AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​​ ಮಾಡ್ತಾರೆ ಮಹೇಶ್​ ಬಾಬು; ಇದಕ್ಕೆ ಹಾಲಿವುಡ್​ ನಂಟು

ಸಾಮಾನ್ಯವಾಗಿ ಮಹೇಶ್​ ಬಾಬು ಅವರು ಯಾವುದೇ ಸಿನಿಮಾ ಸಲುವಾಗಿ ಸಿಕ್ಸ್​ ಪ್ಯಾಕ್​ ಮಾಡುವ ಸಾಹಸಕ್ಕೆ ಕೈ ಹಾಕುವವರಲ್ಲ. ಆದರೆ ಈ ಬಾರಿ ಅವರು ರಾಜಮೌಳಿ ನಿರ್ದೇಶನದ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಹೆಚ್ಚು ಆಸಕ್ತಿ ವಹಿಸಿ ಅವರು ವರ್ಕೌಟ್​ ಮಾಡುತ್ತಿದ್ದಾರೆ.

ರಾಜಮೌಳಿ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​​ ಮಾಡ್ತಾರೆ ಮಹೇಶ್​ ಬಾಬು; ಇದಕ್ಕೆ ಹಾಲಿವುಡ್​ ನಂಟು
ಮಹೇಶ್​ ಬಾಬು
ಮದನ್​ ಕುಮಾರ್​
| Edited By: |

Updated on:Oct 13, 2023 | 6:32 AM

Share

ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರು ಯಾವುದೇ ಹೀರೋ ಜೊತೆ ಸಿನಿಮಾ ಮಾಡಿದರೂ ಆ ಹೀರೋಗಳಿಗೆ ಒಂದಷ್ಟು ಷರತ್ತುಗಳನ್ನು ಹಾಕುತ್ತಾರೆ. ತಮ್ಮ ಸಿನಿಮಾದ ಕಥಾನಾಯಕ ಫಿಟ್​ ಆಗಿ ಕಾಣಬೇಕು ಎಂಬುದು ರಾಜಮೌಳಿ ಅವರ ಉದ್ದೇಶ. ಅದಕ್ಕಾಗಿ ಪ್ರಭಾಸ್​, ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​ ಮುಂತಾದ ನಟರು ದೇಹವನ್ನು ಹುರಿಗೊಳಿಸಿಕೊಂಡು ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಈಗ ಮಹೇಶ್​ ಬಾಬು (Mahesh Babu) ಜೊತೆ ರಾಜಮೌಳಿ ಸಿನಿಮಾ ಮಾಡಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಆ ಸಿನಿಮಾಗಾಗಿ ಮಹೇಶ್​ ಬಾಬು ಅವರು ಸಿಕ್ಸ್​ ಪ್ಯಾಕ್​ (Six Pack) ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈ ಫೋಟೋ ಸಾಕ್ಷಿ ಒದಗಿಸುತ್ತಿದೆ.

ಸಾಮಾನ್ಯವಾಗಿ ಮಹೇಶ್​ ಬಾಬು ಅವರು ಯಾವುದೇ ಸಿನಿಮಾ ಸಲುವಾಗಿ ಸಿಕ್ಸ್​ ಪ್ಯಾಕ್​ ಮಾಡುವ ಸಾಹಸಕ್ಕೆ ಕೈ ಹಾಕುವವರಲ್ಲ. ಆದರೆ ಈ ಬಾರಿ ಅವರು ರಾಜಮೌಳಿ ನಿರ್ದೇಶನದ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಬಹಳ ಆಸಕ್ತಿ ವಹಿಸಿ ಅವರು ವರ್ಕೌಟ್​ ಮಾಡುತ್ತಿದ್ದಾರೆ. ಸ್ವತಃ ಅವರೇ ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ಕಟ್ಟುಮಸ್ತಾದ ಅವರ ಬೈಸೆಪ್ಸ್​ ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ.

ಹೊಸ ಸಿನಿಮಾಗಾಗಿ ಮಹೇಶ್​ ಬಾಬು ಅವರು ಸಿಕ್ಸ್​ ಪ್ಯಾಕ್​ ಮಾಡಬೇಕಿದೆ. ಅದಕ್ಕಾಗಿ ಅವರು ಹಾಲಿವುಡ್​ನ ಫಿಟ್ನೆಸ್​ ತರಬೇತಿದಾರರನ್ನು ಭಾರತಕ್ಕೆ ಕರೆಸಿಕೊಂಡಿದ್ದಾರೆ. ಆ ಪರಿಣಿತರ ಮಾರ್ಗದರ್ಶನದಲ್ಲಿ ಮಹೇಶ್​ ಬಾಬು ವರ್ಕೌಟ್​ ಮಾಡುತ್ತಿದ್ದಾರೆ. ಈ ಫೋಟೋದ ಜೊತೆ ಅವರು ಹೆಚ್ಚೇನೂ ಮಾಹಿತಿ ಹಂಚಿಕೊಂಡಿಲ್ಲ. ಆದರೂ ಕೂಡ ಇದು ರಾಜಮೌಳಿ ನಿರ್ದೇಶನದ ಚಿತ್ರಕ್ಕಾಗಿ ನಡೆಯುತ್ತಿರುವ ತಯಾರಿ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ನೆಟ್ಟಿಗರು ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ

ಸದ್ಯಕ್ಕೆ ಮಹೇಶ್​ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಕಾರಣಾಂತರಗಳಿಂದ ಈ ಚಿತ್ರದ ಕೆಲಸಗಳು ವಿಳಂಬ ಆಗಿವೆ. ಆದಷ್ಟು ಬೇಗ ಈ ಚಿತ್ರದ ಕೆಲಸವನ್ನು ಮುಗಿಸಿ, ರಾಜಮೌಳಿ ಜೊತೆಗಿನ ಸಿನಿಮಾದ ಚಿತ್ರೀಕರಣ ಆರಂಭಿಸಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಕ್ಕಿತು. ಆ ಬಳಿಕ ರಾಜಮೌಳಿ ಅವರು ಈ ಸಿನಿಮಾವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಜೋರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:39 pm, Thu, 12 October 23

Follow Us
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ