AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSMB28: ಪ್ರಭಾಸ್, ರಾಮ್ ಚರಣ್ ಜೊತೆ ಮಹೇಶ್ ಬಾಬು ಕ್ಲ್ಯಾಶ್​; ಮತ್ತೆ ಸ್ಟಾರ್​ ವಾರ್?

ಮೂರು ಸ್ಟಾರ್ ಸಿನಿಮಾಗಳು ಒಟ್ಟೊಟ್ಟಿಗೆ ತೆರೆಗೆ ಬರುತ್ತಿವೆ. ಯಾವುದಾದರೂ ಸಿನಿಮಾ ರೇಸ್​ನಿಂದ ಹಿಂದೆ ಸರಿಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

SSMB28: ಪ್ರಭಾಸ್, ರಾಮ್ ಚರಣ್ ಜೊತೆ ಮಹೇಶ್ ಬಾಬು ಕ್ಲ್ಯಾಶ್​; ಮತ್ತೆ ಸ್ಟಾರ್​ ವಾರ್?
ಪ್ರಾಜೆಕ್ಟ್ ಕೆ-ಮಹೇಶ್ ಬಾಬು-ರಾಮ್ ಚರಣ್
ರಾಜೇಶ್ ದುಗ್ಗುಮನೆ
|

Updated on: Mar 27, 2023 | 7:10 AM

Share

ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದ ಕ್ಲ್ಯಾಶ್ ಏರ್ಪಡೋದು ಸರ್ವೇ ಸಾಮಾನ್ಯ. ಅದರಲ್ಲೂ ದಕ್ಷಿಣ ಭಾರತದ ಮಂದಿ ಸಂಕ್ರಾಂತಿ (Sankranti Festival) ಹಬ್ಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ದೊಡ್ಡ ಬಜೆಟ್ ಚಿತ್ರಗಳನ್ನು ಈ ಸಂದರ್ಭದಲ್ಲಿ ರಿಲೀಸ್ ಮಾಡೋಕೆ ನಿರ್ಮಾಪಕರು ಆಸಕ್ತಿ ತೋರಿಸುತ್ತಾರೆ. ಪ್ರತಿ ವರ್ಷ ಅನೇಕ ಸ್ಟಾರ್​ ನಟರ ಚಿತ್ರಗಳು ಈ ಹಬ್ಬದಂದು ರಿಲೀಸ್ ಆಗಿವೆ. 2024ರ ಸಂಕ್ರಾಂತಿಗೂ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಕ್ಲ್ಯಾಶ್ ಏರ್ಪಡುವ ಸೂಚನೆ ಸಿಕ್ಕಿದೆ. ಮೂರು ಸ್ಟಾರ್ ಸಿನಿಮಾಗಳು ಒಟ್ಟೊಟ್ಟಿಗೆ ತೆರೆಗೆ ಬರುತ್ತಿವೆ ಅನ್ನೋದು ವಿಶೇಷ. ಯಾವುದಾದರೂ ಸಿನಿಮಾ ರೇಸ್​ನಿಂದ ಹಿಂದೆ ಸರಿಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಮಹೇಶ್ ಬಾಬು ನಟನೆಯ 28ನೇ ಸಿನಿಮಾಗೆ ತಾತ್ಕಾಲಿಕವಾಗಿ ‘SSMB28’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾ ಈ ವರ್ಷವೇ ತೆರೆಗೆ ಬರಬೇಕಿತ್ತು. ಆದರೆ, ಮಹೇಶ್ ಬಾಬು ಅವರಿಗೆ ಅನೇಕ ತೊಂದರೆಗಳು ಎದುರಾದವು. ತಂದೆ-ತಾಯಿ ಇಬ್ಬರನ್ನೂ ಕೆಲವೇ ತಿಂಗಳ ಅಂತರದಲ್ಲಿ ಕಳೆದುಕೊಂಡರು. ಇದರ ಜೊತೆಗೆ ಅವರು ಅನೇಕ ಬಾರಿ ವಿದೇಶಿ ಪ್ರಯಾಣ ಮಾಡಿದರು. ಈ ಎಲ್ಲಾ ಕಾರಣದಿಂದ ಸಿನಿಮಾ ಸೆಟ್ಟೇರುವುದು ವಿಳಂಬ ಆಗಿದೆ. ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್ ಕೂಡ ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿ ಇದ್ದರು. ಸಿನಿಮಾ ತಡವಾಗಲು ಇದು ಕೂಡ ಒಂದು ಕಾರಣ. ಹೀಗಾಗಿ, ಸಿನಿಮಾ ರಿಲೀಸ್ ದಿನಾಂಕ 2024ಕ್ಕೆ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: ‘ಪ್ರಾಜೆಕ್ಟ್​ ಕೆ’ ಕಥೆ ರಿವೀಲ್ ಮಾಡಿದ ನಿರ್ಮಾಪಕ; ವಿಷ್ಣುವಿನ ಆಧುನಿಕ ಅವತಾರದಲ್ಲಿ ಬರಲಿದ್ದಾರೆ ಪ್ರಭಾಸ್

SSMB28 ಚಿತ್ರತಂಡ ರಿಲೀಸ್ ದಿನಾಂಕ ಘೋಷಣೆ ಮಾಡಿಕೊಂಡಿದೆ. ಹೊಸ ಪೋಸ್ಟರ್​ನಲ್ಲಿ ಮಹೇಶ್ ಬಾಬು ಅವರು ಸಿಗರೇಟ್ ಸೇದುತ್ತಾ ಮಾಸ್ ಆಗಿ ಬಂದಿದ್ದಾರೆ. ‘ಜನವರಿ 13, 2024ರಂದು ಚಿತ್ರಮಂದಿರದಲ್ಲಿ’ ಎನ್ನುವ ಕ್ಯಾಪ್ಶನ್ ನೀಡಲಾಗಿದೆ. ಈ ಮೂಲಕ ಸಿನಿಮಾ ಸಂಕ್ರಾಂತಿ ರೇಸ್​​ ಸೇರಿಕೊಂಡಿದೆ.

ಇದನ್ನೂ ಓದಿ: ಪ್ರಭಾಸ್, ಅಲ್ಲು ಅರ್ಜುನ್ ಬಳಿಕ ಜೂ ಎನ್​ಟಿಆರ್ ಮೇಲೆ ಕಣ್ಣಿಟ್ಟ ಟಿ-ಸೀರೀಸ್

ಪ್ರಭಾಸ್ ನಟನೆಯ ‘ಪ್ರಾಜೆಕ್ಟ್​ ಕೆ’ ಸಿನಿಮಾಗೆ ನಾಗ್ ಅಶ್ವಿನ್ ನಿರ್ದೇಶನವಿದೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರ ಜನವರಿ 12ರಂದು ರಿಲೀಸ್ ಆಗಲಿದೆ. ಇತ್ತೀಚೆಗೆ ಪೋಸ್ಟರ್ ಮೂಲಕ ಈ ವಿಚಾರ ತಿಳಿಸಲಾಗಿತ್ತು. ಇನ್ನು, ರಾಮ್ ಚರಣ್ ನಟನೆಯ 15ನೇ ಸಿನಿಮಾ ಕೂಡ ಇದೇ ದಿನಾಂಕದಂದು ರಿಲೀಸ್ ಆಗುತ್ತಿದೆ. ಹೀಗಾಗಿ, ಮೂರು ದೊಡ್ಡ ಸ್ಟಾರ್ಸ್ ಸಿನಿಮಾ ಒಟ್ಟೊಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಭರ್ಜರಿ ಸ್ಪರ್ಧೆ ಏರ್ಪಡಲಿದೆ. ಸೋಶಿಯಲ್ ಮೀಡಿಯಾದಲ್ಲಿ ಟ್ವೀಟ್ ವಾರ್ ಏರ್ಪಡುವ ಸಾಧ್ಯತೆಯೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?