AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ

ಗೌತಮ್​ ಘಟ್ಟಮನೇನಿ ಅವರಿಗೆ ಈಗ 16 ವರ್ಷ ವಯಸ್ಸು. ಅವರು ಶಾಲೆ ಮುಗಿದ ಬಳಿಕ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಹಾಗಂತ ಅವರಿಗೆ ಆರೋಗ್ಯದ ಸಮಸ್ಯೆ ಇದೆ ಅಂತೇನೂ ಅಲ್ಲ. ಮಹೇಶ್​ ಬಾಬು ಪುತ್ರ ಆಗಾಗ ಈ ರೀತಿ ಆಸ್ಪತ್ರೆಗೆ ತೆರಳೋಕೆ ಒಂದು ಪ್ರಮುಖವಾದ ಕಾರಣ ಇದೆ. ಆ ಬಗ್ಗೆ ನಮ್ರತಾ ಶಿರೋಡ್ಕರ್​ ಅವರು ವಿವರಿಸಿದ್ದಾರೆ.

ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ
ಗೌತಮ್​ ಘಟ್ಟಮನೇನಿ
ಮದನ್​ ಕುಮಾರ್​
|

Updated on: Aug 29, 2023 | 10:59 AM

Share

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅದೇ ರೀತಿ ಅವರ ಪತ್ನಿ ಮತ್ತು ಮಕ್ಕಳು ಕೂಡ ಒಂದಿಲ್ಲೊಂದು ಕಾರಣಕ್ಕೆ ಆಗಾಗ ಸುದ್ದಿ ಆಗುತ್ತಾರೆ. ಈಗ ಮಹೇಶ್​ ಬಾಬು ಅವರ ಪತ್ನಿ ನಮ್ರತಾ ಶಿರೋಡ್ಕರ್​ ಅವರು ಒಂದು ಇಂಟರೆಸ್ಟಿಂಗ್​ ವಿಚಾರ ಹಂಚಿಕೊಂಡಿದ್ದಾರೆ. ಅವರ ಪುತ್ರ ಗೌತಮ್​ ಘಟ್ಟಮನೇನಿಗೆ ಈಗ 16 ವರ್ಷ ವಯಸ್ಸು. ಅವರು ಶಾಲೆ ಮುಗಿದ ಬಳಿಕ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಹಾಗಂತ ಅವರಿಗೆ ಆರೋಗ್ಯದ ಸಮಸ್ಯೆ ಇದೆ ಅಂತೇನೂ ಅಲ್ಲ. ಗೌತಮ್​ ಘಟ್ಟಮನೇನಿ (Gautham Ghattamaneni) ಅವರು ಈ ರೀತಿ ಆಸ್ಪತ್ರೆಗೆ ತೆರಳೋಕೆ ಒಂದು ಪ್ರಮುಖವಾದ ಕಾರಣ ಇದೆ. ಆ ಬಗ್ಗೆ ನಮ್ರತಾ ಶಿರೋಡ್ಕರ್​ (Namrata Shirodkar) ಅವರು ವಿವರಿಸಿದ್ದಾರೆ. ತಮ್ಮ ಮಗನ ಈ ಕಾರ್ಯವನ್ನು ಅವರು ಶ್ಲಾಘಿಸಿದ್ದಾರೆ.

ಈಗಾಗಲೇ ತಿಳಿದಿರುವಂತೆ ಮಹೇಶ್​ ಬಾಬು ಅವರು ತಮ್ಮದೇ ಚಾರಿಟೇಬಲ್​ ಫೌಂಡೇಶನ್​ ಹೊಂದಿದ್ದಾರೆ. ‘ಎಂಬಿ ಫೌಂಡೇಶನ್​’ ಎಂಬುದು ಇದರ ಹೆಸರು. ಇದರ ಮೂಲಕ ಅನೇಕರಿಗೆ ನೆರವು ನೀಡಲಾಗುತ್ತಿದೆ. ‘ರೇನ್​ಬೋ ಮಕ್ಕಳ ಆಸ್ಪತ್ರೆ’ ಜೊತೆಗೆ ಈ ಫೌಂಡೇಶನ್​ ಸಹಯೋಗ ಹೊಂದಿದೆ. ಆ ಕಾರಣಕ್ಕಾಗಿ ಗೌತಮ್​ ಘಟ್ಟಮನೇನಿ ಅವರು ಈ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಜೊತೆಗೆ ಅವರು ಮಾತನಾಡುತ್ತಾರೆ. ಆ ಮೂಲಕ ಅವರ ಮುಖದಲ್ಲಿ ನಗು ಅರಳಿಸಲು ಪ್ರಯತ್ನಿಸುತ್ತಾರೆ. ಈ ಬಗ್ಗೆ ನಮ್ರತಾ ಶಿರೋಡ್ಕರ್​ ಅವರಿಗೆ ಹೆಮ್ಮೆ ಇದೆ.

ನಮ್ರತಾ ಶಿರೋಡ್ಕರ್​ ಇನ್​ಸ್ಟಾಗ್ರಾಮ್​ ಪೋಸ್ಟ್​:

‘ಗೌತಮ್​ ಕೂಡ ನಮ್ಮ ಫೌಂಡೇಶನ್​ನ ಮುಖ್ಯ ಭಾಗ. ಶಾಲೆ ಮುಗಿದ ಬಳಿಕ ಅವನು ಆಸ್ಪತ್ರೆಗೆ ತೆರಳುತ್ತಾನೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಮುಖದಲ್ಲಿ ನಗು ಅರಳಿಸುವ ಸಲುವಾಗಿ ಅವರ ಜೊತೆ ಒಂದಷ್ಟು ಸಮಯ ಕಳೆಯುತ್ತಾನೆ. ಮಕ್ಕಳು ಆದಷ್ಟು ಬೇಗ ಚೇತರಿಸಿಕೊಳ್ಳಲು ಈ ರೀತಿಯಲ್ಲಿ ಸಹಾಯ ಮಾಡುತ್ತಿರುವ ಗೌತಮ್​ ಘಟ್ಟಮನೇನಿಗೆ ಧನ್ಯವಾದಗಳು’ ಎಂದು ನಮ್ರತಾ ಶಿರೋಡ್ಕರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳು ಕಮೆಂಟ್​ ಮಾಡುವ ಮೂಲಕ ಗೌತಮ್​ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಮಹೇಶ್​ ಬಾಬು ಪುತ್ರಿ ಸಿತಾರಾ ಚಿತ್ರರಂಗಕ್ಕೆ ಬರೋದು ಯಾವಾಗ? ಮಗಳ ಪರವಾಗಿ ಉತ್ತರಿಸಿದ ನಮ್ರತಾ

ಮಹೇಶ್​ ಬಾಬು ಅವರ ಪುತ್ರಿ ಸಿತಾರಾ ಘಟ್ಟಮನೇನಿ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಿದ್ದಾಳೆ. ಆಕೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗಾಗಲೇ ಕೆಲವು ಪ್ರತಿಷ್ಠಿತ ಕಂಪನಿಗಳಿಗೆ ಸಿತಾರಾ ಪ್ರಚಾರ ರಾಯಭಾರಿ ಆಗಿದ್ದಾಳೆ. ಆ ಮೂಲಕ ಆಕೆಗೆ ದೊಡ್ಡ ಮೊತ್ತದ ಸಂಭಾವನೆ ಸಿಗುತ್ತಿದೆ. ಸದ್ಯ ಮಹೇಶ್​ ಬಾಬು ಅವರು ‘ಗಂಟೂರು ಖಾರಂ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕಾರಣಾಂತರಗಳಿಂದ ಈ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿವೆ. ಆ ಬಗ್ಗೆ ಅಭಿಮಾನಿಗಳಿಗೆ ಕೊಂಚ ಬೇಸರ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು