AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬುಗೆ ಸಿಕ್ತು 25 ಲಕ್ಷ ಬಹುಮಾನ​ ಹಣ; ಅವರು ಪಾಲ್ಗೊಂಡ ಸ್ಪರ್ಧೆ ಯಾವುದು?

ಈ ಶೋಗೆ ಅತಿಥಿಗಳಾಗಿ ಬರುವ ಸೆಲೆಬ್ರಿಟಿಗಳು ಗೆಲ್ಲುವ ಹಣವನ್ನು ಯಾವುದಾದರೂ ಚಾರಿಟಿಗೆ ನೀಡಬೇಕು ಎನ್ನುವ ನೀತಿ ಇದೆ. ಹೀಗಾಗಿ, ಗೆದ್ದ 25 ಲಕ್ಷ ರೂಪಾಯಿ ಹಣವನ್ನು ಮಹೇಶ್​ ತಾವು ದತ್ತು ಪಡೆದ ಹಳ್ಳಿಯ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಿದ್ದಾರೆ.

ಮಹೇಶ್​ ಬಾಬುಗೆ ಸಿಕ್ತು 25 ಲಕ್ಷ ಬಹುಮಾನ​ ಹಣ; ಅವರು ಪಾಲ್ಗೊಂಡ ಸ್ಪರ್ಧೆ ಯಾವುದು?
ಮಹೇಶ್​ ಬಾಬು
TV9 Web
| Edited By: |

Updated on: Sep 22, 2021 | 2:41 PM

Share

ಮಹೇಶ್​ ಬಾಬು ಸಾಕಷ್ಟು ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಪ್ರತಿ ಸಿನಿಮಾಗೆ ಅವರು ಕೋಟಿ ಮೊತ್ತದಲ್ಲಿ ಸಂಭಾವನೆ ಪಡೆಯುತ್ತಾರೆ. ನಾನಾ ಕಡೆಗಳಲ್ಲಿ ಅವರು ಹೂಡಿಕೆ ಕೂಡ ಮಾಡಿದ್ದಾರೆ. ಹೀಗಾಗಿ, ಅವರ ಆಸ್ತಿ ಮೌಲ್ಯ ನೂರಾರು ಕೋಟಿ ರೂಪಾಯಿ ಇದೆ. ಈ ಮಧ್ಯೆ ಮಹೇಶ್​ ಬಾಬು ಸ್ಪರ್ಧೆಯೊಂದರಲ್ಲಿ ಪಾಲ್ಗೊಂಡಿದ್ದರು. ಇದರಲ್ಲಿ ಅವರು 25 ಲಕ್ಷ ರೂಪಾಯಿ ಗೆದ್ದಿದ್ದಾರೆ. ಈ ಮೊತ್ತ ಅವರಿಗೆ ಸಣ್ಣದೇ. ಆದರೆ, ಸ್ಪರ್ಧೆ ಮಾಡಿ ಈ ಹಣ ಗೆದ್ದಿದ್ದರಿಂದ ಅವರಿಗೆ ಈ ಬಗ್ಗೆ ಹೆಮ್ಮೆ ಇದೆ. ಅಲ್ಲದೆ, ಇದನ್ನು ಸಮಾಜಮುಖಿ ಕೆಲಸಗಳಿಗೆ ಬಳಕೆ ಮಾಡಿಕೊಂಡಿದ್ದಾರೆ.

ಜೆಮಿನಿ ಟಿವಿಯಲ್ಲಿ ‘ಎವರು ಮೀಲೊ ಕೋಟಿಶ್ವರುಲು’ ಶೋ ಪ್ರಸಾರವಾಗುತ್ತಿದೆ. ‘ಕೌನ್​ ಬನೇಗಾ ಕರೋಡ್​​ಪತಿಯ’ ತೆಲುಗು ವರ್ಷನ್​ ಇದು. ಇದನ್ನು ಖ್ಯಾತ ನಟ ಜ್ಯೂ.ಎನ್​ಟಿಆರ್​ ನಡೆಸಿಕೊಡುತ್ತಿದ್ದಾರೆ. ಈ ಶೋಗೆ ಮಹೇಶ್​ ಬಾಬು ಅವರು ಅತಿಥಿಯಾಗಿ ಆಗಮಿಸಿದ್ದರು. ಇತ್ತೀಚೆಗೆ ಇದರ ಶೂಟಿಂಗ್​ ಪೂರ್ಣಗೊಂಡಿದೆ. ಮಹೇಶ್​ ಬಾಬು ಈ ಸ್ಪರ್ಧೆಯಲ್ಲಿ 25 ಲಕ್ಷ ರೂಪಾಯಿ ಗೆದ್ದಿದ್ದಾರೆ. ಈ ಎಪಿಸೋಡ್​ ಟಿವಿಯಲ್ಲಿ ದಸರಾ ಹಬ್ಬದ ಸಮಯದಲ್ಲಿ ಪ್ರಸಾರವಾಗಲಿದೆ.

ಈ ಶೋಗೆ ಅತಿಥಿಗಳಾಗಿ ಬರುವ ಸೆಲೆಬ್ರಿಟಿಗಳು ಗೆಲ್ಲುವ ಹಣವನ್ನು ಯಾವುದಾದರೂ ಚಾರಿಟಿಗೆ ನೀಡಬೇಕು ಎನ್ನುವ ನೀತಿ ಇದೆ. ಹೀಗಾಗಿ, ಗೆದ್ದ 25 ಲಕ್ಷ ರೂಪಾಯಿ ಹಣವನ್ನು ಮಹೇಶ್​ ತಾವು ದತ್ತು ಪಡೆದ ಹಳ್ಳಿಯ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಿದ್ದಾರೆ.

ವರ್ಷಕ್ಕೆ ಒಂದು ಅಥವಾ ಎರಡು ಸಿನಿಮಾಗಳನ್ನು ಮಾತ್ರ ಮಾಡುವುದು ಮಹೇಶ್​ ಬಾಬು ರೂಢಿ. ಕಳೆದ ವರ್ಷ ಆರಂಭದಲ್ಲಿ, ಅಂದರೆ 2020ರ ಜನವರಿಯ 11ರಂದು ‘ಸರಿಲೇರು ನೀಕೆವ್ವರು’ ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಕೊರೊನಾ ಲಾಕ್​ಡೌನ್​ ಕಾರಣದಿಂದ 2021ರಲ್ಲಿ ಮಹೇಶ್​ ಬಾಬು ನಟನೆಯ ಯಾವ ಚಿತ್ರವೂ ತೆರೆಕಂಡಿಲ್ಲ. 2022ರ ಜ.13ರಂದು ‘ಸರ್ಕಾರು ವಾರಿ ಪಾಟ’ ತೆರೆಕಾಣಲಿದೆ. ಅದಕ್ಕೂ ಮುನ್ನ ಕೇವಲ ಫಸ್ಟ್​ಲುಕ್​ನಲ್ಲಿಯೇ ಈ ಸಿನಿಮಾ ಒಂದು ದಾಖಲೆ ಬರೆದಿದೆ.

ಇದನ್ನೂ ಓದಿ: ದಳಪತಿ ವಿಜಯ್​ ಮತ್ತು ಮಹೇಶ್​ ಬಾಬು ಪತ್ನಿ ನಮ್ರತಾ ಹಳೇ ವಿಚಾರ ಎಳೆದು ತಂದ ಫ್ಯಾನ್ಸ್​

ಮಹೇಶ್​ ಬಾಬು ಮನೆಯಲ್ಲಿರುವ ಐಷಾರಾಮಿ ಹೋಮ್​ ಥಿಯೇಟರ್ ಹೇಗಿದೆ ಗೊತ್ತಾ?; ಇಲ್ಲಿದೆ ಫೋಟೋ

Follow Us
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?