AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ರೀತಿ ‘ಗೋಲ್ಡ್​’ ಮೇಲೆ ಕಣ್ಣಿಟ್ಟ ರಾಜಮೌಳಿ-ಮಹೇಶ್​ ಬಾಬು? ಶೀರ್ಷಿಕೆ ಬಗ್ಗೆ ಸುಳಿವು

ಮಹೇಶ್​ ಬಾಬು ಅವರು ರಾಜಮೌಳಿ ಜೊತೆಗಿನ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇದು ಅವರು ನಟಿಸುವ 29ನೇ ಸಿನಿಮಾ. ಸದ್ಯಕ್ಕೆ ಇದನ್ನು ‘SSMB 29’ ಎಂದು ಕರೆಯಲಾಗುತ್ತಿದೆ. ಶೀಘ್ರದಲ್ಲೇ ಟೈಟಲ್​ ಬಹಿರಂಗ ಆಗಲಿದೆ. ಮಹೇಶ್​ ಬಾಬು ಹುಟ್ಟುಹಬ್ಬದ ದಿನ ಹೊಸ ಸಿನಿಮಾದ ಶೀರ್ಷಿಕೆ ಬಗ್ಗೆ ಮಾಹಿತಿ ಬಹಿರಂಗ ಆಗಲಿದೆ ಎಂಬ ನಿರೀಕ್ಷೆ ಇದೆ.

ಯಶ್​ ರೀತಿ ‘ಗೋಲ್ಡ್​’ ಮೇಲೆ ಕಣ್ಣಿಟ್ಟ ರಾಜಮೌಳಿ-ಮಹೇಶ್​ ಬಾಬು? ಶೀರ್ಷಿಕೆ ಬಗ್ಗೆ ಸುಳಿವು
ರಾಜಮೌಳಿ, ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Jul 25, 2024 | 10:01 PM

Share

ನಟ ಮಹೇಶ್​ ಬಾಬು ಅವರ ಜನ್ಮದಿನ ಸಮೀಪಿಸುತ್ತಿದೆ. ಬರ್ತ್​ಡೇ ಪ್ರಯುಕ್ತ ಹೊಸ ಸಿನಿಮಾ ಟೈಟಲ್​ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ನಿರೀಕ್ಷಿಸುತ್ತಿದ್ದಾರೆ. ‘ಗುಂಟೂರು ಖಾರಂ’ ಬಳಿಕ ಮಹೇಶ್​ ಬಾಬು ಅವರು ಹೊಸ ಸಿನಿಮಾಗೆ ಸಖತ್ ತಯಾರಿ ಮಾಡಿಕೊಂಡರು. ಖ್ಯಾತ ನಿರ್ದೇಶಕ ರಾಜಮೌಳಿ ಜೊತೆ ಅವರು ಕೈ ಜೋಡಿಸಿದ್ದಾರೆ. ಮಹೇಶ್​ ಬಾಬು ಹಾಗೂ ರಾಜಮೌಳಿ ಜೊತೆಯಾಗಿ ಮಾಡಲಿರುವ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾದ ಶೀರ್ಷಿಕೆ ಏನು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಟೈಟಲ್​ ಬಗ್ಗೆ ಒಂದು ಸುಳಿವು ಸಿಕ್ಕಿದೆ.

ರಾಜಮೌಳಿ ಅವರು ಪ್ರತಿ ಸಿನಿಮಾದ ಮೇಕಿಂಗ್​ಗೆ ತುಂಬ ಸಮಯ ಮೀಸಲಿಡುತ್ತಾರೆ. ಮಹೇಶ್​ ಬಾಬು ಜೊತೆಗಿನ ಸಿನಿಮಾಗೆ ಅವರು ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾದ ಟೈಟಲ್​ ಅನೌನ್ಸ್​ ಆಗುವ ಸಾಧ್ಯತೆ ಇದೆ. ಮಹೇಶ್​ ಬಾಬು ಅವರ ಬರ್ತ್​ಡೇ ಪ್ರಯುಕ್ತ ಟೈಟಲ್​ ಬಹಿರಂಗ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ಈ ಚಿತ್ರಕ್ಕೆ ‘ಗೋಲ್ಡ್​’ ಎಂದು ಶೀರ್ಷಿಕೆ ಇಡಲಾಗಿದೆ ಎಂಬ ಗಾಸಿಪ್​ ಕೇಳಿಬಂದಿದೆ.

ಟೈಟಲ್​ ಬಗ್ಗೆ ಚಿತ್ರತಂಡದವರು ಸದ್ಯಕ್ಕೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಹಾಗಿದ್ರೂ ಕೂಡ ‘ಗೋಲ್ಡ್​’ ಎಂಬ ಶೀರ್ಷಿಕೆ ಕೇಳಿಬರುತ್ತಿದೆ. ನಟ ಯಶ್​ ಅವರು ‘ಕೆಜಿಎಫ್​’ ಸಿನಿಮಾದಲ್ಲಿ ಬಂಗಾರದ ಕಥೆ ಹೇಳಿದ್ದರು. ಈಗ ಮಹೇಶ್​ ಬಾಬು ಮತ್ತು ರಾಜಮೌಳಿ ಕೂಡ ‘ಗೋಲ್ಡ್​’ ಬಗೆಗಿನ ಕಥೆ ಹೇಳುತ್ತಾರಾ ಎಂಬ ಅನುಮಾನ ಮೂಡಿದೆ. ಈ ಎಲ್ಲ ಕಾರಣದಿಂದ ಈ ಪ್ರಾಜೆಕ್ಟ್​ ಮೇಲೆ ಜನರ ನಿರೀಕ್ಷೆ ದುಪ್ಪಟ್ಟಾಗಿದೆ.

ಇದನ್ನೂ ಓದಿ: ಬಡ ಕುಟುಂಬದ ಮೆಡಿಕಲ್ ವಿದ್ಯಾರ್ಥಿನಿಗೆ ಆರ್ಥಿಕ ಸಹಾಯ ಮಾಡಿದ ಮಹೇಶ್​ ಬಾಬು ಮಗಳು

ಇದು ಮಹೇಶ್​ ಬಾಬು ನಟನೆಯ 29ನೇ ಸಿನಿಮಾ. ಶೀರ್ಷಿಕೆ ಬಹಿರಂಗ ಆಗುವ ತನಕ ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಎಸ್​ಎಸ್​ಎಂಬಿ 29’ ಎಂದು ಕರೆಯಲಾಗುತ್ತದೆ. ಈ ಸಿನಿಮಾಗಾಗಿ ಮಹೇಶ್​ ಬಾಬು ಗೆಟಪ್​ ಬದಲಾಯಿಸಿಕೊಳ್ಳಲಿದ್ದಾರೆ. ಆಸ್ಕರ್​ ವಿಜೇತ ಮ್ಯೂಸಿಕ್​ ಡೈರೆಕ್ಟರ್​ ಎಂಎಂ ಕೀರವಾಣಿ ಅವರು ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ವಿಜಯೇಂದ್ರ ಪ್ರಸಾದ್​ ಸ್ಕ್ರಿಪ್ಟ್​ ಬರೆದಿದ್ದಾರೆ. ‘ಆರ್​ಆರ್​ಆರ್​’ ಸಿನಿಮಾದ ಗ್ರ್ಯಾಂಡ್​ ಸಕ್ಸಸ್​ ಬಳಿಕ ರಾಜಮೌಳಿ ಅವರು ಕೈಗೆತ್ತಿಕೊಂಡ ಸಿನಿಮಾ ಎಂಬ ಕಾರಣದಿಂದ ಅಭಿಮಾನಿಗಳ ಮನದಲ್ಲಿ ಬೆಟ್ಟದಷ್ಟು ಹೈಪ್​ ಕ್ರಿಯೇಟ್​ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು