AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ರೀತಿ ‘ಗೋಲ್ಡ್​’ ಮೇಲೆ ಕಣ್ಣಿಟ್ಟ ರಾಜಮೌಳಿ-ಮಹೇಶ್​ ಬಾಬು? ಶೀರ್ಷಿಕೆ ಬಗ್ಗೆ ಸುಳಿವು

ಮಹೇಶ್​ ಬಾಬು ಅವರು ರಾಜಮೌಳಿ ಜೊತೆಗಿನ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇದು ಅವರು ನಟಿಸುವ 29ನೇ ಸಿನಿಮಾ. ಸದ್ಯಕ್ಕೆ ಇದನ್ನು ‘SSMB 29’ ಎಂದು ಕರೆಯಲಾಗುತ್ತಿದೆ. ಶೀಘ್ರದಲ್ಲೇ ಟೈಟಲ್​ ಬಹಿರಂಗ ಆಗಲಿದೆ. ಮಹೇಶ್​ ಬಾಬು ಹುಟ್ಟುಹಬ್ಬದ ದಿನ ಹೊಸ ಸಿನಿಮಾದ ಶೀರ್ಷಿಕೆ ಬಗ್ಗೆ ಮಾಹಿತಿ ಬಹಿರಂಗ ಆಗಲಿದೆ ಎಂಬ ನಿರೀಕ್ಷೆ ಇದೆ.

ಯಶ್​ ರೀತಿ ‘ಗೋಲ್ಡ್​’ ಮೇಲೆ ಕಣ್ಣಿಟ್ಟ ರಾಜಮೌಳಿ-ಮಹೇಶ್​ ಬಾಬು? ಶೀರ್ಷಿಕೆ ಬಗ್ಗೆ ಸುಳಿವು
ರಾಜಮೌಳಿ, ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Jul 25, 2024 | 10:01 PM

Share

ನಟ ಮಹೇಶ್​ ಬಾಬು ಅವರ ಜನ್ಮದಿನ ಸಮೀಪಿಸುತ್ತಿದೆ. ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾ ಟೈಟಲ್​ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ನಿರೀಕ್ಷಿಸುತ್ತಿದ್ದಾರೆ. ‘ಗುಂಟೂರು ಖಾರಂ’ ಬಳಿಕ ಮಹೇಶ್​ ಬಾಬು ಅವರು ಹೊಸ ಸಿನಿಮಾಗೆ ಸಖತ್ ತಯಾರಿ ಮಾಡಿಕೊಂಡರು. ಖ್ಯಾತ ನಿರ್ದೇಶಕ ರಾಜಮೌಳಿ ಜೊತೆ ಅವರು ಕೈ ಜೋಡಿಸಿದ್ದಾರೆ. ಮಹೇಶ್​ ಬಾಬು ಹಾಗೂ ರಾಜಮೌಳಿ ಜೊತೆಯಾಗಿ ಮಾಡಲಿರುವ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾದ ಶೀರ್ಷಿಕೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಟೈಟಲ್​ ಬಗ್ಗೆ ಒಂದು ಸುಳಿವು ಸಿಕ್ಕಿದೆ.

ರಾಜಮೌಳಿ ಅವರು ಪ್ರತಿ ಸಿನಿಮಾದ ಮೇಕಿಂಗ್​ಗೆ ತುಂಬ ಸಮಯ ಮೀಸಲಿಡುತ್ತಾರೆ. ಮಹೇಶ್​ ಬಾಬು ಜೊತೆಗಿನ ಸಿನಿಮಾಗೆ ಅವರು ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾದ ಟೈಟಲ್​ ಅನೌನ್ಸ್​ ಆಗುವ ಸಾಧ್ಯತೆ ಇದೆ. ಮಹೇಶ್​ ಬಾಬು ಅವರ ಬರ್ತ್​ಡೇ ಪ್ರಯುಕ್ತ ಟೈಟಲ್​ ಬಹಿರಂಗ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಈ ಚಿತ್ರಕ್ಕೆ ‘ಗೋಲ್ಡ್​’ ಎಂದು ಶೀರ್ಷಿಕೆ ಇಡಲಾಗಿದೆ ಎಂಬ ಗಾಸಿಪ್​ ಕೇಳಿಬಂದಿದೆ.

ಟೈಟಲ್​ ಬಗ್ಗೆ ಚಿತ್ರತಂಡದವರು ಸದ್ಯಕ್ಕೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಹಾಗಿದ್ರೂ ಕೂಡ ‘ಗೋಲ್ಡ್​’ ಎಂಬ ಶೀರ್ಷಿಕೆ ಕೇಳಿಬರುತ್ತಿದೆ. ನಟ ಯಶ್​ ಅವರು ‘ಕೆಜಿಎಫ್​’ ಸಿನಿಮಾದಲ್ಲಿ ಬಂಗಾರದ ಕಥೆ ಹೇಳಿದ್ದರು. ಈಗ ಮಹೇಶ್​ ಬಾಬು ಮತ್ತು ರಾಜಮೌಳಿ ಕೂಡ ‘ಗೋಲ್ಡ್​’ ಬಗೆಗಿನ ಕಥೆ ಹೇಳುತ್ತಾರಾ ಎಂಬ ಅನುಮಾನ ಮೂಡಿದೆ. ಈ ಎಲ್ಲ ಕಾರಣದಿಂದ ಈ ಪ್ರಾಜೆಕ್ಟ್​ ಮೇಲೆ ಜನರ ನಿರೀಕ್ಷೆ ದುಪ್ಪಟ್ಟಾಗಿದೆ.

ಇದನ್ನೂ ಓದಿ: ಬಡ ಕುಟುಂಬದ ಮೆಡಿಕಲ್ ವಿದ್ಯಾರ್ಥಿನಿಗೆ ಆರ್ಥಿಕ ಸಹಾಯ ಮಾಡಿದ ಮಹೇಶ್​ ಬಾಬು ಮಗಳು

ಇದು ಮಹೇಶ್​ ಬಾಬು ನಟನೆಯ 29ನೇ ಸಿನಿಮಾ. ಶೀರ್ಷಿಕೆ ಬಹಿರಂಗ ಆಗುವ ತನಕ ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಎಸ್​ಎಸ್​ಎಂಬಿ 29’ ಎಂದು ಕರೆಯಲಾಗುತ್ತದೆ. ಈ ಸಿನಿಮಾಗಾಗಿ ಮಹೇಶ್​ ಬಾಬು ಗೆಟಪ್​ ಬದಲಾಯಿಸಿಕೊಳ್ಳಲಿದ್ದಾರೆ. ಆಸ್ಕರ್​ ವಿಜೇತ ಮ್ಯೂಸಿಕ್​ ಡೈರೆಕ್ಟರ್​ ಎಂಎಂ ಕೀರವಾಣಿ ಅವರು ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ವಿಜಯೇಂದ್ರ ಪ್ರಸಾದ್​ ಸ್ಕ್ರಿಪ್ಟ್​ ಬರೆದಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಗ್ರ್ಯಾಂಡ್​ ಸಕ್ಸಸ್​ ಬಳಿಕ ರಾಜಮೌಳಿ ಅವರು ಕೈಗೆತ್ತಿಕೊಂಡ ಸಿನಿಮಾ ಎಂಬ ಕಾರಣದಿಂದ ಅಭಿಮಾನಿಗಳ ಮನದಲ್ಲಿ ಬೆಟ್ಟದಷ್ಟು ಹೈಪ್​ ಕ್ರಿಯೇಟ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ