AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರು ವಾರಿ ಪಾಟ’ ಬಾಕ್ಸ್​ ಆಫೀಸ್​ ಕಲೆಕ್ಷನ್​: ಮೊದಲ ದಿನ ಮಹೇಶ್​ ಬಾಬು ಸಿನಿಮಾ ಗಳಿಸಿದ್ದು ಎಷ್ಟು?

Sarkaru Vaari Paata Box Office Collection: ‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಮಹೇಶ್​ ಬಾಬು ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ಫಸ್ಟ್​ ಡೇ ಬರೋಬ್ಬರಿ 45 ಕೋಟಿ ರೂಪಾಯಿ ಗಳಿಕೆ ಆಗಿದೆ ಎಂದು ವರದಿ ಆಗಿದೆ.

‘ಸರ್ಕಾರು ವಾರಿ ಪಾಟ’ ಬಾಕ್ಸ್​ ಆಫೀಸ್​ ಕಲೆಕ್ಷನ್​: ಮೊದಲ ದಿನ ಮಹೇಶ್​ ಬಾಬು ಸಿನಿಮಾ ಗಳಿಸಿದ್ದು ಎಷ್ಟು?
ಮಹೇಶ್ ಬಾಬು
TV9 Web
| Edited By: |

Updated on:May 13, 2022 | 12:27 PM

Share

ನಟ ಮಹೇಶ್​ ಬಾಬು (Mahesh Babu) ಅವರ ಸಿನಿಮಾಗಳಿಗೆ ಎಲ್ಲ ಕಡೆಗಳಲ್ಲಿ ಒಳ್ಳೆಯ ಮಾರ್ಕೆಟ್​ ಇದೆ. ತೆಲುಗು ರಾಜ್ಯಗಳಲ್ಲಿ ಮಾತ್ರಲ್ಲದೇ ದೇಶಾದ್ಯಂತ ಅವರ ಚಿತ್ರಗಳನ್ನು ಜನರು ವೀಕ್ಷಿಸುತ್ತಾರೆ. ಮೇ 12ರಂದು ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ (Sarkaru Vaari Paata) ಸಿನಿಮಾ ಬಿಡುಗಡೆ ಆಯಿತು. ಮೊದಲ ದಿನವೇ ಈ ಚಿತ್ರವನ್ನು ಜನರು ಮುಗಿಬಿದ್ದು ನೋಡಿದ್ದಾರೆ. ಪರಿಣಾಮವಾಗಿ ಸಿನಿಮಾ ಒಳ್ಳೆಯ ಓಪನಿಂಗ್​ ಪಡೆದುಕೊಂಡಿದೆ. ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಪ್ರೇಕ್ಷಕರಿಂದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿತು. ಬಾಕ್ಸ್​ ಆಫೀಸ್​ ಗಳಿಕೆ (Sarkaru Vaari Paata Box Office Collection) ಮೇಲೆ ಅದು ಪರಿಣಾಮ ಬೀರಿಲ್ಲ. ಮೊದಲ ದಿನವೇ ಈ ಚಿತ್ರ ಬಹುಕೋಟಿ ರೂಪಾಯಿ ಬಿಸ್ನೆಸ್​ ಮಾಡಿದೆ. ಇದು ಬಹುನಿರೀಕ್ಷಿತ ಚಿತ್ರ ಆಗಿದ್ದರೂ ಕೂಡ ಬೇರೆ ಭಾಷೆಗಳಿಗೆ ಡಬ್​ ಆಗಿಲ್ಲ. ಕೇವಲ ತೆಲುಗಿನಲ್ಲಿ ರಿಲೀಸ್​ ಆದ ಈ ಸಿನಿಮಾಗೆ ಪ್ರೇಕ್ಷಕರು ಭರ್ಜರಿ ರೆಸ್ಪಾನ್ಸ್​ ನೀಡಿದ್ದಾರೆ. ಫಸ್ಟ್​ ಡೇ ಬರೋಬ್ಬರಿ 45 ಕೋಟಿ ರೂಪಾಯಿ ಗಳಿಕೆ ಆಗಿದೆ ಎಂಬ ವರದಿ ಆಗಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ಅವರು ಮಾಸ್ ಅವತಾರ ತಾಳಿದ್ದಾರೆ. ಬ್ಯಾಂಕಿಂಗ್​ ಕ್ಷೇತ್ರದ ಕುರಿತಾದ ಕಥೆಯನ್ನು ಇಟ್ಟುಕೊಂಡು ಅವರು ಪ್ರೇಕ್ಷಕರಿಗೆ ಸಂದೇಶ ನೀಡಲು ಪ್ರಯತ್ನಿಸಿದ್ದಾರೆ. ಪರಶುರಾಮ್​ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ಮಹೇಶ್​ ಬಾಬು ಅವರಿಗೆ ಜೋಡಿಯಾಗಿ ಕೀರ್ತಿ ಸುರೇಶ್​ ನಟಿಸಿದ್ದಾರೆ. ಅದ್ದೂರಿ ಆ್ಯಕ್ಷನ್​ ದೃಶ್ಯಗಳನ್ನು ಮಹೇಶ್​ ಬಾಬು ಫ್ಯಾನ್ಸ್​ ಇಷ್ಟಪಟ್ಟಿದ್ದಾರೆ. ಒಟ್ಟಾರೆಯಾಗಿ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಕಲೆಕ್ಷನ್​ ಮಾಡುತ್ತಿದೆ.

ಇದನ್ನೂ ಓದಿ
Image
ಮಹೇಶ್​ ಬಾಬು ಮಾತಿಗೆ ಬೆಂಬಲ ನೀಡಿದ ಕಂಗನಾ; ಬಾಲಿವುಡ್ ವರ್ಸಸ್​​ ಸೌತ್​ ಚರ್ಚೆ ಇನ್ನಷ್ಟು ಜೋರು
Image
‘ಒಮ್ಮೆ ನೋಡಬಹುದು, ಹೆಚ್ಚು ಮನರಂಜನೆ ಇಲ್ಲ’: ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಪ್ರೇಕ್ಷಕರ ಪ್ರಾಮಾಣಿಕ ವಿಮರ್ಶೆ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?

ಆಂಧ್ರ ಮತ್ತು ತೆಲಂಗಾಣದ ಯಾವ ಏರಿಯಾದಲ್ಲಿ ಎಷ್ಟು ಕಲೆಕ್ಷನ್​ ಆಗಿದೆ ಎಂಬ ಕುರಿತು ಟ್ರೇಡ್​ ಅನಲಿಸ್ಟ್ ರಮೇಶ್​ ಬಾಲ ಅವರು ಟ್ವೀಟ್​ ಮಾಡಿದ್ದಾರೆ. ತೆಲುಗು ರಾಜ್ಯಗಳಿಂದ ಮೊದಲ ದಿನ 36.63 ಕೋಟಿ ರೂಪಾಯಿ ಕಮಾಯಿ ಆಗಿದೆ ಎಂದು ಅವರು ​ಮಾಹಿತಿ ಹಂಚಿಕೊಂಡಿದ್ದಾರೆ. ವಿದೇಶದಲ್ಲೂ ಮಹೇಶ್​ ಬಾಬು ಅವರಿಗೆ ಅಭಿಮಾನಿಗಳಿದ್ದಾರೆ. ಈ ಚಿತ್ರಕ್ಕೆ ಅಮೆರಿಕದಲ್ಲಿ 1.5 ಮಿಲಿಯನ್​ ಡಾಲರ್​ ಕಲೆಕ್ಷನ್​ ಆಗಿದೆ ಎಂದು ವರದಿ ಆಗಿದೆ. ಈ ಎಲ್ಲ ಕಲೆಕ್ಷನ್​ ರಿಪೋರ್ಟ್​ ಕುರಿತು ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್’ ಕಡೆಯಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ.

ಮಹೇಶ್​ ಬಾಬು ಅವರಿಗೆ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಇದೆ. ಅವರ ಸಿನಿಮಾಗಳು ದಕ್ಷಿಣದಲ್ಲಿ ಸೂಪರ್​ ಹಿಟ್​ ಆಗುತ್ತವೆ. ಈ ಹಿಂದೆ ಬಿಡುಗಡೆ ಆಗಿದ್ದ ‘ಸರಿಲೇರು ನೀಕೆವ್ವರು’ ಸಿನಿಮಾ ಕೂಡ ಹಿಟ್​ ಆಗಿತ್ತು. ಈಗ ಅವರು ‘ಸರ್ಕಾರು ವಾರಿ ಪಾಟ’ ಚಿತ್ರದ ಮೂಲಕ ಮತ್ತೊಂದು ಗೆಲುವು ಕಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಬಾಲಿವುಡ್​ ಬಗ್ಗೆ ನೀಡಿದ ಹೇಳಿಕೆ ಕೂಡ ಸಖತ್​ ಚರ್ಚೆ ಹುಟ್ಟು ಹಾಕಿದೆ. ‘ಬಾಲಿವುಡ್​ಗೆ ನನ್ನನ್ನು ಭರಿಸಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದರು. ಆ ಹೇಳಿಕೆ ಕುರಿತು ಬಾಲಿವುಡ್​ನ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ‘ಮಹೇಶ್ ಬಾಬು ಹೇಳಿದ್ದು ಸರಿ’ ಎಂದು ಕಂಗನಾ ರಣಾವತ್​ ಪ್ರತಿಕ್ರಿಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:27 pm, Fri, 13 May 22

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?