AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ರೀತಿ ‘ಗೋಲ್ಡ್​’ ಮೇಲೆ ಕಣ್ಣಿಟ್ಟ ರಾಜಮೌಳಿ-ಮಹೇಶ್​ ಬಾಬು? ಶೀರ್ಷಿಕೆ ಬಗ್ಗೆ ಸುಳಿವು

ಮಹೇಶ್​ ಬಾಬು ಅವರು ರಾಜಮೌಳಿ ಜೊತೆಗಿನ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇದು ಅವರು ನಟಿಸುವ 29ನೇ ಸಿನಿಮಾ. ಸದ್ಯಕ್ಕೆ ಇದನ್ನು ‘SSMB 29’ ಎಂದು ಕರೆಯಲಾಗುತ್ತಿದೆ. ಶೀಘ್ರದಲ್ಲೇ ಟೈಟಲ್​ ಬಹಿರಂಗ ಆಗಲಿದೆ. ಮಹೇಶ್​ ಬಾಬು ಹುಟ್ಟುಹಬ್ಬದ ದಿನ ಹೊಸ ಸಿನಿಮಾದ ಶೀರ್ಷಿಕೆ ಬಗ್ಗೆ ಮಾಹಿತಿ ಬಹಿರಂಗ ಆಗಲಿದೆ ಎಂಬ ನಿರೀಕ್ಷೆ ಇದೆ.

ಯಶ್​ ರೀತಿ ‘ಗೋಲ್ಡ್​’ ಮೇಲೆ ಕಣ್ಣಿಟ್ಟ ರಾಜಮೌಳಿ-ಮಹೇಶ್​ ಬಾಬು? ಶೀರ್ಷಿಕೆ ಬಗ್ಗೆ ಸುಳಿವು
ರಾಜಮೌಳಿ, ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Jul 25, 2024 | 10:01 PM

Share

ನಟ ಮಹೇಶ್​ ಬಾಬು ಅವರ ಜನ್ಮದಿನ ಸಮೀಪಿಸುತ್ತಿದೆ. ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾ ಟೈಟಲ್​ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ನಿರೀಕ್ಷಿಸುತ್ತಿದ್ದಾರೆ. ‘ಗುಂಟೂರು ಖಾರಂ’ ಬಳಿಕ ಮಹೇಶ್​ ಬಾಬು ಅವರು ಹೊಸ ಸಿನಿಮಾಗೆ ಸಖತ್ ತಯಾರಿ ಮಾಡಿಕೊಂಡರು. ಖ್ಯಾತ ನಿರ್ದೇಶಕ ರಾಜಮೌಳಿ ಜೊತೆ ಅವರು ಕೈ ಜೋಡಿಸಿದ್ದಾರೆ. ಮಹೇಶ್​ ಬಾಬು ಹಾಗೂ ರಾಜಮೌಳಿ ಜೊತೆಯಾಗಿ ಮಾಡಲಿರುವ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾದ ಶೀರ್ಷಿಕೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಟೈಟಲ್​ ಬಗ್ಗೆ ಒಂದು ಸುಳಿವು ಸಿಕ್ಕಿದೆ.

ರಾಜಮೌಳಿ ಅವರು ಪ್ರತಿ ಸಿನಿಮಾದ ಮೇಕಿಂಗ್​ಗೆ ತುಂಬ ಸಮಯ ಮೀಸಲಿಡುತ್ತಾರೆ. ಮಹೇಶ್​ ಬಾಬು ಜೊತೆಗಿನ ಸಿನಿಮಾಗೆ ಅವರು ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾದ ಟೈಟಲ್​ ಅನೌನ್ಸ್​ ಆಗುವ ಸಾಧ್ಯತೆ ಇದೆ. ಮಹೇಶ್​ ಬಾಬು ಅವರ ಬರ್ತ್​ಡೇ ಪ್ರಯುಕ್ತ ಟೈಟಲ್​ ಬಹಿರಂಗ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಈ ಚಿತ್ರಕ್ಕೆ ‘ಗೋಲ್ಡ್​’ ಎಂದು ಶೀರ್ಷಿಕೆ ಇಡಲಾಗಿದೆ ಎಂಬ ಗಾಸಿಪ್​ ಕೇಳಿಬಂದಿದೆ.

ಟೈಟಲ್​ ಬಗ್ಗೆ ಚಿತ್ರತಂಡದವರು ಸದ್ಯಕ್ಕೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಹಾಗಿದ್ರೂ ಕೂಡ ‘ಗೋಲ್ಡ್​’ ಎಂಬ ಶೀರ್ಷಿಕೆ ಕೇಳಿಬರುತ್ತಿದೆ. ನಟ ಯಶ್​ ಅವರು ‘ಕೆಜಿಎಫ್​’ ಸಿನಿಮಾದಲ್ಲಿ ಬಂಗಾರದ ಕಥೆ ಹೇಳಿದ್ದರು. ಈಗ ಮಹೇಶ್​ ಬಾಬು ಮತ್ತು ರಾಜಮೌಳಿ ಕೂಡ ‘ಗೋಲ್ಡ್​’ ಬಗೆಗಿನ ಕಥೆ ಹೇಳುತ್ತಾರಾ ಎಂಬ ಅನುಮಾನ ಮೂಡಿದೆ. ಈ ಎಲ್ಲ ಕಾರಣದಿಂದ ಈ ಪ್ರಾಜೆಕ್ಟ್​ ಮೇಲೆ ಜನರ ನಿರೀಕ್ಷೆ ದುಪ್ಪಟ್ಟಾಗಿದೆ.

ಇದನ್ನೂ ಓದಿ: ಬಡ ಕುಟುಂಬದ ಮೆಡಿಕಲ್ ವಿದ್ಯಾರ್ಥಿನಿಗೆ ಆರ್ಥಿಕ ಸಹಾಯ ಮಾಡಿದ ಮಹೇಶ್​ ಬಾಬು ಮಗಳು

ಇದು ಮಹೇಶ್​ ಬಾಬು ನಟನೆಯ 29ನೇ ಸಿನಿಮಾ. ಶೀರ್ಷಿಕೆ ಬಹಿರಂಗ ಆಗುವ ತನಕ ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಎಸ್​ಎಸ್​ಎಂಬಿ 29’ ಎಂದು ಕರೆಯಲಾಗುತ್ತದೆ. ಈ ಸಿನಿಮಾಗಾಗಿ ಮಹೇಶ್​ ಬಾಬು ಗೆಟಪ್​ ಬದಲಾಯಿಸಿಕೊಳ್ಳಲಿದ್ದಾರೆ. ಆಸ್ಕರ್​ ವಿಜೇತ ಮ್ಯೂಸಿಕ್​ ಡೈರೆಕ್ಟರ್​ ಎಂಎಂ ಕೀರವಾಣಿ ಅವರು ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ವಿಜಯೇಂದ್ರ ಪ್ರಸಾದ್​ ಸ್ಕ್ರಿಪ್ಟ್​ ಬರೆದಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಗ್ರ್ಯಾಂಡ್​ ಸಕ್ಸಸ್​ ಬಳಿಕ ರಾಜಮೌಳಿ ಅವರು ಕೈಗೆತ್ತಿಕೊಂಡ ಸಿನಿಮಾ ಎಂಬ ಕಾರಣದಿಂದ ಅಭಿಮಾನಿಗಳ ಮನದಲ್ಲಿ ಬೆಟ್ಟದಷ್ಟು ಹೈಪ್​ ಕ್ರಿಯೇಟ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು