ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ

|

Updated on: Aug 29, 2023 | 10:59 AM

ಗೌತಮ್​ ಘಟ್ಟಮನೇನಿ ಅವರಿಗೆ ಈಗ 16 ವರ್ಷ ವಯಸ್ಸು. ಅವರು ಶಾಲೆ ಮುಗಿದ ಬಳಿಕ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಹಾಗಂತ ಅವರಿಗೆ ಆರೋಗ್ಯದ ಸಮಸ್ಯೆ ಇದೆ ಅಂತೇನೂ ಅಲ್ಲ. ಮಹೇಶ್​ ಬಾಬು ಪುತ್ರ ಆಗಾಗ ಈ ರೀತಿ ಆಸ್ಪತ್ರೆಗೆ ತೆರಳೋಕೆ ಒಂದು ಪ್ರಮುಖವಾದ ಕಾರಣ ಇದೆ. ಆ ಬಗ್ಗೆ ನಮ್ರತಾ ಶಿರೋಡ್ಕರ್​ ಅವರು ವಿವರಿಸಿದ್ದಾರೆ.

ಮಹೇಶ್​ ಬಾಬು ಪುತ್ರ ಗೌತಮ್​ ಆಗಾಗ ಆಸ್ಪತ್ರೆಗೆ ಹೋಗೋದು ಏಕೆ? ಫೋಟೋ ಸಮೇತ ವಿವರಿಸಿದ ನಮ್ರತಾ
ಗೌತಮ್​ ಘಟ್ಟಮನೇನಿ
Follow us on

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅದೇ ರೀತಿ ಅವರ ಪತ್ನಿ ಮತ್ತು ಮಕ್ಕಳು ಕೂಡ ಒಂದಿಲ್ಲೊಂದು ಕಾರಣಕ್ಕೆ ಆಗಾಗ ಸುದ್ದಿ ಆಗುತ್ತಾರೆ. ಈಗ ಮಹೇಶ್​ ಬಾಬು ಅವರ ಪತ್ನಿ ನಮ್ರತಾ ಶಿರೋಡ್ಕರ್​ ಅವರು ಒಂದು ಇಂಟರೆಸ್ಟಿಂಗ್​ ವಿಚಾರ ಹಂಚಿಕೊಂಡಿದ್ದಾರೆ. ಅವರ ಪುತ್ರ ಗೌತಮ್​ ಘಟ್ಟಮನೇನಿಗೆ ಈಗ 16 ವರ್ಷ ವಯಸ್ಸು. ಅವರು ಶಾಲೆ ಮುಗಿದ ಬಳಿಕ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಹಾಗಂತ ಅವರಿಗೆ ಆರೋಗ್ಯದ ಸಮಸ್ಯೆ ಇದೆ ಅಂತೇನೂ ಅಲ್ಲ. ಗೌತಮ್​ ಘಟ್ಟಮನೇನಿ (Gautham Ghattamaneni) ಅವರು ಈ ರೀತಿ ಆಸ್ಪತ್ರೆಗೆ ತೆರಳೋಕೆ ಒಂದು ಪ್ರಮುಖವಾದ ಕಾರಣ ಇದೆ. ಆ ಬಗ್ಗೆ ನಮ್ರತಾ ಶಿರೋಡ್ಕರ್​ (Namrata Shirodkar) ಅವರು ವಿವರಿಸಿದ್ದಾರೆ. ತಮ್ಮ ಮಗನ ಈ ಕಾರ್ಯವನ್ನು ಅವರು ಶ್ಲಾಘಿಸಿದ್ದಾರೆ.

ಈಗಾಗಲೇ ತಿಳಿದಿರುವಂತೆ ಮಹೇಶ್​ ಬಾಬು ಅವರು ತಮ್ಮದೇ ಚಾರಿಟೇಬಲ್​ ಫೌಂಡೇಶನ್​ ಹೊಂದಿದ್ದಾರೆ. ‘ಎಂಬಿ ಫೌಂಡೇಶನ್​’ ಎಂಬುದು ಇದರ ಹೆಸರು. ಇದರ ಮೂಲಕ ಅನೇಕರಿಗೆ ನೆರವು ನೀಡಲಾಗುತ್ತಿದೆ. ‘ರೇನ್​ಬೋ ಮಕ್ಕಳ ಆಸ್ಪತ್ರೆ’ ಜೊತೆಗೆ ಈ ಫೌಂಡೇಶನ್​ ಸಹಯೋಗ ಹೊಂದಿದೆ. ಆ ಕಾರಣಕ್ಕಾಗಿ ಗೌತಮ್​ ಘಟ್ಟಮನೇನಿ ಅವರು ಈ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಜೊತೆಗೆ ಅವರು ಮಾತನಾಡುತ್ತಾರೆ. ಆ ಮೂಲಕ ಅವರ ಮುಖದಲ್ಲಿ ನಗು ಅರಳಿಸಲು ಪ್ರಯತ್ನಿಸುತ್ತಾರೆ. ಈ ಬಗ್ಗೆ ನಮ್ರತಾ ಶಿರೋಡ್ಕರ್​ ಅವರಿಗೆ ಹೆಮ್ಮೆ ಇದೆ.

ನಮ್ರತಾ ಶಿರೋಡ್ಕರ್​ ಇನ್​ಸ್ಟಾಗ್ರಾಮ್​ ಪೋಸ್ಟ್​:

‘ಗೌತಮ್​ ಕೂಡ ನಮ್ಮ ಫೌಂಡೇಶನ್​ನ ಮುಖ್ಯ ಭಾಗ. ಶಾಲೆ ಮುಗಿದ ಬಳಿಕ ಅವನು ಆಸ್ಪತ್ರೆಗೆ ತೆರಳುತ್ತಾನೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಮುಖದಲ್ಲಿ ನಗು ಅರಳಿಸುವ ಸಲುವಾಗಿ ಅವರ ಜೊತೆ ಒಂದಷ್ಟು ಸಮಯ ಕಳೆಯುತ್ತಾನೆ. ಮಕ್ಕಳು ಆದಷ್ಟು ಬೇಗ ಚೇತರಿಸಿಕೊಳ್ಳಲು ಈ ರೀತಿಯಲ್ಲಿ ಸಹಾಯ ಮಾಡುತ್ತಿರುವ ಗೌತಮ್​ ಘಟ್ಟಮನೇನಿಗೆ ಧನ್ಯವಾದಗಳು’ ಎಂದು ನಮ್ರತಾ ಶಿರೋಡ್ಕರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳು ಕಮೆಂಟ್​ ಮಾಡುವ ಮೂಲಕ ಗೌತಮ್​ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಮಹೇಶ್​ ಬಾಬು ಪುತ್ರಿ ಸಿತಾರಾ ಚಿತ್ರರಂಗಕ್ಕೆ ಬರೋದು ಯಾವಾಗ? ಮಗಳ ಪರವಾಗಿ ಉತ್ತರಿಸಿದ ನಮ್ರತಾ

ಮಹೇಶ್​ ಬಾಬು ಅವರ ಪುತ್ರಿ ಸಿತಾರಾ ಘಟ್ಟಮನೇನಿ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಿದ್ದಾಳೆ. ಆಕೆಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗಾಗಲೇ ಕೆಲವು ಪ್ರತಿಷ್ಠಿತ ಕಂಪನಿಗಳಿಗೆ ಸಿತಾರಾ ಪ್ರಚಾರ ರಾಯಭಾರಿ ಆಗಿದ್ದಾಳೆ. ಆ ಮೂಲಕ ಆಕೆಗೆ ದೊಡ್ಡ ಮೊತ್ತದ ಸಂಭಾವನೆ ಸಿಗುತ್ತಿದೆ. ಸದ್ಯ ಮಹೇಶ್​ ಬಾಬು ಅವರು ‘ಗಂಟೂರು ಖಾರಂ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕಾರಣಾಂತರಗಳಿಂದ ಈ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿವೆ. ಆ ಬಗ್ಗೆ ಅಭಿಮಾನಿಗಳಿಗೆ ಕೊಂಚ ಬೇಸರ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.