AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬುಗೆ ಸಿಕ್ತು 25 ಲಕ್ಷ ಬಹುಮಾನ​ ಹಣ; ಅವರು ಪಾಲ್ಗೊಂಡ ಸ್ಪರ್ಧೆ ಯಾವುದು?

ಈ ಶೋಗೆ ಅತಿಥಿಗಳಾಗಿ ಬರುವ ಸೆಲೆಬ್ರಿಟಿಗಳು ಗೆಲ್ಲುವ ಹಣವನ್ನು ಯಾವುದಾದರೂ ಚಾರಿಟಿಗೆ ನೀಡಬೇಕು ಎನ್ನುವ ನೀತಿ ಇದೆ. ಹೀಗಾಗಿ, ಗೆದ್ದ 25 ಲಕ್ಷ ರೂಪಾಯಿ ಹಣವನ್ನು ಮಹೇಶ್​ ತಾವು ದತ್ತು ಪಡೆದ ಹಳ್ಳಿಯ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಿದ್ದಾರೆ.

ಮಹೇಶ್​ ಬಾಬುಗೆ ಸಿಕ್ತು 25 ಲಕ್ಷ ಬಹುಮಾನ​ ಹಣ; ಅವರು ಪಾಲ್ಗೊಂಡ ಸ್ಪರ್ಧೆ ಯಾವುದು?
ಮಹೇಶ್​ ಬಾಬು
TV9 Web
| Edited By: |

Updated on: Sep 22, 2021 | 2:41 PM

Share

ಮಹೇಶ್​ ಬಾಬು ಸಾಕಷ್ಟು ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಪ್ರತಿ ಸಿನಿಮಾಗೆ ಅವರು ಕೋಟಿ ಮೊತ್ತದಲ್ಲಿ ಸಂಭಾವನೆ ಪಡೆಯುತ್ತಾರೆ. ನಾನಾ ಕಡೆಗಳಲ್ಲಿ ಅವರು ಹೂಡಿಕೆ ಕೂಡ ಮಾಡಿದ್ದಾರೆ. ಹೀಗಾಗಿ, ಅವರ ಆಸ್ತಿ ಮೌಲ್ಯ ನೂರಾರು ಕೋಟಿ ರೂಪಾಯಿ ಇದೆ. ಈ ಮಧ್ಯೆ ಮಹೇಶ್​ ಬಾಬು ಸ್ಪರ್ಧೆಯೊಂದರಲ್ಲಿ ಪಾಲ್ಗೊಂಡಿದ್ದರು. ಇದರಲ್ಲಿ ಅವರು 25 ಲಕ್ಷ ರೂಪಾಯಿ ಗೆದ್ದಿದ್ದಾರೆ. ಈ ಮೊತ್ತ ಅವರಿಗೆ ಸಣ್ಣದೇ. ಆದರೆ, ಸ್ಪರ್ಧೆ ಮಾಡಿ ಈ ಹಣ ಗೆದ್ದಿದ್ದರಿಂದ ಅವರಿಗೆ ಈ ಬಗ್ಗೆ ಹೆಮ್ಮೆ ಇದೆ. ಅಲ್ಲದೆ, ಇದನ್ನು ಸಮಾಜಮುಖಿ ಕೆಲಸಗಳಿಗೆ ಬಳಕೆ ಮಾಡಿಕೊಂಡಿದ್ದಾರೆ.

ಜೆಮಿನಿ ಟಿವಿಯಲ್ಲಿ ‘ಎವರು ಮೀಲೊ ಕೋಟಿಶ್ವರುಲು’ ಶೋ ಪ್ರಸಾರವಾಗುತ್ತಿದೆ. ‘ಕೌನ್​ ಬನೇಗಾ ಕರೋಡ್​​ಪತಿಯ’ ತೆಲುಗು ವರ್ಷನ್​ ಇದು. ಇದನ್ನು ಖ್ಯಾತ ನಟ ಜ್ಯೂ.ಎನ್​ಟಿಆರ್​ ನಡೆಸಿಕೊಡುತ್ತಿದ್ದಾರೆ. ಈ ಶೋಗೆ ಮಹೇಶ್​ ಬಾಬು ಅವರು ಅತಿಥಿಯಾಗಿ ಆಗಮಿಸಿದ್ದರು. ಇತ್ತೀಚೆಗೆ ಇದರ ಶೂಟಿಂಗ್​ ಪೂರ್ಣಗೊಂಡಿದೆ. ಮಹೇಶ್​ ಬಾಬು ಈ ಸ್ಪರ್ಧೆಯಲ್ಲಿ 25 ಲಕ್ಷ ರೂಪಾಯಿ ಗೆದ್ದಿದ್ದಾರೆ. ಈ ಎಪಿಸೋಡ್​ ಟಿವಿಯಲ್ಲಿ ದಸರಾ ಹಬ್ಬದ ಸಮಯದಲ್ಲಿ ಪ್ರಸಾರವಾಗಲಿದೆ.

ಈ ಶೋಗೆ ಅತಿಥಿಗಳಾಗಿ ಬರುವ ಸೆಲೆಬ್ರಿಟಿಗಳು ಗೆಲ್ಲುವ ಹಣವನ್ನು ಯಾವುದಾದರೂ ಚಾರಿಟಿಗೆ ನೀಡಬೇಕು ಎನ್ನುವ ನೀತಿ ಇದೆ. ಹೀಗಾಗಿ, ಗೆದ್ದ 25 ಲಕ್ಷ ರೂಪಾಯಿ ಹಣವನ್ನು ಮಹೇಶ್​ ತಾವು ದತ್ತು ಪಡೆದ ಹಳ್ಳಿಯ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಿದ್ದಾರೆ.

ವರ್ಷಕ್ಕೆ ಒಂದು ಅಥವಾ ಎರಡು ಸಿನಿಮಾಗಳನ್ನು ಮಾತ್ರ ಮಾಡುವುದು ಮಹೇಶ್​ ಬಾಬು ರೂಢಿ. ಕಳೆದ ವರ್ಷ ಆರಂಭದಲ್ಲಿ, ಅಂದರೆ 2020ರ ಜನವರಿಯ 11ರಂದು ‘ಸರಿಲೇರು ನೀಕೆವ್ವರು’ ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಕೊರೊನಾ ಲಾಕ್​ಡೌನ್​ ಕಾರಣದಿಂದ 2021ರಲ್ಲಿ ಮಹೇಶ್​ ಬಾಬು ನಟನೆಯ ಯಾವ ಚಿತ್ರವೂ ತೆರೆಕಂಡಿಲ್ಲ. 2022ರ ಜ.13ರಂದು ‘ಸರ್ಕಾರು ವಾರಿ ಪಾಟ’ ತೆರೆಕಾಣಲಿದೆ. ಅದಕ್ಕೂ ಮುನ್ನ ಕೇವಲ ಫಸ್ಟ್​ಲುಕ್​ನಲ್ಲಿಯೇ ಈ ಸಿನಿಮಾ ಒಂದು ದಾಖಲೆ ಬರೆದಿದೆ.

ಇದನ್ನೂ ಓದಿ: ದಳಪತಿ ವಿಜಯ್​ ಮತ್ತು ಮಹೇಶ್​ ಬಾಬು ಪತ್ನಿ ನಮ್ರತಾ ಹಳೇ ವಿಚಾರ ಎಳೆದು ತಂದ ಫ್ಯಾನ್ಸ್​

ಮಹೇಶ್​ ಬಾಬು ಮನೆಯಲ್ಲಿರುವ ಐಷಾರಾಮಿ ಹೋಮ್​ ಥಿಯೇಟರ್ ಹೇಗಿದೆ ಗೊತ್ತಾ?; ಇಲ್ಲಿದೆ ಫೋಟೋ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್