AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಟೂರು ಖಾರಂ’ ಟ್ರೇಲರ್​ ಬಿಡುಗಡೆ ತಡವಾಗಲು ಇದೆ ಮುಖ್ಯ ಕಾರಣ; ಏನದು?

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಶನಿವಾರ (ಜನವರಿ 6) ‘ಗುಂಟೂರು ಖಾರಂ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಆಗಬೇಕಿತ್ತು. ಕಾರಣಾಂತರಗಳಿಂದ ಅದು ಮುಂದೂಡಿಕೆ ಆಯಿತು. ಕೊನೇ ಪಕ್ಷ ಟ್ರೇಲರ್​ ಆದರೂ ಬಿಡುಗಡೆ ಆಗಲಿ ಎಂದು ಫ್ಯಾನ್ಸ್​ ಕಾದಿದ್ದರು. ಆದರೆ ಟ್ರೇಲರ್​ ಸಹ ರಿಲೀಸ್​ ಆಗಿಲ್ಲ.

‘ಗುಂಟೂರು ಖಾರಂ’ ಟ್ರೇಲರ್​ ಬಿಡುಗಡೆ ತಡವಾಗಲು ಇದೆ ಮುಖ್ಯ ಕಾರಣ; ಏನದು?
ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Jan 07, 2024 | 7:03 AM

Share

ಟಾಲಿವುಡ್​ ‘ಪ್ರಿನ್ಸ್​’ ಮಹೇಶ್​ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್ ಕಾದಿದ್ದಾರೆ. ದೊಡ್ಡ ಗ್ಯಾಪ್​ನ ನಂತರ ಮಹೇಶ್​ ಬಾಬು ಅವರು ಬೆಳ್ಳಿ ಪರದೆ ಮೇಲೆ ಕಾಣಿಸಿಕೊಳ್ಳುತ್ತಿರುವುದರಿಂದ ಕಾತರ ಹೆಚ್ಚಾಗಿದೆ. ಈ ಸಿನಿಮಾಗೆ ತ್ರಿವಿಕ್ರಮ್​ ಶ್ರೀನಿವಾಸ್​ ನಿರ್ದೇಶನವಿದೆ. ಈ ವರ್ಷ ಸಂಕ್ರಾಂತಿ ಪ್ರಯುಕ್ತ ಜನವರಿ 12ರಂದು ‘ಗುಂಟೂರು ಖಾರಂ’ (Guntur Kaaram) ಸಿನಿಮಾ ಬಿಡುಗಡೆ ಆಗಲಿದೆ. ಆದರೆ ಚಿತ್ರದ ಟ್ರೇಲರ್​ ಇನ್ನೂ ರಿಲೀಸ್​ ಆಗಿಲ್ಲ. ಟ್ರೇಲರ್​ (Guntur Kaaram Trailer) ಬಿಡುಗಡೆ ತಡವಾಡಲು ಕಾರಣ ಏನು ಎಂಬುದು ಈಗ ಗೊತ್ತಾಗಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಶನಿವಾರ (ಜನವರಿ 6) ‘ಗುಂಟೂರು ಖಾರಂ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಆಗಬೇಕಿತ್ತು. ಕಾರಣಾಂತರಗಳಿಂದ ಅದು ಮುಂಡೂಡಿಕೆ ಆಯಿತು. ಕೊನೇ ಪಕ್ಷ ಟ್ರೇಲರ್​ ಆದರೂ ಬಿಡುಗಡೆ ಆಗಲಿ ಎಂದು ಫ್ಯಾನ್ಸ್​ ಕಾದಿದ್ದರು. ಆದರೆ ಟ್ರೇಲರ್​ ಸಹ ರಿಲೀಸ್​ ಆಗಿಲ್ಲ. ಅದಕ್ಕೆ ಮುಖ್ಯ ಕಾರಣ ಬೇರಾರೂ ಅಲ್ಲ, ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಅವರಿಂದಲೇ ಟ್ರೇಲರ್​ ರಿಲೀಸ್​ ತಡವಾಗುತ್ತಿದೆ.

ವರದಿಗಳ ಪ್ರಕಾರ, ತ್ರಿವಿಕ್ರಮ್​ ಶ್ರೀನಿವಾಸ್​ ಅವರು ಇನ್ನೂ ಕೊನೇ ಹಂತದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಟ್ರೇಲರ್​ ತುಂಬ ಚೆನ್ನಾಗಿ ಮೂಡಿಬರಬೇಕು ಎಂಬ ಕಾರಣಕ್ಕೆ ಅವರು ಕೆಲವು ಬದಲಾವಣೆಗಳನ್ನು ಮಾಡುತ್ತಿದ್ದಾರೆ. ಟ್ರೇಲರ್​ ಹೇಗಿರಬೇಕು ಎಂಬುದಕ್ಕೆ ಅವರು 2-3 ವರ್ಷನ್​ ರೆಡಿ ಮಾಡಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ಯಾವ ಡೈಲಾಗ್​ ಇರಬೇಕು, ಯಾವ ಡೈಲಾಗ್​ ಇರಬಾರದು ಎಂಬುದರ ಬಗ್ಗೆ ಅವರು ಫೈನಲ್​ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಟ್ರೇಲರ್​ ರಿಲೀಸ್​ ತಡವಾಗಿದೆ.

ಇದನ್ನೂ ಓದಿ: ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರದ ಶೂಟಿಂಗ್​ ವಿಡಿಯೋ ಲೀಕ್​

‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್​ ಬಾಬು ಜೊತೆ ಶ್ರೀಲೀಲಾ, ಮೀನಾಕ್ಷಿ ಚೌಧರಿ, ರಮ್ಯಾ ಕೃಷ್ಣ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಥಮನ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಮಹೇಶ್​ ಬಾಬು ಮಾಸ್​ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಈ ಸಿನಿಮಾ ಧೂಳೆಬ್ಬಿಸಲು ರೆಡಿಯಾಗಿದೆ. ಆದಷ್ಟು ಬೇಗ ಟ್ರೇಲರ್​ ಬಿಡುಗಡೆಯಾಗಲಿ ಎಂದು ಅಭಿಮಾನಿಗಳು ಬಯಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್