AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSMB28: ಮಹೇಶ್​ ಬಾಬು 28ನೇ ಚಿತ್ರದ ಶೀರ್ಷಿಕೆ ಅನಾವರಣಕ್ಕೆ ದಿನಾಂಕ ಫಿಕ್ಸ್​; ಚಿತ್ರಮಂದಿರಗಳಲ್ಲಿ ವಿಶೇಷ ವಿಡಿಯೋ

Mahesh Babu: ಮಹೇಶ್​ ಬಾಬು ತಂದೆ, ಸೂಪರ್​ ಸ್ಟಾರ್ ಕೃಷ್ಣ ಅವರ ಬರ್ತ್​ಡೇ ಪ್ರಯುಕ್ತ ಇಷ್ಟೆಲ್ಲ ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಮೇ 31ರಂದು ಮಹೇಶ್​ ಬಾಬು ಅವರ 28ನೇ ಚಿತ್ರದ ಟೈಟಲ್​ ಅನಾವರಣ ಆಗಲಿದೆ.

SSMB28: ಮಹೇಶ್​ ಬಾಬು 28ನೇ ಚಿತ್ರದ ಶೀರ್ಷಿಕೆ ಅನಾವರಣಕ್ಕೆ ದಿನಾಂಕ ಫಿಕ್ಸ್​; ಚಿತ್ರಮಂದಿರಗಳಲ್ಲಿ ವಿಶೇಷ ವಿಡಿಯೋ
ಮಹೇಶ್​ ಬಾಬು, ಸೂಪರ್​ ಸ್ಟಾರ್ ಕೃಷ್ಣ
ಮದನ್​ ಕುಮಾರ್​
|

Updated on: May 27, 2023 | 9:20 PM

Share

ಮಹೇಶ್​ ಬಾಬು (Mahesh Babu) ನಟನೆಯ ಸಿನಿಮಾ ಎಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್​. ಕಾರಣಾಂತರಗಳಿಂದ ಮಹೇಶ್​ ಬಾಬು ಅವರು ಹೊಸ ಸಿನಿಮಾದ ಕೆಲಸಗಳನ್ನು ನಿಧಾನವಾಗಿ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಅವರು ಅವಸರ ತೋರಿಸುತ್ತಿಲ್ಲ. ಸದ್ಯ ಅವರ 28ನೇ ಸಿನಿಮಾದ ಕೆಲಸಗಳು ಪ್ರಗತಿಯಲ್ಲಿವೆ. ಈ ಚಿತ್ರಕ್ಕೆ ತ್ರಿವಿಕ್ರಂ ಶ್ರೀನಿವಾಸ್​ ಅವರ ನಿರ್ದೇಶನ ಮಾಡುತ್ತಿದ್ದಾರೆ. ಆದರೆ ಈ ಸಿನಿಮಾದ ಹೆಸರು ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅದನ್ನು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಿಗೆ ಇದೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಎಸ್​ಎಸ್​ಎಂಬಿ28’ (SSMB28) ಎಂದು ಕರೆಯಲಾಗುತ್ತಿದೆ. ಈಗ ಈ ಚಿತ್ರದ ಟೈಟಲ್​ ಅನೌನ್ಸ್​ ಮಾಡುವ ಸಮಯ ಹತ್ತಿರ ಆಗಿದೆ. ಮೇ 31ರಂದು ಶೀರ್ಷಿಕೆ ಬಹಿರಂಗ ಆಗಲಿದೆ. ಅದಕ್ಕಾಗಿ ಚಿತ್ರತಂಡದವರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಟಾಲಿವುಡ್​ (Tollywood) ಪ್ರೇಕ್ಷಕರು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮೇ 31ರಂದು ಚಿತ್ರಮಂದಿರಗಳಲ್ಲಿ ವಿಶೇಷ ವಿಡಿಯೋ ಬಿತ್ತರ ಆಗಲಿದೆ. ಅದರಲ್ಲಿ ಟೈಟಲ್​ ರಿವೀಲ್​ ಆಗಲಿದೆ.

ಮಹೇಶ್​ ಬಾಬು ತಂದೆ, ಸೂಪರ್​ ಸ್ಟಾರ್ ಕೃಷ್ಣ ಅವರ ಬರ್ತ್​ಡೇ ಪ್ರಯುಕ್ತ ಇಷ್ಟೆಲ್ಲ ಪ್ಲ್ಯಾನ್​ ಮಾಡಿಕೊಳ್ಳಲಾಗಿದೆ. ಮೇ 31ರಂದು ಕೃಷ್ಣ ಜನ್ಮದಿನ. ಅಂದು ಅವರ ಹಳೇ ಸಿನಿಮಾ ಮರು ಬಿಡುಗಡೆ ಆಗಲಿದೆ. ‘ಮೋಸಗಾಳ್ಳಕು ಮೋಸಗಾಳ್ಳು’ ಸಿನಿಮಾ ರೀ-ರಿಲೀಸ್​ ಆಗುತ್ತಿದ್ದು, ಅದರ ಜೊತೆ ಮಹೇಶ್​ ಬಾಬು ಅವರು 28ನೇ ಚಿತ್ರದ ಟೈಟಲ್​ ಅನಾವರಣ ಆಗಲಿದೆ. ಅದನ್ನು ತಿಳಿಸುವ ಸಲುವಾಗಿ ಒಂದು ಪೋಸ್ಟರ್​ ಹಂಚಿಕೊಳ್ಳಲಾಗಿದೆ. ಅದರಲ್ಲಿ ಮಹೇಶ್​ ಬಾಬು ಅವರ ಮುಖ ಕಾಣಿಸಿಲ್ಲ. ತಲೆಗೆ ಬಟ್ಟೆ ಕಟ್ಟಿಕೊಂಡು, ಕ್ಯಾಮೆರಾಗೆ ಬೆನ್ನು ಹಾಕಿ ಹೋಗುತ್ತಿರುವ ಶೈಲಿಯಲ್ಲಿ ಮಹೇಶ್​ ಬಾಬು ಪೋಸ್​ ನೀಡಿದ್ದಾರೆ. ಕೈಯಲ್ಲಿ ಸಿಗರೇಟ್​ ಹಿಡಿದಿರುವಂತಿದೆ. ಈ ಗೆಟಪ್​ ಮೂಲಕ ಕೌತುಕ ಮೂಡಿಸಲಾಗಿದೆ.

ಇದನ್ನೂ ಓದಿ: Sitara: ಚಿಕ್ಕ ವಯಸ್ಸಿನಲ್ಲೇ ದೊಡ್ಡ ಡೀಲ್​ ಒಪ್ಪಿಕೊಂಡ ಮಹೇಶ್​ ಬಾಬು ಪುತ್ರಿ ಸಿತಾರಾ; ಸಿಗುತ್ತಿದೆ ಭರ್ಜರಿ ಸಂಭಾವನೆ

‘ಹಾರಿಕಾ ಆ್ಯಂಡ್​ ಹಾಸಿನಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಎಸ್​. ರಾಧಾಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸುತ್ತಿದ್ದು, ಕನ್ನಡದ ಹುಡುಗಿ ಶ್ರೀಲೀಲಾ ಕೂಡ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಎಸ್​. ಥಮನ್​ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಅನೌನ್ಸ್​ ಆದ ಬಳಿಕ ಚಿತ್ರದ ಮೇಲಿನ ಕ್ರೇಜ್​ ಇನ್ನಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: Mahesh Babu: ‘ವಿಜಯ್​ ಅವರನ್ನು ನೋಡಿ ಮಹೇಶ್​ ಬಾಬು ಕಲಿಯಬೇಕು’; ನೇರವಾಗಿ ಕಿವಿಮಾತು ಹೇಳಿದ ‘ಪ್ರಿನ್ಸ್’ ಫ್ಯಾನ್ಸ್​

2022ರ ವರ್ಷ ಮಹೇಶ್​ ಬಾಬು ಕುಟುಂಬಕ್ಕೆ ಸಖತ್​ ನೋವುಂಟು ಮಾಡಿತು. ಅವರ ತಂದೆ-ತಾಯಿ ಇಬ್ಬರೂ ಇಹಲೋಕ ತ್ಯಜಿಸಿದರು. ಆ ಕಾರಣಕ್ಕಾಗಿ ಮಹೇಶ್​ ಬಾಬು ಅವರು ಸಿನಿಮಾ ಕೆಲಸಗಳಿಂದ ಬ್ರೇಕ್​ ಪಡೆಯುವುದು ಅನಿವಾರ್ಯ ಆಯಿತು. ಹಾಗಾಗಿ ಅವರ ಚಿತ್ರದ ಕೆಲಸಗಳು ವಿಳಂಬ ಆದವು. ಆದಷ್ಟು ಬೇಗ ಮಹೇಶ್​ ಬಾಬು ಅವರನ್ನು ದೊಡ್ಡ ಪರದೆ ಮೇಲೆ ನೋಡಬೇಕು ಎಂದು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ