AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ

ಗೌತಮ್​ ಘಟ್ಟಮನೇನಿ ಅವರಿಗೆ ಈಗ 16 ವರ್ಷ ವಯಸ್ಸು. ಅವರು ಶಾಲೆ ಮುಗಿದ ಬಳಿಕ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಹಾಗಂತ ಅವರಿಗೆ ಆರೋಗ್ಯದ ಸಮಸ್ಯೆ ಇದೆ ಅಂತೇನೂ ಅಲ್ಲ. ಮಹೇಶ್​ ಬಾಬು ಪುತ್ರ ಆಗಾಗ ಈ ರೀತಿ ಆಸ್ಪತ್ರೆಗೆ ತೆರಳೋಕೆ ಒಂದು ಪ್ರಮುಖವಾದ ಕಾರಣ ಇದೆ. ಆ ಬಗ್ಗೆ ನಮ್ರತಾ ಶಿರೋಡ್ಕರ್​ ಅವರು ವಿವರಿಸಿದ್ದಾರೆ.

ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ
ಗೌತಮ್​ ಘಟ್ಟಮನೇನಿ
ಮದನ್​ ಕುಮಾರ್​
|

Updated on: Aug 29, 2023 | 10:59 AM

Share

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅದೇ ರೀತಿ ಅವರ ಪತ್ನಿ ಮತ್ತು ಮಕ್ಕಳು ಕೂಡ ಒಂದಿಲ್ಲೊಂದು ಕಾರಣಕ್ಕೆ ಆಗಾಗ ಸುದ್ದಿ ಆಗುತ್ತಾರೆ. ಈಗ ಮಹೇಶ್​ ಬಾಬು ಅವರ ಪತ್ನಿ ನಮ್ರತಾ ಶಿರೋಡ್ಕರ್​ ಅವರು ಒಂದು ಇಂಟರೆಸ್ಟಿಂಗ್​ ವಿಚಾರ ಹಂಚಿಕೊಂಡಿದ್ದಾರೆ. ಅವರ ಪುತ್ರ ಗೌತಮ್​ ಘಟ್ಟಮನೇನಿಗೆ ಈಗ 16 ವರ್ಷ ವಯಸ್ಸು. ಅವರು ಶಾಲೆ ಮುಗಿದ ಬಳಿಕ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಹಾಗಂತ ಅವರಿಗೆ ಆರೋಗ್ಯದ ಸಮಸ್ಯೆ ಇದೆ ಅಂತೇನೂ ಅಲ್ಲ. ಗೌತಮ್​ ಘಟ್ಟಮನೇನಿ (Gautham Ghattamaneni) ಅವರು ಈ ರೀತಿ ಆಸ್ಪತ್ರೆಗೆ ತೆರಳೋಕೆ ಒಂದು ಪ್ರಮುಖವಾದ ಕಾರಣ ಇದೆ. ಆ ಬಗ್ಗೆ ನಮ್ರತಾ ಶಿರೋಡ್ಕರ್​ (Namrata Shirodkar) ಅವರು ವಿವರಿಸಿದ್ದಾರೆ. ತಮ್ಮ ಮಗನ ಈ ಕಾರ್ಯವನ್ನು ಅವರು ಶ್ಲಾಘಿಸಿದ್ದಾರೆ.

ಈಗಾಗಲೇ ತಿಳಿದಿರುವಂತೆ ಮಹೇಶ್​ ಬಾಬು ಅವರು ತಮ್ಮದೇ ಚಾರಿಟೇಬಲ್​ ಫೌಂಡೇಶನ್​ ಹೊಂದಿದ್ದಾರೆ. ‘ಎಂಬಿ ಫೌಂಡೇಶನ್​’ ಎಂಬುದು ಇದರ ಹೆಸರು. ಇದರ ಮೂಲಕ ಅನೇಕರಿಗೆ ನೆರವು ನೀಡಲಾಗುತ್ತಿದೆ. ‘ರೇನ್​ಬೋ ಮಕ್ಕಳ ಆಸ್ಪತ್ರೆ’ ಜೊತೆಗೆ ಈ ಫೌಂಡೇಶನ್​ ಸಹಯೋಗ ಹೊಂದಿದೆ. ಆ ಕಾರಣಕ್ಕಾಗಿ ಗೌತಮ್​ ಘಟ್ಟಮನೇನಿ ಅವರು ಈ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಜೊತೆಗೆ ಅವರು ಮಾತನಾಡುತ್ತಾರೆ. ಆ ಮೂಲಕ ಅವರ ಮುಖದಲ್ಲಿ ನಗು ಅರಳಿಸಲು ಪ್ರಯತ್ನಿಸುತ್ತಾರೆ. ಈ ಬಗ್ಗೆ ನಮ್ರತಾ ಶಿರೋಡ್ಕರ್​ ಅವರಿಗೆ ಹೆಮ್ಮೆ ಇದೆ.

ನಮ್ರತಾ ಶಿರೋಡ್ಕರ್​ ಇನ್​ಸ್ಟಾಗ್ರಾಮ್​ ಪೋಸ್ಟ್​:

‘ಗೌತಮ್​ ಕೂಡ ನಮ್ಮ ಫೌಂಡೇಶನ್​ನ ಮುಖ್ಯ ಭಾಗ. ಶಾಲೆ ಮುಗಿದ ಬಳಿಕ ಅವನು ಆಸ್ಪತ್ರೆಗೆ ತೆರಳುತ್ತಾನೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಮುಖದಲ್ಲಿ ನಗು ಅರಳಿಸುವ ಸಲುವಾಗಿ ಅವರ ಜೊತೆ ಒಂದಷ್ಟು ಸಮಯ ಕಳೆಯುತ್ತಾನೆ. ಮಕ್ಕಳು ಆದಷ್ಟು ಬೇಗ ಚೇತರಿಸಿಕೊಳ್ಳಲು ಈ ರೀತಿಯಲ್ಲಿ ಸಹಾಯ ಮಾಡುತ್ತಿರುವ ಗೌತಮ್​ ಘಟ್ಟಮನೇನಿಗೆ ಧನ್ಯವಾದಗಳು’ ಎಂದು ನಮ್ರತಾ ಶಿರೋಡ್ಕರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳು ಕಮೆಂಟ್​ ಮಾಡುವ ಮೂಲಕ ಗೌತಮ್​ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಮಹೇಶ್​ ಬಾಬು ಪುತ್ರಿ ಸಿತಾರಾ ಚಿತ್ರರಂಗಕ್ಕೆ ಬರೋದು ಯಾವಾಗ? ಮಗಳ ಪರವಾಗಿ ಉತ್ತರಿಸಿದ ನಮ್ರತಾ

ಮಹೇಶ್​ ಬಾಬು ಅವರ ಪುತ್ರಿ ಸಿತಾರಾ ಘಟ್ಟಮನೇನಿ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಿದ್ದಾಳೆ. ಆಕೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗಾಗಲೇ ಕೆಲವು ಪ್ರತಿಷ್ಠಿತ ಕಂಪನಿಗಳಿಗೆ ಸಿತಾರಾ ಪ್ರಚಾರ ರಾಯಭಾರಿ ಆಗಿದ್ದಾಳೆ. ಆ ಮೂಲಕ ಆಕೆಗೆ ದೊಡ್ಡ ಮೊತ್ತದ ಸಂಭಾವನೆ ಸಿಗುತ್ತಿದೆ. ಸದ್ಯ ಮಹೇಶ್​ ಬಾಬು ಅವರು ‘ಗಂಟೂರು ಖಾರಂ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕಾರಣಾಂತರಗಳಿಂದ ಈ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿವೆ. ಆ ಬಗ್ಗೆ ಅಭಿಮಾನಿಗಳಿಗೆ ಕೊಂಚ ಬೇಸರ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ