AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ಅಭಿಮಾನಿಗಳಿಗೆ ಮತ್ತೆ ಬ್ಯಾಡ್​ ನ್ಯೂಸ್; ಈ ಬಾರಿ ಏನಾಯ್ತು?​

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ಅವತಾರ ಭಿನ್ನವಾಗಿದೆ. ಇದೇ ಮೊದಲ ಬಾರಿ ಮಹೇಶ್​ ಬಾಬು ಈ ರೀತಿಯ ಲುಕ್​ನಲ್ಲಿ ತೆರೆಮೇಲೆ ಬರುತ್ತಿದ್ದಾರೆ.

ಮಹೇಶ್​ ಬಾಬು ಅಭಿಮಾನಿಗಳಿಗೆ ಮತ್ತೆ ಬ್ಯಾಡ್​ ನ್ಯೂಸ್; ಈ ಬಾರಿ ಏನಾಯ್ತು?​
ಮಹೇಶ್​ ಬಾಬು
TV9 Web
| Edited By: |

Updated on:Dec 11, 2021 | 7:52 PM

Share

ಈ ಬಾರಿಯ ಸಂಕ್ರಾಂತಿ ಟಾಲಿವುಡ್​​ ಪಾಲಿಗೆ ವಿಶೇಷವಾಗಲಿದೆ. ಸಾಲುಸಾಲು ಸಿನಿಮಾಗಳು ರಿಲೀಸ್​ ಆಗುತ್ತಿದ್ದು, ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಹಲವು ಸ್ಟಾರ್ ಸಿನಿಮಾಗಳು ಒಟ್ಟಿಗೆ ತೆರೆಗೆ ಬರುತ್ತಿರುವುದರಿಂದ ಚಿತ್ರಮಂದಿರಗಳ ಕೊರತೆ ಎದುರಾದರೂ ಅಚ್ಚರಿ ಏನಿಲ್ಲ. ಈ ಕಾರಣಕ್ಕೆ ಅವರ  ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಮತ್ತೊಮ್ಮೆ ಚಿತ್ರದ ರಿಲೀಸ್​ ದಿನಾಂಕ ಮುಂದೂಡುವ ಸಾಧ್ಯತೆ ಗೋಚರವಾಗಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ಅವತಾರ ಭಿನ್ನವಾಗಿದೆ. ಇದೇ ಮೊದಲ ಬಾರಿ ಮಹೇಶ್​ ಬಾಬು ಈ ರೀತಿಯ ಲುಕ್​ನಲ್ಲಿ ತೆರೆಮೇಲೆ ಬರುತ್ತಿದ್ದಾರೆ. ಅವರ ದೇಹದ ಮೇಲೆ ಟ್ಯಾಟೂ ಇದೆ. ಈ ಚಿತ್ರಕ್ಕಾಗಿ ಮಹೇಶ್​ ಬಾಬು ಉದ್ದ ಕೂದಲು ಬಿಟ್ಟಿದ್ದಾರೆ. ಈ ಎಲ್ಲಾ ವಿಚಾರಗಳು ಗಮನ ಸೆಳೆಯುತ್ತಿವೆ. ಈ ಸಿನಿಮಾ ಏಪ್ರಿಲ್​ 1ರಂದು ತೆರೆಗೆ ಬರಬೇಕಿತ್ತು. ಆದರೆ, ಚಿತ್ರತಂಡ ಮತ್ತೊಮ್ಮೆ ರಿಲೀಸ್​ ದಿನಾಂಕ ಮುಂದೂಡಲಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಮಹೇಶ್ ಬಾಬು ಅವರು ಶೀಘ್ರದಲ್ಲೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಶಸ್ತ್ರ ಚಿಕಿತ್ಸೆ ನಂತರದಲ್ಲಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡು ತಿಂಗಳುಬೇಕು. ಅವರು ಸಂಪೂರ್ಣವಾಗಿ ಫಿಟ್ ಆದ ನಂತರವೇ ‘ಸರ್ಕಾರು ವಾರಿ ಪಾಟ’ ಚಿತ್ರದ ಬಾಕಿಯಿರುವ ಶೂಟಿಂಗ್​ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಎಲ್ಲಾ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾಗಲಿದೆ ಎನ್ನಲಾಗುತ್ತಿದೆ. ಹೀಗಾದಲ್ಲಿ ಸಿನಿಮಾಗಾಗಿ ಮತ್ತೆ ಹಲವು ತಿಂಗಳು ಕಾಯೋದು ಅನಿವಾರ್ಯ ಆಗಲಿದೆ.

ಮೈತ್ರಿ ಮೂವಿ ಮೇಕರ್ಸ್ ​‘ಸರ್ಕಾರು ವಾರಿ ಪಾಟ’ ಸಿನಿಮಾ ನಿರ್ಮಾಣ ಮಾಡುತ್ತಿದೆ. ಪರಶುರಾಮ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಮಹೇಶ್​ ಬಾಬು ಖ್ಯಾತ ನಿರ್ದೇಶಕ ರಾಜಮೌಳಿ ಜತೆ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆಯೂ ಸಾಕಷ್ಟು ನಿರೀಕ್ಷೆ ಇದೆ.  ‘ಆರ್​​ಆರ್​ಆರ್​​’ ತೆರೆಗೆ ಬಂದ ನಂತರದಲ್ಲಿ ಈ ಸಿನಿಮಾ ರಿಲೀಸ್​ ಆಗಬೇಕಿತ್ತು. ಆದರೆ, ಈ ಚಿತ್ರದ ಕೆಲಸಗಳು ಕೂಡ ಮುಂದೂಡುವ ಸಾಧ್ಯತೆ ಇದೆ.

ಇದನ್ನೂ ಓದಿ:  ಇಂಗ್ಲಿಷ್​ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಮಹೇಶ್​ ಬಾಬು ಮಗಳು? ನಟನ ಅಚ್ಚರಿಯ ಹೇಳಿಕೆ

ಫಸ್ಟ್​ಲುಕ್​ನಲ್ಲೇ ದಾಖಲೆ ಬರೆದ ಮಹೇಶ್​ ಬಾಬು; ಇದು ‘ಸರ್ಕಾರು ವಾರಿ ಪಾಟ’ ಹವಾ 

Published On - 5:31 pm, Sat, 11 December 21

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?