AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಲ್ಲಿ ಮಹೇಶ್ ಬಾಬು ಮಗನಿಗೆ ಶಿಕ್ಷಣ; ಇಂಗ್ಲೆಂಡ್​​ಗೆ ಹಾರಲಿದೆ ಫ್ಯಾಮಿಲಿ

ಈ ಮೊದಲು ಮಹೇಶ್ ಬಾಬು ಅಮೆರಿಕಕ್ಕೆ ತೆರಳಿದ್ದು ಇದೇ ಕಾರಣಕ್ಕೆ ಎಂದೇ ಹೇಳಲಾಗಿತ್ತು. ಅವರು ಅಲ್ಲಿ ಸಾಕಷ್ಟು ಶಾಲೆಗಳನ್ನು ಹುಡುಕಾಡಿದ್ದರು. ಆದರೆ, ಯಾವುದೂ ಅವರಿಗೆ ಇಷ್ಟವಾಗಿಲ್ಲ. ಈ ಕಾರಣಕ್ಕೆ ಈಗ ಲಂಡನ್​ಗೆ ಹಾರುತ್ತಿದ್ದಾರೆ.

ಲಂಡನ್​ನಲ್ಲಿ ಮಹೇಶ್ ಬಾಬು ಮಗನಿಗೆ ಶಿಕ್ಷಣ; ಇಂಗ್ಲೆಂಡ್​​ಗೆ ಹಾರಲಿದೆ ಫ್ಯಾಮಿಲಿ
ಗೌತಮ್-ಮಹೇಶ್ ಬಾಬು
TV9 Web
| Edited By: |

Updated on:Jul 16, 2022 | 10:17 AM

Share

ನಟ ಮಹೇಶ್ ಬಾಬು (Mahesh Babu) ಅವರು ಪ್ರತಿ ಸಿನಿಮಾ ತೆರೆಗೆ ಬಂದ ನಂತರದಲ್ಲಿ ವಿದೇಶಕ್ಕೆ ತೆರಳುತ್ತಾರೆ. ಫ್ಯಾಮಿಲಿ ಜತೆ ಸಮಯ ಕಳೆದು ಬರುತ್ತಾರೆ. ಇತ್ತೀಚೆಗೆ ಅವರು ಜರ್ಮನಿ ಹಾಗೂ ಅಮೆರಿಕಕ್ಕೆ ತೆರಳಿ ಬಂದಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈಗ ಮಹೇಶ್ ಬಾಬು ಅವರು ಮತ್ತೆ ವಿದೇಶಕ್ಕೆ ತೆರಳಲು ರೆಡಿ ಆಗಿದ್ದಾರೆ. ಹಾಗಂದ ಮಾತ್ರಕ್ಕೆ ಈ ಬಾರಿ ಅವರು ಟ್ರಿಪ್​ಗೆ ತೆರಳುತ್ತಿಲ್ಲ. ಲಂಡನ್​ ಶಾಲೆಯೊಂದಕ್ಕೆ ಮಗ ಗೌತಮ್ ಅಡ್ಮಿಷನ್​ಗೆ ಅವರು ತೆರಳುತ್ತಿದ್ದಾರೆ ಎನ್ನಲಾಗಿದೆ.

ಸ್ಟಾರ್ ನಟರು ತಮ್ಮ ಮಕ್ಕಳಿಗೆ ವಿದೇಶದಲ್ಲಿ ಓದಿಸಲು ಇಷ್ಟಪಡುತ್ತಾರೆ. ಅನೇಕ ಸೆಲೆಬ್ರಿಟಿ ಮಕ್ಕಳು ಈಗಾಗಲೇ ವಿದೇಶದಲ್ಲಿ ಓದುತ್ತಿದ್ದಾರೆ. ಅದೇ ರೀತಿ ಮಹೇಶ್ ಬಾಬು ಕೂಡ ಗೌತಮ್​ಗೆ ವಿದೇಶದಲ್ಲಿ ಶಿಕ್ಷಣ ಕೊಡಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರೌಢಶಿಕ್ಷಣವನ್ನು ಗೌತಮ್​ ಲಂಡನ್​ನಲ್ಲಿ ಮಾಡಲಿದ್ದಾನೆ.

ಈ ಮೊದಲು ಮಹೇಶ್ ಬಾಬು ಅಮೆರಿಕಕ್ಕೆ ತೆರಳಿದ್ದು ಇದೇ ಕಾರಣಕ್ಕೆ ಎಂದೇ ಹೇಳಲಾಗಿತ್ತು. ಅವರು ಅಲ್ಲಿ ಸಾಕಷ್ಟು ಶಾಲೆಗಳನ್ನು ಹುಡುಕಾಡಿದ್ದರು. ಆದರೆ, ಯಾವುದೂ ಅವರಿಗೆ ಇಷ್ಟವಾಗಿಲ್ಲ. ಈ ಕಾರಣಕ್ಕೆ ಈಗ ಲಂಡನ್​ಗೆ ಹಾರುತ್ತಿದ್ದಾರೆ. ಅಲ್ಲಿ ಮಗನಿಗೋಸ್ಕರ ಒಂದೊಳ್ಳೆಯ ಶಾಲೆಯನ್ನು ಅವರು ಹುಡುಕಲಿದ್ದಾರೆ. ಅಲ್ಲಿ ಪ್ರವೇಶ ಪಡೆದ ನಂತರ ಗೌತಮ್ ತಂದೆ ಜತೆ ಮರಳಿ ಭಾರತಕ್ಕೆ ಬರಲಿದ್ದಾರೆ.

ಇದನ್ನೂ ಓದಿ
Image
ಮಹೇಶ್ ಬಾಬು-ತ್ರಿವಿಕ್ರಮ್ ಸಿನಿಮಾ ರಿಲೀಸ್​ ಬಗ್ಗೆ ಘೋಷಣೆ; ಆಗಸ್ಟ್​ನಿಂದ ಶೂಟಿಂಗ್
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ಮಹೇಶ್ ಬಾಬು ಅವರು ಆಗಸ್ಟ್​ 9ರಂದು ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಗೌತಮ್ ಕೂಡ ಈ ಸೆಲಬ್ರೇಷನ್​ನಲ್ಲಿ ಭಾಗಿಯಾಗಲಿದ್ದಾರೆ. ಆ ಬಳಿಕ ಗೌತಮ್ ವಿದೇಶಕ್ಕೆ ತೆರಳಲಿದ್ದಾನೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮಹೇಶ್ ಬಾಬು-ತ್ರಿವಿಕ್ರಮ್ ಸಿನಿಮಾ ರಿಲೀಸ್​ ಬಗ್ಗೆ ಘೋಷಣೆ; ಆಗಸ್ಟ್​ನಿಂದ ಶೂಟಿಂಗ್

ಮಹೇಶ್ ಬಾಬು ಹಾಗೂ ನಿರ್ದೇಶಕ ತ್ರಿವಿಕ್ರಮ್ ಅವರು ಮುಂದಿನ ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಸಿನಿಮಾದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ. ಈ ಚಿತ್ರ ಯಾವ ರೀತಿಯ ಶೀರ್ಷಿಕೆ ಇಡುತ್ತಾರೆ ಎಂಬ ಕುತೂಹಲ ಇದೆ. ಈ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ. ಈ ಚಿತ್ರದಲ್ಲಿ ಮತ್ತೋರ್ವ ನಾಯಕಿ ಇರಲಿದ್ದಾರೆ. ಆ ನಾಯಕಿ ಯಾರು ಎಂಬುದು ಇನ್ನಷ್ಟೇ ಅಧಿಕೃತಗವಾಗಬೇಕಿದೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡ ನಂತರದಲ್ಲಿ ಮಹೇಶ್ ಬಾಬು ಅವರು ರಾಜಮೌಳಿ ಜತೆ ಕೈ ಜೋಡಿಸಲಿದ್ದಾರೆ.ab

Published On - 10:15 am, Sat, 16 July 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್