AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ

ಗೌತಮ್​ ಘಟ್ಟಮನೇನಿ ಅವರಿಗೆ ಈಗ 16 ವರ್ಷ ವಯಸ್ಸು. ಅವರು ಶಾಲೆ ಮುಗಿದ ಬಳಿಕ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಹಾಗಂತ ಅವರಿಗೆ ಆರೋಗ್ಯದ ಸಮಸ್ಯೆ ಇದೆ ಅಂತೇನೂ ಅಲ್ಲ. ಮಹೇಶ್​ ಬಾಬು ಪುತ್ರ ಆಗಾಗ ಈ ರೀತಿ ಆಸ್ಪತ್ರೆಗೆ ತೆರಳೋಕೆ ಒಂದು ಪ್ರಮುಖವಾದ ಕಾರಣ ಇದೆ. ಆ ಬಗ್ಗೆ ನಮ್ರತಾ ಶಿರೋಡ್ಕರ್​ ಅವರು ವಿವರಿಸಿದ್ದಾರೆ.

ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ
ಗೌತಮ್​ ಘಟ್ಟಮನೇನಿ
ಮದನ್​ ಕುಮಾರ್​
|

Updated on: Aug 29, 2023 | 10:59 AM

Share

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅದೇ ರೀತಿ ಅವರ ಪತ್ನಿ ಮತ್ತು ಮಕ್ಕಳು ಕೂಡ ಒಂದಿಲ್ಲೊಂದು ಕಾರಣಕ್ಕೆ ಆಗಾಗ ಸುದ್ದಿ ಆಗುತ್ತಾರೆ. ಈಗ ಮಹೇಶ್​ ಬಾಬು ಅವರ ಪತ್ನಿ ನಮ್ರತಾ ಶಿರೋಡ್ಕರ್​ ಅವರು ಒಂದು ಇಂಟರೆಸ್ಟಿಂಗ್​ ವಿಚಾರ ಹಂಚಿಕೊಂಡಿದ್ದಾರೆ. ಅವರ ಪುತ್ರ ಗೌತಮ್​ ಘಟ್ಟಮನೇನಿಗೆ ಈಗ 16 ವರ್ಷ ವಯಸ್ಸು. ಅವರು ಶಾಲೆ ಮುಗಿದ ಬಳಿಕ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಹಾಗಂತ ಅವರಿಗೆ ಆರೋಗ್ಯದ ಸಮಸ್ಯೆ ಇದೆ ಅಂತೇನೂ ಅಲ್ಲ. ಗೌತಮ್​ ಘಟ್ಟಮನೇನಿ (Gautham Ghattamaneni) ಅವರು ಈ ರೀತಿ ಆಸ್ಪತ್ರೆಗೆ ತೆರಳೋಕೆ ಒಂದು ಪ್ರಮುಖವಾದ ಕಾರಣ ಇದೆ. ಆ ಬಗ್ಗೆ ನಮ್ರತಾ ಶಿರೋಡ್ಕರ್​ (Namrata Shirodkar) ಅವರು ವಿವರಿಸಿದ್ದಾರೆ. ತಮ್ಮ ಮಗನ ಈ ಕಾರ್ಯವನ್ನು ಅವರು ಶ್ಲಾಘಿಸಿದ್ದಾರೆ.

ಈಗಾಗಲೇ ತಿಳಿದಿರುವಂತೆ ಮಹೇಶ್​ ಬಾಬು ಅವರು ತಮ್ಮದೇ ಚಾರಿಟೇಬಲ್​ ಫೌಂಡೇಶನ್​ ಹೊಂದಿದ್ದಾರೆ. ‘ಎಂಬಿ ಫೌಂಡೇಶನ್​’ ಎಂಬುದು ಇದರ ಹೆಸರು. ಇದರ ಮೂಲಕ ಅನೇಕರಿಗೆ ನೆರವು ನೀಡಲಾಗುತ್ತಿದೆ. ‘ರೇನ್​ಬೋ ಮಕ್ಕಳ ಆಸ್ಪತ್ರೆ’ ಜೊತೆಗೆ ಈ ಫೌಂಡೇಶನ್​ ಸಹಯೋಗ ಹೊಂದಿದೆ. ಆ ಕಾರಣಕ್ಕಾಗಿ ಗೌತಮ್​ ಘಟ್ಟಮನೇನಿ ಅವರು ಈ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಜೊತೆಗೆ ಅವರು ಮಾತನಾಡುತ್ತಾರೆ. ಆ ಮೂಲಕ ಅವರ ಮುಖದಲ್ಲಿ ನಗು ಅರಳಿಸಲು ಪ್ರಯತ್ನಿಸುತ್ತಾರೆ. ಈ ಬಗ್ಗೆ ನಮ್ರತಾ ಶಿರೋಡ್ಕರ್​ ಅವರಿಗೆ ಹೆಮ್ಮೆ ಇದೆ.

ನಮ್ರತಾ ಶಿರೋಡ್ಕರ್​ ಇನ್​ಸ್ಟಾಗ್ರಾಮ್​ ಪೋಸ್ಟ್​:

‘ಗೌತಮ್​ ಕೂಡ ನಮ್ಮ ಫೌಂಡೇಶನ್​ನ ಮುಖ್ಯ ಭಾಗ. ಶಾಲೆ ಮುಗಿದ ಬಳಿಕ ಅವನು ಆಸ್ಪತ್ರೆಗೆ ತೆರಳುತ್ತಾನೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಮುಖದಲ್ಲಿ ನಗು ಅರಳಿಸುವ ಸಲುವಾಗಿ ಅವರ ಜೊತೆ ಒಂದಷ್ಟು ಸಮಯ ಕಳೆಯುತ್ತಾನೆ. ಮಕ್ಕಳು ಆದಷ್ಟು ಬೇಗ ಚೇತರಿಸಿಕೊಳ್ಳಲು ಈ ರೀತಿಯಲ್ಲಿ ಸಹಾಯ ಮಾಡುತ್ತಿರುವ ಗೌತಮ್​ ಘಟ್ಟಮನೇನಿಗೆ ಧನ್ಯವಾದಗಳು’ ಎಂದು ನಮ್ರತಾ ಶಿರೋಡ್ಕರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳು ಕಮೆಂಟ್​ ಮಾಡುವ ಮೂಲಕ ಗೌತಮ್​ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಮಹೇಶ್​ ಬಾಬು ಪುತ್ರಿ ಸಿತಾರಾ ಚಿತ್ರರಂಗಕ್ಕೆ ಬರೋದು ಯಾವಾಗ? ಮಗಳ ಪರವಾಗಿ ಉತ್ತರಿಸಿದ ನಮ್ರತಾ

ಮಹೇಶ್​ ಬಾಬು ಅವರ ಪುತ್ರಿ ಸಿತಾರಾ ಘಟ್ಟಮನೇನಿ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಿದ್ದಾಳೆ. ಆಕೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗಾಗಲೇ ಕೆಲವು ಪ್ರತಿಷ್ಠಿತ ಕಂಪನಿಗಳಿಗೆ ಸಿತಾರಾ ಪ್ರಚಾರ ರಾಯಭಾರಿ ಆಗಿದ್ದಾಳೆ. ಆ ಮೂಲಕ ಆಕೆಗೆ ದೊಡ್ಡ ಮೊತ್ತದ ಸಂಭಾವನೆ ಸಿಗುತ್ತಿದೆ. ಸದ್ಯ ಮಹೇಶ್​ ಬಾಬು ಅವರು ‘ಗಂಟೂರು ಖಾರಂ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕಾರಣಾಂತರಗಳಿಂದ ಈ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿವೆ. ಆ ಬಗ್ಗೆ ಅಭಿಮಾನಿಗಳಿಗೆ ಕೊಂಚ ಬೇಸರ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ