AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂಬಾಕಿನಿಂದ ಮಾಡಿದ್ದಲ್ಲ, ಅದು ಆಯುರ್ವೇದಿಕ್ ಬೀಡಿ’; ಅಭಿಮಾನಿಗಳಿಗೆ ತಿಳಿ ಹೇಳಿದ ಮಹೇಶ್ ಬಾಬು

‘ಗುಂಟೂರು ಖಾರಂ’ನಲ್ಲಿ ಮಹೇಶ್ ಬಾಬು ಬೀಡಿ ಹಿಡಿದು ಕಾಣಿಸಿಕೊಳ್ಳುತ್ತಾರೆ. ಅನೇಕರು ಇದರಿಂದ ಸ್ಫೂರ್ತಿ ಪಡೆದು ಬೀಡಿ ಸೇದೋಕೆ ಮುಂದಾಗಬಹುದು ಎನ್ನುವ ಆತಂಕ ಮಹೇಶ್ ಬಾಬುಗೆ ಕಾಡಿದೆ. ಆ ರೀತಿ ಆಗಬಾರದು ಅನ್ನೋದು ಮಹೇಶ್ ಬಾಬು ಅವರ ಉದ್ದೇಶ.

‘ತಂಬಾಕಿನಿಂದ ಮಾಡಿದ್ದಲ್ಲ, ಅದು ಆಯುರ್ವೇದಿಕ್ ಬೀಡಿ’; ಅಭಿಮಾನಿಗಳಿಗೆ ತಿಳಿ ಹೇಳಿದ ಮಹೇಶ್ ಬಾಬು
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on:Jan 17, 2024 | 11:10 AM

Share

ನಟ ಮಹೇಶ್ ಬಾಬು ಅವರಿಗೆ ಸಾಮಾಜಿಕ ಕಾಳಜಿ ಸಾಕಷ್ಟಿದೆ. ಅವರು ತಂಬಾಕು ಅಥವಾ ಮದ್ಯದ ಬ್ರ್ಯಾಂಡ್ ಪ್ರಚಾರ ಮಾಡಲು ಹೋಗುವುದಿಲ್ಲ. ಸೆಲೆಬ್ರಿಟಿಗಳು ಪ್ರಚಾರ ಮಾಡಿದರೆ ಒಂದಷ್ಟು ಜನರು ಅದನ್ನು ಖರೀದಿ ಮಾಡುತ್ತಾರೆ. ಒಂದೊಮ್ಮೆ ಆರೋಗ್ಯಕ್ಕೆ ಹಾನಿ ಆಗುವಂಥ ಪದಾರ್ಥಗಳಿದ್ದರೆ ಅದನ್ನು ಜನರು ಖರೀದಿ ಮಾಡುತ್ತಾರೆ. ಹೀಗಾಗಬಾರದು ಅನ್ನೋದು ಮಹೇಶ್ ಬಾಬು (Mahesh Babu) ಉದ್ದೇಶ. ಈಗ ಅವರು ‘ಗುಂಟೂರು ಖಾರಂ’ ಸಿನಿಮಾದಲ್ಲಿ ಬಳಕೆ ಆದ ಬೀಡಿ ಕುರಿತು ವಿಶೇಷ ಸೂಚನೆ ಒಂದನ್ನು ನೀಡಿದ್ದಾರೆ.

‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್ ಬಾಬು ಬೀಡಿ ಹಿಡಿದು ಕಾಣಿಸಿಕೊಳ್ಳುತ್ತಾರೆ. ಅವರು ಬೀಡಿ ಸೇದೋ ಸ್ಟೈಲ್​ನ ಅನೇಕರು ಇಷ್ಟಪಟ್ಟಿದ್ದಾರೆ. ಅನೇಕರು ಇದರಿಂದ ಸ್ಫೂರ್ತಿ ಪಡೆದು ಬೀಡಿ ಸೇದೋಕೆ ಮುಂದಾಗಬಹುದು. ಆ ರೀತಿ ಆಗಬಾರದು ಅನ್ನೋದು ಮಹೇಶ್ ಬಾಬು ಅವರ ಉದ್ದೇಶ. ಹೀಗಾಗಿ, ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕೈಯಲ್ಲಿ ಇರೋದು ತಂಬಾಕಿನ ಬೀಡಿ ಅಲ್ಲ ಎಂದಿದ್ದಾರೆ.

‘ಸಿನಿಮಾದಲ್ಲಿ ತೋರಿಸಿರೋ ಬೀಡಿಯನ್ನು ತಂಬಾಕಿನಿಂದ ಮಾಡಿಲ್ಲ. ಬದಲಿಗೆ ಅದಕ್ಕೆ ಲವಂಗದ ಎಲೆಗಳನ್ನು ಬಳಕೆ ಮಾಡಲಾಗಿದೆ. ಇದು ಆಯುರ್ವೇದಿಕ್ ಬೀಡಿ. ಸಿನಿಮಾಗೋಸ್ಕರ ಮಾತ್ರ ಬಳಕೆ ಮಾಡಿದ್ದೇನೆ. ಮದ್ಯ ಸೇವನೆ ಹಾಗೂ ಸಿಗರೇಟ್ ಸೇದುವುದನ್ನು ಮಾಡಬೇಡಿ’ ಎಂದು ಮಹೇಶ್ ಬಾಬು ಕೋರಿದ್ದಾರೆ. ಅವರ ಈ ಕಾಳಜಿ ಅನೇಕರಿಗೆ ಇಷ್ಟ ಆಗಿದೆ.

ಇದನ್ನೂ ಓದಿ: ಮಹೇಶ್ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಯಶಸ್ಸಿನ ಪಾರ್ಟಿ, ಇಲ್ಲಿವೆ ಚಿತ್ರಗಳು

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆ ಕಂಡಿತು. ಈ ಚಿತ್ರಕ್ಕೆ ನೆಗೆಟಿವ್ ಟಾಕ್ ಶುರುವಾಗಿದೆ. ಆದಾಗ್ಯೂ ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ ಐದು ದಿನಕ್ಕೆ 193 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರ ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ಈ ಸಿನಿಮಾದಲ್ಲಿ ಕನ್ನಡದ ಶ್ರೀಲೀಲಾ ನಟಿಸಿದ್ದಾರೆ. ಈ ಚಿತ್ರದ ಬಳಿಕ ಮಹೇಶ್ ಬಾಬು ಅವರು ರಾಜಮೌಳಿ ಚಿತ್ರದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:03 am, Wed, 17 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು