AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSMB28: ಮಹೇಶ್​ ಬಾಬು 28ನೇ ಚಿತ್ರದ ಶೀರ್ಷಿಕೆ ಅನಾವರಣಕ್ಕೆ ದಿನಾಂಕ ಫಿಕ್ಸ್​; ಚಿತ್ರಮಂದಿರಗಳಲ್ಲಿ ವಿಶೇಷ ವಿಡಿಯೋ

Mahesh Babu: ಮಹೇಶ್​ ಬಾಬು ತಂದೆ, ಸೂಪರ್​ ಸ್ಟಾರ್ ಕೃಷ್ಣ ಅವರ ಬರ್ತ್​ಡೇ ಪ್ರಯುಕ್ತ ಇಷ್ಟೆಲ್ಲ ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಮೇ 31ರಂದು ಮಹೇಶ್​ ಬಾಬು ಅವರ 28ನೇ ಚಿತ್ರದ ಟೈಟಲ್​ ಅನಾವರಣ ಆಗಲಿದೆ.

SSMB28: ಮಹೇಶ್​ ಬಾಬು 28ನೇ ಚಿತ್ರದ ಶೀರ್ಷಿಕೆ ಅನಾವರಣಕ್ಕೆ ದಿನಾಂಕ ಫಿಕ್ಸ್​; ಚಿತ್ರಮಂದಿರಗಳಲ್ಲಿ ವಿಶೇಷ ವಿಡಿಯೋ
ಮಹೇಶ್​ ಬಾಬು, ಸೂಪರ್​ ಸ್ಟಾರ್ ಕೃಷ್ಣ
Follow us
ಮದನ್​ ಕುಮಾರ್​
|

Updated on: May 27, 2023 | 9:20 PM

ಮಹೇಶ್​ ಬಾಬು (Mahesh Babu) ನಟನೆಯ ಸಿನಿಮಾ ಎಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್​. ಕಾರಣಾಂತರಗಳಿಂದ ಮಹೇಶ್​ ಬಾಬು ಅವರು ಹೊಸ ಸಿನಿಮಾದ ಕೆಲಸಗಳನ್ನು ನಿಧಾನವಾಗಿ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಅವರು ಅವಸರ ತೋರಿಸುತ್ತಿಲ್ಲ. ಸದ್ಯ ಅವರ 28ನೇ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿವೆ. ಈ ಚಿತ್ರಕ್ಕೆ ತ್ರಿವಿಕ್ರಂ ಶ್ರೀನಿವಾಸ್​ ಅವರ ನಿರ್ದೇಶನ ಮಾಡುತ್ತಿದ್ದಾರೆ. ಆದರೆ ಈ ಸಿನಿಮಾದ ಹೆಸರು ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅದನ್ನು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಿಗೆ ಇದೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಎಸ್​ಎಸ್​ಎಂಬಿ28’ (SSMB28) ಎಂದು ಕರೆಯಲಾಗುತ್ತಿದೆ. ಈಗ ಈ ಚಿತ್ರದ ಟೈಟಲ್​ ಅನೌನ್ಸ್​ ಮಾಡುವ ಸಮಯ ಹತ್ತಿರ ಆಗಿದೆ. ಮೇ 31ರಂದು ಶೀರ್ಷಿಕೆ ಬಹಿರಂಗ ಆಗಲಿದೆ. ಅದಕ್ಕಾಗಿ ಚಿತ್ರತಂಡದವರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಟಾಲಿವುಡ್​ (Tollywood) ಪ್ರೇಕ್ಷಕರು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೇ 31ರಂದು ಚಿತ್ರಮಂದಿರಗಳಲ್ಲಿ ವಿಶೇಷ ವಿಡಿಯೋ ಬಿತ್ತರ ಆಗಲಿದೆ. ಅದರಲ್ಲಿ ಟೈಟಲ್​ ರಿವೀಲ್​ ಆಗಲಿದೆ.

ಮಹೇಶ್​ ಬಾಬು ತಂದೆ, ಸೂಪರ್​ ಸ್ಟಾರ್ ಕೃಷ್ಣ ಅವರ ಬರ್ತ್​ಡೇ ಪ್ರಯುಕ್ತ ಇಷ್ಟೆಲ್ಲ ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಮೇ 31ರಂದು ಕೃಷ್ಣ ಜನ್ಮದಿನ. ಅಂದು ಅವರ ಹಳೇ ಸಿನಿಮಾ ಮರು ಬಿಡುಗಡೆ ಆಗಲಿದೆ. ‘ಮೋಸಗಾಳ್ಳಕು ಮೋಸಗಾಳ್ಳು’ ಸಿನಿಮಾ ರೀ-ರಿಲೀಸ್​ ಆಗುತ್ತಿದ್ದು, ಅದರ ಜೊತೆ ಮಹೇಶ್​ ಬಾಬು ಅವರು 28ನೇ ಚಿತ್ರದ ಟೈಟಲ್​ ಅನಾವರಣ ಆಗಲಿದೆ. ಅದನ್ನು ತಿಳಿಸುವ ಸಲುವಾಗಿ ಒಂದು ಪೋಸ್ಟರ್​ ಹಂಚಿಕೊಳ್ಳಲಾಗಿದೆ. ಅದರಲ್ಲಿ ಮಹೇಶ್​ ಬಾಬು ಅವರ ಮುಖ ಕಾಣಿಸಿಲ್ಲ. ತಲೆಗೆ ಬಟ್ಟೆ ಕಟ್ಟಿಕೊಂಡು, ಕ್ಯಾಮೆರಾಗೆ ಬೆನ್ನು ಹಾಕಿ ಹೋಗುತ್ತಿರುವ ಶೈಲಿಯಲ್ಲಿ ಮಹೇಶ್​ ಬಾಬು ಪೋಸ್​ ನೀಡಿದ್ದಾರೆ. ಕೈಯಲ್ಲಿ ಸಿಗರೇಟ್​ ಹಿಡಿದಿರುವಂತಿದೆ. ಈ ಗೆಟಪ್​ ಮೂಲಕ ಕೌತುಕ ಮೂಡಿಸಲಾಗಿದೆ.

ಇದನ್ನೂ ಓದಿ: Sitara: ಚಿಕ್ಕ ವಯಸ್ಸಿನಲ್ಲೇ ದೊಡ್ಡ ಡೀಲ್​ ಒಪ್ಪಿಕೊಂಡ ಮಹೇಶ್​ ಬಾಬು ಪುತ್ರಿ ಸಿತಾರಾ; ಸಿಗುತ್ತಿದೆ ಭರ್ಜರಿ ಸಂಭಾವನೆ

‘ಹಾರಿಕಾ ಆ್ಯಂಡ್​ ಹಾಸಿನಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಎಸ್​. ರಾಧಾಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸುತ್ತಿದ್ದು, ಕನ್ನಡದ ಹುಡುಗಿ ಶ್ರೀಲೀಲಾ ಕೂಡ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಎಸ್​. ಥಮನ್​ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಅನೌನ್ಸ್​ ಆದ ಬಳಿಕ ಚಿತ್ರದ ಮೇಲಿನ ಕ್ರೇಜ್​ ಇನ್ನಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: Mahesh Babu: ‘ವಿಜಯ್​ ಅವರನ್ನು ನೋಡಿ ಮಹೇಶ್​ ಬಾಬು ಕಲಿಯಬೇಕು’; ನೇರವಾಗಿ ಕಿವಿಮಾತು ಹೇಳಿದ ‘ಪ್ರಿನ್ಸ್’ ಫ್ಯಾನ್ಸ್​

2022ರ ವರ್ಷ ಮಹೇಶ್​ ಬಾಬು ಕುಟುಂಬಕ್ಕೆ ಸಖತ್​ ನೋವುಂಟು ಮಾಡಿತು. ಅವರ ತಂದೆ-ತಾಯಿ ಇಬ್ಬರೂ ಇಹಲೋಕ ತ್ಯಜಿಸಿದರು. ಆ ಕಾರಣಕ್ಕಾಗಿ ಮಹೇಶ್​ ಬಾಬು ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆಯುವುದು ಅನಿವಾರ್ಯ ಆಯಿತು. ಹಾಗಾಗಿ ಅವರ ಚಿತ್ರದ ಕೆಲಸಗಳು ವಿಳಂಬ ಆದವು. ಆದಷ್ಟು ಬೇಗ ಮಹೇಶ್​ ಬಾಬು ಅವರನ್ನು ದೊಡ್ಡ ಪರದೆ ಮೇಲೆ ನೋಡಬೇಕು ಎಂದು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ