂತೆಗಳು ಮಾತ್ರ.

ಇದನ್ನೂ ಓದಿ: MM Keeravani Birthday: ರಾಜಮೌಳಿ ಚಿತ್ರಗಳ ಖಾಯಂ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಸಂಭಾವನೆ ಎಷ್ಟು?

Sonu Sood: ರಾಜಮೌಳಿ ‘ಬಾಹುಬಲಿ’ ಚಿತ್ರದ ಆಫರ್​ ಕೊಟ್ರೂ ಒಪ್ಪಿಕೊಂಡಿರಲಿಲ್ಲ ಸೋನು ಸೂದ್​; ಕಾರಣ ಏನು?

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ