AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​ನಲ್ಲಿ ಮಹೇಶ್ ಬಾಬು ಮಗನಿಗೆ ಶಿಕ್ಷಣ; ಇಂಗ್ಲೆಂಡ್​​ಗೆ ಹಾರಲಿದೆ ಫ್ಯಾಮಿಲಿ

ಈ ಮೊದಲು ಮಹೇಶ್ ಬಾಬು ಅಮೆರಿಕಕ್ಕೆ ತೆರಳಿದ್ದು ಇದೇ ಕಾರಣಕ್ಕೆ ಎಂದೇ ಹೇಳಲಾಗಿತ್ತು. ಅವರು ಅಲ್ಲಿ ಸಾಕಷ್ಟು ಶಾಲೆಗಳನ್ನು ಹುಡುಕಾಡಿದ್ದರು. ಆದರೆ, ಯಾವುದೂ ಅವರಿಗೆ ಇಷ್ಟವಾಗಿಲ್ಲ. ಈ ಕಾರಣಕ್ಕೆ ಈಗ ಲಂಡನ್​ಗೆ ಹಾರುತ್ತಿದ್ದಾರೆ.

ಲಂಡನ್​ನಲ್ಲಿ ಮಹೇಶ್ ಬಾಬು ಮಗನಿಗೆ ಶಿಕ್ಷಣ; ಇಂಗ್ಲೆಂಡ್​​ಗೆ ಹಾರಲಿದೆ ಫ್ಯಾಮಿಲಿ
ಗೌತಮ್-ಮಹೇಶ್ ಬಾಬು
TV9 Web
| Edited By: |

Updated on:Jul 16, 2022 | 10:17 AM

Share

ನಟ ಮಹೇಶ್ ಬಾಬು (Mahesh Babu) ಅವರು ಪ್ರತಿ ಸಿನಿಮಾ ತೆರೆಗೆ ಬಂದ ನಂತರದಲ್ಲಿ ವಿದೇಶಕ್ಕೆ ತೆರಳುತ್ತಾರೆ. ಫ್ಯಾಮಿಲಿ ಜತೆ ಸಮಯ ಕಳೆದು ಬರುತ್ತಾರೆ. ಇತ್ತೀಚೆಗೆ ಅವರು ಜರ್ಮನಿ ಹಾಗೂ ಅಮೆರಿಕಕ್ಕೆ ತೆರಳಿ ಬಂದಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈಗ ಮಹೇಶ್ ಬಾಬು ಅವರು ಮತ್ತೆ ವಿದೇಶಕ್ಕೆ ತೆರಳಲು ರೆಡಿ ಆಗಿದ್ದಾರೆ. ಹಾಗಂದ ಮಾತ್ರಕ್ಕೆ ಈ ಬಾರಿ ಅವರು ಟ್ರಿಪ್​ಗೆ ತೆರಳುತ್ತಿಲ್ಲ. ಲಂಡನ್​ ಶಾಲೆಯೊಂದಕ್ಕೆ ಮಗ ಗೌತಮ್ ಅಡ್ಮಿಷನ್​ಗೆ ಅವರು ತೆರಳುತ್ತಿದ್ದಾರೆ ಎನ್ನಲಾಗಿದೆ.

ಸ್ಟಾರ್ ನಟರು ತಮ್ಮ ಮಕ್ಕಳಿಗೆ ವಿದೇಶದಲ್ಲಿ ಓದಿಸಲು ಇಷ್ಟಪಡುತ್ತಾರೆ. ಅನೇಕ ಸೆಲೆಬ್ರಿಟಿ ಮಕ್ಕಳು ಈಗಾಗಲೇ ವಿದೇಶದಲ್ಲಿ ಓದುತ್ತಿದ್ದಾರೆ. ಅದೇ ರೀತಿ ಮಹೇಶ್ ಬಾಬು ಕೂಡ ಗೌತಮ್​ಗೆ ವಿದೇಶದಲ್ಲಿ ಶಿಕ್ಷಣ ಕೊಡಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರೌಢಶಿಕ್ಷಣವನ್ನು ಗೌತಮ್​ ಲಂಡನ್​ನಲ್ಲಿ ಮಾಡಲಿದ್ದಾನೆ.

ಈ ಮೊದಲು ಮಹೇಶ್ ಬಾಬು ಅಮೆರಿಕಕ್ಕೆ ತೆರಳಿದ್ದು ಇದೇ ಕಾರಣಕ್ಕೆ ಎಂದೇ ಹೇಳಲಾಗಿತ್ತು. ಅವರು ಅಲ್ಲಿ ಸಾಕಷ್ಟು ಶಾಲೆಗಳನ್ನು ಹುಡುಕಾಡಿದ್ದರು. ಆದರೆ, ಯಾವುದೂ ಅವರಿಗೆ ಇಷ್ಟವಾಗಿಲ್ಲ. ಈ ಕಾರಣಕ್ಕೆ ಈಗ ಲಂಡನ್​ಗೆ ಹಾರುತ್ತಿದ್ದಾರೆ. ಅಲ್ಲಿ ಮಗನಿಗೋಸ್ಕರ ಒಂದೊಳ್ಳೆಯ ಶಾಲೆಯನ್ನು ಅವರು ಹುಡುಕಲಿದ್ದಾರೆ. ಅಲ್ಲಿ ಪ್ರವೇಶ ಪಡೆದ ನಂತರ ಗೌತಮ್ ತಂದೆ ಜತೆ ಮರಳಿ ಭಾರತಕ್ಕೆ ಬರಲಿದ್ದಾರೆ.

ಇದನ್ನೂ ಓದಿ
Image
ಮಹೇಶ್ ಬಾಬು-ತ್ರಿವಿಕ್ರಮ್ ಸಿನಿಮಾ ರಿಲೀಸ್​ ಬಗ್ಗೆ ಘೋಷಣೆ; ಆಗಸ್ಟ್​ನಿಂದ ಶೂಟಿಂಗ್
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ಮಹೇಶ್ ಬಾಬು ಅವರು ಆಗಸ್ಟ್​ 9ರಂದು ಬರ್ತ್​ಡೇ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಗೌತಮ್ ಕೂಡ ಈ ಸೆಲಬ್ರೇಷನ್​ನಲ್ಲಿ ಭಾಗಿಯಾಗಲಿದ್ದಾರೆ. ಆ ಬಳಿಕ ಗೌತಮ್ ವಿದೇಶಕ್ಕೆ ತೆರಳಲಿದ್ದಾನೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮಹೇಶ್ ಬಾಬು-ತ್ರಿವಿಕ್ರಮ್ ಸಿನಿಮಾ ರಿಲೀಸ್​ ಬಗ್ಗೆ ಘೋಷಣೆ; ಆಗಸ್ಟ್​ನಿಂದ ಶೂಟಿಂಗ್

ಮಹೇಶ್ ಬಾಬು ಹಾಗೂ ನಿರ್ದೇಶಕ ತ್ರಿವಿಕ್ರಮ್ ಅವರು ಮುಂದಿನ ಚಿತ್ರಕ್ಕಾಗಿ ಒಂದಾಗಿದ್ದಾರೆ. ಈ ಸಿನಿಮಾದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ. ಈ ಚಿತ್ರ ಯಾವ ರೀತಿಯ ಶೀರ್ಷಿಕೆ ಇಡುತ್ತಾರೆ ಎಂಬ ಕುತೂಹಲ ಇದೆ. ಈ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ. ಈ ಚಿತ್ರದಲ್ಲಿ ಮತ್ತೋರ್ವ ನಾಯಕಿ ಇರಲಿದ್ದಾರೆ. ಆ ನಾಯಕಿ ಯಾರು ಎಂಬುದು ಇನ್ನಷ್ಟೇ ಅಧಿಕೃತಗವಾಗಬೇಕಿದೆ. ಈ ಚಿತ್ರದ ಕೆಲಸಗಳು ಪೂರ್ಣಗೊಂಡ ನಂತರದಲ್ಲಿ ಮಹೇಶ್ ಬಾಬು ಅವರು ರಾಜಮೌಳಿ ಜತೆ ಕೈ ಜೋಡಿಸಲಿದ್ದಾರೆ.ab

Published On - 10:15 am, Sat, 16 July 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ