AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​​ ಮಾಡ್ತಾರೆ ಮಹೇಶ್​ ಬಾಬು; ಇದಕ್ಕೆ ಹಾಲಿವುಡ್​ ನಂಟು

ಸಾಮಾನ್ಯವಾಗಿ ಮಹೇಶ್​ ಬಾಬು ಅವರು ಯಾವುದೇ ಸಿನಿಮಾ ಸಲುವಾಗಿ ಸಿಕ್ಸ್​ ಪ್ಯಾಕ್​ ಮಾಡುವ ಸಾಹಸಕ್ಕೆ ಕೈ ಹಾಕುವವರಲ್ಲ. ಆದರೆ ಈ ಬಾರಿ ಅವರು ರಾಜಮೌಳಿ ನಿರ್ದೇಶನದ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಹೆಚ್ಚು ಆಸಕ್ತಿ ವಹಿಸಿ ಅವರು ವರ್ಕೌಟ್​ ಮಾಡುತ್ತಿದ್ದಾರೆ.

ರಾಜಮೌಳಿ ಸಿನಿಮಾಗಾಗಿ ಸಿಕ್ಸ್​ ಪ್ಯಾಕ್​​ ಮಾಡ್ತಾರೆ ಮಹೇಶ್​ ಬಾಬು; ಇದಕ್ಕೆ ಹಾಲಿವುಡ್​ ನಂಟು
ಮಹೇಶ್​ ಬಾಬು
ಮದನ್​ ಕುಮಾರ್​
| Edited By: |

Updated on:Oct 13, 2023 | 6:32 AM

Share

ನಿರ್ದೇಶಕ ಎಸ್​ಎಸ್​ ರಾಜಮೌಳಿ (SS Rajamouli) ಅವರು ಯಾವುದೇ ಹೀರೋ ಜೊತೆ ಸಿನಿಮಾ ಮಾಡಿದರೂ ಆ ಹೀರೋಗಳಿಗೆ ಒಂದಷ್ಟು ಷರತ್ತುಗಳನ್ನು ಹಾಕುತ್ತಾರೆ. ತಮ್ಮ ಸಿನಿಮಾದ ಕಥಾನಾಯಕ ಫಿಟ್​ ಆಗಿ ಕಾಣಬೇಕು ಎಂಬುದು ರಾಜಮೌಳಿ ಅವರ ಉದ್ದೇಶ. ಅದಕ್ಕಾಗಿ ಪ್ರಭಾಸ್​, ರಾಮ್​ ಚರಣ್​, ಜೂನಿಯರ್​ ಎನ್​ಟಿಆರ್​ ಮುಂತಾದ ನಟರು ದೇಹವನ್ನು ಹುರಿಗೊಳಿಸಿಕೊಂಡು ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು. ಈಗ ಮಹೇಶ್​ ಬಾಬು (Mahesh Babu) ಜೊತೆ ರಾಜಮೌಳಿ ಸಿನಿಮಾ ಮಾಡಲು ಸಕಲ ತಯಾರಿ ಮಾಡಿಕೊಂಡಿದ್ದಾರೆ. ಆ ಸಿನಿಮಾಗಾಗಿ ಮಹೇಶ್​ ಬಾಬು ಅವರು ಸಿಕ್ಸ್​ ಪ್ಯಾಕ್​ (Six Pack) ಮಾಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಅದಕ್ಕೆ ಈ ಫೋಟೋ ಸಾಕ್ಷಿ ಒದಗಿಸುತ್ತಿದೆ.

ಸಾಮಾನ್ಯವಾಗಿ ಮಹೇಶ್​ ಬಾಬು ಅವರು ಯಾವುದೇ ಸಿನಿಮಾ ಸಲುವಾಗಿ ಸಿಕ್ಸ್​ ಪ್ಯಾಕ್​ ಮಾಡುವ ಸಾಹಸಕ್ಕೆ ಕೈ ಹಾಕುವವರಲ್ಲ. ಆದರೆ ಈ ಬಾರಿ ಅವರು ರಾಜಮೌಳಿ ನಿರ್ದೇಶನದ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಬಹಳ ಆಸಕ್ತಿ ವಹಿಸಿ ಅವರು ವರ್ಕೌಟ್​ ಮಾಡುತ್ತಿದ್ದಾರೆ. ಸ್ವತಃ ಅವರೇ ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ. ಕಟ್ಟುಮಸ್ತಾದ ಅವರ ಬೈಸೆಪ್ಸ್​ ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ.

ಹೊಸ ಸಿನಿಮಾಗಾಗಿ ಮಹೇಶ್​ ಬಾಬು ಅವರು ಸಿಕ್ಸ್​ ಪ್ಯಾಕ್​ ಮಾಡಬೇಕಿದೆ. ಅದಕ್ಕಾಗಿ ಅವರು ಹಾಲಿವುಡ್​ನ ಫಿಟ್ನೆಸ್​ ತರಬೇತಿದಾರರನ್ನು ಭಾರತಕ್ಕೆ ಕರೆಸಿಕೊಂಡಿದ್ದಾರೆ. ಆ ಪರಿಣಿತರ ಮಾರ್ಗದರ್ಶನದಲ್ಲಿ ಮಹೇಶ್​ ಬಾಬು ವರ್ಕೌಟ್​ ಮಾಡುತ್ತಿದ್ದಾರೆ. ಈ ಫೋಟೋದ ಜೊತೆ ಅವರು ಹೆಚ್ಚೇನೂ ಮಾಹಿತಿ ಹಂಚಿಕೊಂಡಿಲ್ಲ. ಆದರೂ ಕೂಡ ಇದು ರಾಜಮೌಳಿ ನಿರ್ದೇಶನದ ಚಿತ್ರಕ್ಕಾಗಿ ನಡೆಯುತ್ತಿರುವ ತಯಾರಿ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ನೆಟ್ಟಿಗರು ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ: ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ

ಸದ್ಯಕ್ಕೆ ಮಹೇಶ್​ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಕಾರಣಾಂತರಗಳಿಂದ ಈ ಚಿತ್ರದ ಕೆಲಸಗಳು ವಿಳಂಬ ಆಗಿವೆ. ಆದಷ್ಟು ಬೇಗ ಈ ಚಿತ್ರದ ಕೆಲಸವನ್ನು ಮುಗಿಸಿ, ರಾಜಮೌಳಿ ಜೊತೆಗಿನ ಸಿನಿಮಾದ ಚಿತ್ರೀಕರಣ ಆರಂಭಿಸಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ‘ಆರ್​ಆರ್​ಆರ್​’ ಚಿತ್ರಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಕ್ಕಿತು. ಆ ಬಳಿಕ ರಾಜಮೌಳಿ ಅವರು ಈ ಸಿನಿಮಾವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಜೋರಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:39 pm, Thu, 12 October 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ