AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂಬಾಕಿನಿಂದ ಮಾಡಿದ್ದಲ್ಲ, ಅದು ಆಯುರ್ವೇದಿಕ್ ಬೀಡಿ’; ಅಭಿಮಾನಿಗಳಿಗೆ ತಿಳಿ ಹೇಳಿದ ಮಹೇಶ್ ಬಾಬು

‘ಗುಂಟೂರು ಖಾರಂ’ನಲ್ಲಿ ಮಹೇಶ್ ಬಾಬು ಬೀಡಿ ಹಿಡಿದು ಕಾಣಿಸಿಕೊಳ್ಳುತ್ತಾರೆ. ಅನೇಕರು ಇದರಿಂದ ಸ್ಫೂರ್ತಿ ಪಡೆದು ಬೀಡಿ ಸೇದೋಕೆ ಮುಂದಾಗಬಹುದು ಎನ್ನುವ ಆತಂಕ ಮಹೇಶ್ ಬಾಬುಗೆ ಕಾಡಿದೆ. ಆ ರೀತಿ ಆಗಬಾರದು ಅನ್ನೋದು ಮಹೇಶ್ ಬಾಬು ಅವರ ಉದ್ದೇಶ.

‘ತಂಬಾಕಿನಿಂದ ಮಾಡಿದ್ದಲ್ಲ, ಅದು ಆಯುರ್ವೇದಿಕ್ ಬೀಡಿ’; ಅಭಿಮಾನಿಗಳಿಗೆ ತಿಳಿ ಹೇಳಿದ ಮಹೇಶ್ ಬಾಬು
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on:Jan 17, 2024 | 11:10 AM

Share

ನಟ ಮಹೇಶ್ ಬಾಬು ಅವರಿಗೆ ಸಾಮಾಜಿಕ ಕಾಳಜಿ ಸಾಕಷ್ಟಿದೆ. ಅವರು ತಂಬಾಕು ಅಥವಾ ಮದ್ಯದ ಬ್ರ್ಯಾಂಡ್ ಪ್ರಚಾರ ಮಾಡಲು ಹೋಗುವುದಿಲ್ಲ. ಸೆಲೆಬ್ರಿಟಿಗಳು ಪ್ರಚಾರ ಮಾಡಿದರೆ ಒಂದಷ್ಟು ಜನರು ಅದನ್ನು ಖರೀದಿ ಮಾಡುತ್ತಾರೆ. ಒಂದೊಮ್ಮೆ ಆರೋಗ್ಯಕ್ಕೆ ಹಾನಿ ಆಗುವಂಥ ಪದಾರ್ಥಗಳಿದ್ದರೆ ಅದನ್ನು ಜನರು ಖರೀದಿ ಮಾಡುತ್ತಾರೆ. ಹೀಗಾಗಬಾರದು ಅನ್ನೋದು ಮಹೇಶ್ ಬಾಬು (Mahesh Babu) ಉದ್ದೇಶ. ಈಗ ಅವರು ‘ಗುಂಟೂರು ಖಾರಂ’ ಸಿನಿಮಾದಲ್ಲಿ ಬಳಕೆ ಆದ ಬೀಡಿ ಕುರಿತು ವಿಶೇಷ ಸೂಚನೆ ಒಂದನ್ನು ನೀಡಿದ್ದಾರೆ.

‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್ ಬಾಬು ಬೀಡಿ ಹಿಡಿದು ಕಾಣಿಸಿಕೊಳ್ಳುತ್ತಾರೆ. ಅವರು ಬೀಡಿ ಸೇದೋ ಸ್ಟೈಲ್​ನ ಅನೇಕರು ಇಷ್ಟಪಟ್ಟಿದ್ದಾರೆ. ಅನೇಕರು ಇದರಿಂದ ಸ್ಫೂರ್ತಿ ಪಡೆದು ಬೀಡಿ ಸೇದೋಕೆ ಮುಂದಾಗಬಹುದು. ಆ ರೀತಿ ಆಗಬಾರದು ಅನ್ನೋದು ಮಹೇಶ್ ಬಾಬು ಅವರ ಉದ್ದೇಶ. ಹೀಗಾಗಿ, ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕೈಯಲ್ಲಿ ಇರೋದು ತಂಬಾಕಿನ ಬೀಡಿ ಅಲ್ಲ ಎಂದಿದ್ದಾರೆ.

‘ಸಿನಿಮಾದಲ್ಲಿ ತೋರಿಸಿರೋ ಬೀಡಿಯನ್ನು ತಂಬಾಕಿನಿಂದ ಮಾಡಿಲ್ಲ. ಬದಲಿಗೆ ಅದಕ್ಕೆ ಲವಂಗದ ಎಲೆಗಳನ್ನು ಬಳಕೆ ಮಾಡಲಾಗಿದೆ. ಇದು ಆಯುರ್ವೇದಿಕ್ ಬೀಡಿ. ಸಿನಿಮಾಗೋಸ್ಕರ ಮಾತ್ರ ಬಳಕೆ ಮಾಡಿದ್ದೇನೆ. ಮದ್ಯ ಸೇವನೆ ಹಾಗೂ ಸಿಗರೇಟ್ ಸೇದುವುದನ್ನು ಮಾಡಬೇಡಿ’ ಎಂದು ಮಹೇಶ್ ಬಾಬು ಕೋರಿದ್ದಾರೆ. ಅವರ ಈ ಕಾಳಜಿ ಅನೇಕರಿಗೆ ಇಷ್ಟ ಆಗಿದೆ.

ಇದನ್ನೂ ಓದಿ: ಮಹೇಶ್ ಬಾಬು ಮನೆಯಲ್ಲಿ ‘ಗುಂಟೂರು ಖಾರಂ’ ಯಶಸ್ಸಿನ ಪಾರ್ಟಿ, ಇಲ್ಲಿವೆ ಚಿತ್ರಗಳು

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ಬಿಡುಗಡೆ ಕಂಡಿತು. ಈ ಚಿತ್ರಕ್ಕೆ ನೆಗೆಟಿವ್ ಟಾಕ್ ಶುರುವಾಗಿದೆ. ಆದಾಗ್ಯೂ ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ ಐದು ದಿನಕ್ಕೆ 193 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಚಿತ್ರ ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ಈ ಸಿನಿಮಾದಲ್ಲಿ ಕನ್ನಡದ ಶ್ರೀಲೀಲಾ ನಟಿಸಿದ್ದಾರೆ. ಈ ಚಿತ್ರದ ಬಳಿಕ ಮಹೇಶ್ ಬಾಬು ಅವರು ರಾಜಮೌಳಿ ಚಿತ್ರದ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:03 am, Wed, 17 January 24

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ