AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಪೂರ್ಣಗೊಂಡಿಲ್ಲ ‘ಗುಂಟೂರು ಖಾರಂ’ ಸಿನಿಮಾ ಶೂಟಿಂಗ್; ಅಭಿಮಾನಿಗಳಿಗೆ ಆಗಿದೆ ಚಿಂತೆ

ವಿಕ್ಟರಿ ವೆಂಕಟೇಶ್ ಅವರ 75ನೇ ಸಿನಿಮಾ ಲಾಂಚ್ ಆಗಿದೆ. ಈ ಕಾರ್ಯಕ್ರಮಕ್ಕೆ ರಾಣಾ ದಗ್ಗುಬಾಟಿ ಸೇರಿ ಅನೇಕರು ಆಗಮಿಸಿದ್ದರು. ಈ ಕಾರ್ಯಕ್ರಮಕ್ಕೆ ಮಹೇಶ್ ಬಾಬು ಕೂಡ ಆಗಮಿಸಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ.

ಇನ್ನೂ ಪೂರ್ಣಗೊಂಡಿಲ್ಲ ‘ಗುಂಟೂರು ಖಾರಂ’ ಸಿನಿಮಾ ಶೂಟಿಂಗ್; ಅಭಿಮಾನಿಗಳಿಗೆ ಆಗಿದೆ ಚಿಂತೆ
ಮಹೇಶ್​ ಬಾಬು, ಶ್ರೀಲೀಲಾ
ರಾಜೇಶ್ ದುಗ್ಗುಮನೆ
|

Updated on: Dec 29, 2023 | 1:11 PM

Share

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ (Guntur Kaaram Movie) ರಿಲೀಸ್​ಗೆ ಉಳಿದಿರೋದು ಇನ್ನು ಎರಡು ವಾರ ಮಾತ್ರ. ಜನವರಿ 12ರಂದು ಈ ಚಿತ್ರ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ. ಸಿನಿಮಾ ತಂಡ ಸರಿಯಾಗಿ ಪ್ರಚಾರ ಆರಂಭಿಸಿಲ್ಲ. ಮತ್ತೊಂದು ವಿಚಾರ ಎಂದರೆ ಇನ್ನೂ ಚಿತ್ರದ ಶೂಟಿಂಗ್ ಪೂರ್ಣಗೊಂಡಿಲ್ಲ. ಮಹೇಶ್ ಬಾಬು ಅವರು ಕಳೆದ ಕೆಲವು ದಿನಗಳಿಂದ ಹಗಲು ರಾತ್ರಿ ಶೂಟಿಂಗ್​ನಲ್ಲಿ ಭಾಗಿ ಆಗುತ್ತಿದ್ದಾರೆ ಎನ್ನಲಾಗಿದೆ.

ವಿಕ್ಟರಿ ವೆಂಕಟೇಶ್ ಅವರ 75ನೇ ಸಿನಿಮಾ ಲಾಂಚ್ ಆಗಿದೆ. ಈ ಕಾರ್ಯಕ್ರಮಕ್ಕೆ ರಾಣಾ ದಗ್ಗುಬಾಟಿ ಸೇರಿ ಅನೇಕರು ಆಗಮಿಸಿದ್ದರು. ಈ ಕಾರ್ಯಕ್ರಮಕ್ಕೆ ಮಹೇಶ್ ಬಾಬು ಕೂಡ ಆಗಮಿಸಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಇದಕ್ಕೆ ಕಾರಣ ಆಗಿದ್ದು ‘ಗುಂಟೂರು ಖಾರಂ’ ಸಿನಿಮಾದ ಶೂಟಿಂಗ್ ಎನ್ನಲಾಗುತ್ತಿದೆ.

‘ಗುಂಟೂರು ಖಾರಂ’ ಸಿನಿಮಾದ ಸಾಂಗ್ ಶೂಟ್ ಬಾಕಿ ಇದೆ ಎನ್ನಲಾಗಿದೆ. ಹೀಗಾಗಿ, ಮಹೇಶ್ ಬಾಬು ಅವರು ಹಗಲು ರಾತ್ರಿ ಇದರಲ್ಲೇ ಬ್ಯುಸಿ ಇದ್ದಾರೆ. ಅವರು ಕಾರ್ಯಕ್ರಮಕ್ಕೆ ಬರಬೇಕು ಎಂದುಕೊಂಡಿದ್ದರು. ಆದರೂ ಅದು ಸಾಧ್ಯವಾಗಿಲ್ಲ. ಶೂಟಿಂಗ್ ಪೂರ್ಣಗೊಳ್ಳುವುದು ರಾತ್ರಿ 10.30 ಆಗಿದೆ. ಹೀಗಾಗಿ, ಅವರು ಕಾರ್ಯಕ್ರಮಕ್ಕೆ ಬಂದಿಲ್ಲ.

ಇದನ್ನೂ ಓದಿ: ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರದ ಶೂಟಿಂಗ್​ ವಿಡಿಯೋ ಲೀಕ್​

ಸದ್ಯ ‘ಗುಂಟೂರು ಖಾರಂ’ ತಂಡದಿಂದ ಎರಡು ಸಾಂಗ್ ರಿಲೀಸ್ ಆಗಿದೆ. ಜನವರಿ ಆರಂಭದಲ್ಲಿ ಮೊದಲ ಟ್ರೇಲರ್ ರಿಲೀಸ್ ಆಗುವ ನಿರೀಕ್ಷೆ ಇದೆ. ಚಿತ್ರತಂಡದವರು ಪ್ರೀ ರಿಲೀಸ್ ಇವೆಂಟ್​ನ ದೊಡ್ಡ ಮಟ್ಟದಲ್ಲಿ ಮಾಡಲು ಪ್ಲಾನ್ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.

‘ಗುಂಟೂರು ಖಾರಂ’ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು, ಶ್ರೀಲೀಲಾ ಮೊದಲಾದವರು ನಟಿಸಿದ್ದಾರೆ. ಸಂಕ್ರಾಂತಿ ಸಂದರ್ಭದಲ್ಲಿ ಸಾಕಷ್ಟು ಚಿತ್ರಗಳು ರಿಲೀಸ್ ಆಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ