AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ಅಭಿಮಾನಿಗಳಿಗೆ ಮತ್ತೆ ಬ್ಯಾಡ್​ ನ್ಯೂಸ್; ಈ ಬಾರಿ ಏನಾಯ್ತು?​

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ಅವತಾರ ಭಿನ್ನವಾಗಿದೆ. ಇದೇ ಮೊದಲ ಬಾರಿ ಮಹೇಶ್​ ಬಾಬು ಈ ರೀತಿಯ ಲುಕ್​ನಲ್ಲಿ ತೆರೆಮೇಲೆ ಬರುತ್ತಿದ್ದಾರೆ.

ಮಹೇಶ್​ ಬಾಬು ಅಭಿಮಾನಿಗಳಿಗೆ ಮತ್ತೆ ಬ್ಯಾಡ್​ ನ್ಯೂಸ್; ಈ ಬಾರಿ ಏನಾಯ್ತು?​
ಮಹೇಶ್​ ಬಾಬು
TV9 Web
| Edited By: |

Updated on:Dec 11, 2021 | 7:52 PM

Share

ಈ ಬಾರಿಯ ಸಂಕ್ರಾಂತಿ ಟಾಲಿವುಡ್​​ ಪಾಲಿಗೆ ವಿಶೇಷವಾಗಲಿದೆ. ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿದ್ದು, ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಹಲವು ಸ್ಟಾರ್ ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಚಿತ್ರಮಂದಿರಗಳ ಕೊರತೆ ಎದುರಾದರೂ ಅಚ್ಚರಿ ಏನಿಲ್ಲ. ಈ ಕಾರಣಕ್ಕೆ ಅವರ  ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಮತ್ತೊಮ್ಮೆ ಚಿತ್ರದ ರಿಲೀಸ್​ ದಿನಾಂಕ ಮುಂದೂಡುವ ಸಾಧ್ಯತೆ ಗೋಚರವಾಗಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ಅವತಾರ ಭಿನ್ನವಾಗಿದೆ. ಇದೇ ಮೊದಲ ಬಾರಿ ಮಹೇಶ್​ ಬಾಬು ಈ ರೀತಿಯ ಲುಕ್​ನಲ್ಲಿ ತೆರೆಮೇಲೆ ಬರುತ್ತಿದ್ದಾರೆ. ಅವರ ದೇಹದ ಮೇಲೆ ಟ್ಯಾಟೂ ಇದೆ. ಈ ಚಿತ್ರಕ್ಕಾಗಿ ಮಹೇಶ್​ ಬಾಬು ಉದ್ದ ಕೂದಲು ಬಿಟ್ಟಿದ್ದಾರೆ. ಈ ಎಲ್ಲಾ ವಿಚಾರಗಳು ಗಮನ ಸೆಳೆಯುತ್ತಿವೆ. ಈ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬರಬೇಕಿತ್ತು. ಆದರೆ, ಚಿತ್ರತಂಡ ಮತ್ತೊಮ್ಮೆ ರಿಲೀಸ್​ ದಿನಾಂಕ ಮುಂದೂಡಲಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಮಹೇಶ್ ಬಾಬು ಅವರು ಶೀಘ್ರದಲ್ಲೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಶಸ್ತ್ರ ಚಿಕಿತ್ಸೆ ನಂತರದಲ್ಲಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡು ತಿಂಗಳುಬೇಕು. ಅವರು ಸಂಪೂರ್ಣವಾಗಿ ಫಿಟ್ ಆದ ನಂತರವೇ ‘ಸರ್ಕಾರು ವಾರಿ ಪಾಟ’ ಚಿತ್ರದ ಬಾಕಿಯಿರುವ ಶೂಟಿಂಗ್​ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಎಲ್ಲಾ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾಗಲಿದೆ ಎನ್ನಲಾಗುತ್ತಿದೆ. ಹೀಗಾದಲ್ಲಿ ಸಿನಿಮಾಗಾಗಿ ಮತ್ತೆ ಹಲವು ತಿಂಗಳು ಕಾಯೋದು ಅನಿವಾರ್ಯ ಆಗಲಿದೆ.

ಮೈತ್ರಿ ಮೂವಿ ಮೇಕರ್ಸ್ ​‘ಸರ್ಕಾರು ವಾರಿ ಪಾಟ’ ಸಿನಿಮಾ ನಿರ್ಮಾಣ ಮಾಡುತ್ತಿದೆ. ಪರಶುರಾಮ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಮಹೇಶ್​ ಬಾಬು ಖ್ಯಾತ ನಿರ್ದೇಶಕ ರಾಜಮೌಳಿ ಜತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇದೆ.  ‘ಆರ್​​ಆರ್​ಆರ್​​’ ತೆರೆಗೆ ಬಂದ ನಂತರದಲ್ಲಿ ಈ ಸಿನಿಮಾ ರಿಲೀಸ್​ ಆಗಬೇಕಿತ್ತು. ಆದರೆ, ಈ ಚಿತ್ರದ ಕೆಲಸಗಳು ಕೂಡ ಮುಂದೂಡುವ ಸಾಧ್ಯತೆ ಇದೆ.

ಇದನ್ನೂ ಓದಿ:  ಇಂಗ್ಲಿಷ್​ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಮಹೇಶ್​ ಬಾಬು ಮಗಳು? ನಟನ ಅಚ್ಚರಿಯ ಹೇಳಿಕೆ

ಫಸ್ಟ್​ಲುಕ್​ನಲ್ಲೇ ದಾಖಲೆ ಬರೆದ ಮಹೇಶ್​ ಬಾಬು; ಇದು ‘ಸರ್ಕಾರು ವಾರಿ ಪಾಟ’ ಹವಾ 

Published On - 5:31 pm, Sat, 11 December 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ