ರಾಜಮೌಳಿ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​​ ಮಾಡ್ತಾರೆ ಮಹೇಶ್​ ಬಾಬು; ಇದಕ್ಕೆ ಹಾಲಿವುಡ್​ ನಂಟು

ಸಾಮಾನ್ಯವಾಗಿ ಮಹೇಶ್​ ಬಾಬು ಅವರು ಯಾವುದೇ ಸಿನಿಮಾ ಸಲುವಾಗಿ ಸಿಕ್ಸ್​ ಪ್ಯಾಕ್​ ಮಾಡುವ ಸಾಹಸಕ್ಕೆ ಕೈ ಹಾಕುವವರಲ್ಲ. ಆದರೆ ಈ ಬಾರಿ ಅವರು ರಾಜಮೌಳಿ ನಿರ್ದೇಶನದ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಹೆಚ್ಚು ಆಸಕ್ತಿ ವಹಿಸಿ ಅವರು ವರ್ಕೌಟ್​ ಮಾಡುತ್ತಿದ್ದಾರೆ.

ರಾಜಮೌಳಿ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​​ ಮಾಡ್ತಾರೆ ಮಹೇಶ್​ ಬಾಬು; ಇದಕ್ಕೆ ಹಾಲಿವುಡ್​ ನಂಟು
ಮಹೇಶ್​ ಬಾಬು
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 13, 2023 | 6:32 AM

ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರು ಯಾವುದೇ ಹೀರೋ ಜೊತೆ ಸಿನಿಮಾ ಮಾಡಿದರೂ ಆ ಹೀರೋಗಳಿಗೆ ಒಂದಷ್ಟು ಷರತ್ತುಗಳನ್ನು ಹಾಕುತ್ತಾರೆ. ತಮ್ಮ ಸಿನಿಮಾದ ಕಥಾನಾಯಕ ಫಿಟ್​ ಆಗಿ ಕಾಣಬೇಕು ಎಂಬುದು ರಾಜಮೌಳಿ ಅವರ ಉದ್ದೇಶ. ಅದಕ್ಕಾಗಿ ಪ್ರಭಾಸ್​, ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​ ಮುಂತಾದ ನಟರು ದೇಹವನ್ನು ಹುರಿಗೊಳಿಸಿಕೊಂಡು ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಈಗ ಮಹೇಶ್​ ಬಾಬು (Mahesh Babu) ಜೊತೆ ರಾಜಮೌಳಿ ಸಿನಿಮಾ ಮಾಡಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಆ ಸಿನಿಮಾಗಾಗಿ ಮಹೇಶ್​ ಬಾಬು ಅವರು ಸಿಕ್ಸ್​ ಪ್ಯಾಕ್​ (Six Pack) ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈ ಫೋಟೋ ಸಾಕ್ಷಿ ಒದಗಿಸುತ್ತಿದೆ.

ಸಾಮಾನ್ಯವಾಗಿ ಮಹೇಶ್​ ಬಾಬು ಅವರು ಯಾವುದೇ ಸಿನಿಮಾ ಸಲುವಾಗಿ ಸಿಕ್ಸ್​ ಪ್ಯಾಕ್​ ಮಾಡುವ ಸಾಹಸಕ್ಕೆ ಕೈ ಹಾಕುವವರಲ್ಲ. ಆದರೆ ಈ ಬಾರಿ ಅವರು ರಾಜಮೌಳಿ ನಿರ್ದೇಶನದ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಬಹಳ ಆಸಕ್ತಿ ವಹಿಸಿ ಅವರು ವರ್ಕೌಟ್​ ಮಾಡುತ್ತಿದ್ದಾರೆ. ಸ್ವತಃ ಅವರೇ ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ಕಟ್ಟುಮಸ್ತಾದ ಅವರ ಬೈಸೆಪ್ಸ್​ ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ.

ಹೊಸ ಸಿನಿಮಾಗಾಗಿ ಮಹೇಶ್​ ಬಾಬು ಅವರು ಸಿಕ್ಸ್​ ಪ್ಯಾಕ್​ ಮಾಡಬೇಕಿದೆ. ಅದಕ್ಕಾಗಿ ಅವರು ಹಾಲಿವುಡ್​ನ ಫಿಟ್ನೆಸ್​ ತರಬೇತಿದಾರರನ್ನು ಭಾರತಕ್ಕೆ ಕರೆಸಿಕೊಂಡಿದ್ದಾರೆ. ಆ ಪರಿಣಿತರ ಮಾರ್ಗದರ್ಶನದಲ್ಲಿ ಮಹೇಶ್​ ಬಾಬು ವರ್ಕೌಟ್​ ಮಾಡುತ್ತಿದ್ದಾರೆ. ಈ ಫೋಟೋದ ಜೊತೆ ಅವರು ಹೆಚ್ಚೇನೂ ಮಾಹಿತಿ ಹಂಚಿಕೊಂಡಿಲ್ಲ. ಆದರೂ ಕೂಡ ಇದು ರಾಜಮೌಳಿ ನಿರ್ದೇಶನದ ಚಿತ್ರಕ್ಕಾಗಿ ನಡೆಯುತ್ತಿರುವ ತಯಾರಿ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ನೆಟ್ಟಿಗರು ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ

ಸದ್ಯಕ್ಕೆ ಮಹೇಶ್​ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಕಾರಣಾಂತರಗಳಿಂದ ಈ ಚಿತ್ರದ ಕೆಲಸಗಳು ವಿಳಂಬ ಆಗಿವೆ. ಆದಷ್ಟು ಬೇಗ ಈ ಚಿತ್ರದ ಕೆಲಸವನ್ನು ಮುಗಿಸಿ, ರಾಜಮೌಳಿ ಜೊತೆಗಿನ ಸಿನಿಮಾದ ಚಿತ್ರೀಕರಣ ಆರಂಭಿಸಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಕ್ಕಿತು. ಆ ಬಳಿಕ ರಾಜಮೌಳಿ ಅವರು ಈ ಸಿನಿಮಾವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಜೋರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:39 pm, Thu, 12 October 23

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ