AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಬರ್ತ್​ಡೇ ದಿನ ಅರ್ಧ ಪೋಸ್ಟರ್​ ಬಿಟ್ಟು ಅಭಿಮಾನಿಗಳಿಗೆ ಪತ್ರ ಬರೆದ ರಾಜಮೌಳಿ

ಮಹೇಶ್ ಬಾಬು ಅವರ ಜನ್ಮದಿನದಂದು, ನಿರೀಕ್ಷೆಯಂತೆ 'SSMB29' ಚಿತ್ರದ ಬಗ್ಗೆ ಮಾಹಿತಿ ಬಹಿರಂಗಗೊಳ್ಳಲಿಲ್ಲ. ಆದರೆ, ನಿರ್ದೇಶಕ ರಾಜಮೌಳಿ ಅವರು ನವೆಂಬರ್ 2025ರಲ್ಲಿ ಚಿತ್ರದ ಕುರಿತು ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಘೋಷಿಸಿದ್ದಾರೆ. ಒಂದು ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರದ ಬಗ್ಗೆ ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದ್ದಾರೆ.

ಮಹೇಶ್ ಬಾಬು ಬರ್ತ್​ಡೇ ದಿನ ಅರ್ಧ ಪೋಸ್ಟರ್​ ಬಿಟ್ಟು ಅಭಿಮಾನಿಗಳಿಗೆ ಪತ್ರ ಬರೆದ ರಾಜಮೌಳಿ
ರಾಜಮೌಳಿ-ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Aug 09, 2025 | 1:26 PM

Share

ಟಾಲಿವುಡ್​ನ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಅವರಿಗೆ ಇಂದು (ಆಗಸ್ಟ್ 9) ಜನ್ಮದಿನ. ಈ ವಿಶೇಷ ದಿನದಂದು ಮಹೇಶ್ ಬಾಬು ಮುಂದಿನ ಸಿನಿಮಾ ‘ಎಸ್​​ಎಸ್​ಎಂಬಿ 29’ ಬಗ್ಗೆ ಅಪ್​ಡೇಟ್ ಸಿಗಲಿದೆ ಎಂದು ಹೇಳಲಾಗಿತ್ತು. ಆದರೆ, ಹಾಗಾಗಿಲ್ಲ. ಬದಲಿಗೆ ರಾಜಮೌಳಿ ಕಡೆಯಿಂದ ಅದ್ಭುತ ಅಪ್​​ಡೇಟ್ ಒಂದು ಸಿಕ್ಕಿದೆ. ನವೆಂಬರ್​ನಲ್ಲಿ ಚಿತ್ರದ ಬಗ್ಗೆ ಮಾಹಿತಿ ರಿವೀಲ್ ಮಾಡೋದಾಗಿ ಅವರು ಹೇಳಿದ್ದಾರೆ. ಇಷ್ಟಕ್ಕೆ ಫ್ಯಾನ್ಸ್ ತೃಪ್ತಿ ಪಟ್ಟುಕೊಂಡಿದ್ದಾರೆ.

ಮಹೇಶ್ ಬಾಬು ಬರ್ತ್​ಡೇ ದಿನ ‘ಎಸ್​ಎಸ್​ಎಂಬಿ 29’ ಚಿತ್ರದ ಟೈಟಲ್ ರಿವೀಲ್ ಆಗಬಹುದು ಎಂದು ಕಾಯಲಾಗಿತ್ತು. ಆದರೆ, ಹಾಗಾಗಿಲ್ಲ. ಆದರೆ, ರಾಜಮೌಳಿ ಕಡೆಯಿಂದ ಅಪ್​ಡೇಟ್ ಸಿಕ್ಕಿದೆ. ಮುಖವನ್ನು ರಿವೀಲ್ ಮಾಡದೇ ಒಂದು ಪೋಸ್ಟರ್ ರಿವೀಲ್ ಮಾಡಲಾಗಿದೆ. ಈ ಪೋಸ್ಟರ್​​ನಲ್ಲಿ ಈ ಚಿತ್ರದ ಬಗ್ಗೆ ನವೆಂಬರ್​ನಲ್ಲಿ ಮಾಹಿತಿ ನೀಡೋದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಮಹೇಶ್ ಬಾಬು ಇಷ್ಟೊಂದು ಶ್ರೀಮಂತರೇ? ನಟನ ಆಸ್ತಿ ಬಗ್ಗೆ ಇಲ್ಲಿದೆ ವಿವರ
Image
‘ಬ್ಲಾಕ್​ಬಸ್ಟರ್’; ಒಂದು ವಾರ ಮೊದಲೇ ಹೊರಬಿತ್ತು ಕೂಲಿ ಸಿನಿಮಾ ವಿಮರ್ಶೆ
Image
ತೆಲುಗು ರಿಲೀಸ್ ಬೆನ್ನಲ್ಲೇ ಮತ್ತೆ ಹೆಚ್ಚಿತು ‘ಸು ಫ್ರಮ್ ಸೋ’ ಕಲೆಕ್ಷನ್
Image
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

ಸದ್ಯ ರಿವೀಲ್ ಆಗಿರೋ ಪೋಸ್ಟರ್​ನಲ್ಲಿ ಮಹೇಶ್ ಬಾಬು ಕತ್ತಿನಲ್ಲಿ ಲಾಕೆಟ್ ಇದೆ. ಇದರಲ್ಲಿ ತ್ರಿಶೂಲ ಹಾಗೂ ಬಸವನ ಇದೆ. ಕುತ್ತಿಗೆಯಿಂದ ರಕ್ತ ಸೋರುತ್ತಿದೆ. ಈ ಫೋಟೋ ನೋಡಿದ ಫ್ಯಾನ್ಸ್ ಸಂತೋಷಗೊಂಡಿದ್ದಾರೆ. ಸಂಪೂರ್ಣ ಪೋಸ್ಟರ್ ಬಹಿರಂಗಗೊಳ್ಳದಿದ್ದರೂ, ಇಷ್ಟಾದರೂ ಅಪ್​ಡೇಟ್ ಸಿಕ್ಕಿತಲ್ಲ ಎಂದು ಫ್ಯಾನ್ಸ್ ತೃಪ್ತಿ ಪಟ್ಟುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್​ನಲ್ಲಿ ರಾಜಮೌಳಿ ಅವರು ಅಭಿಮಾನಿಗಳಿಗಾಗಿ ಪತ್ರ ಬರೆದಿದ್ದಾರೆ. ‘ಪ್ರಪಂಚದಾದ್ಯಂತ ಇರುವ  ಚಲನಚಿತ್ರ ಪ್ರಿಯರಿಗೆ ಮತ್ತು ಮಹೇಶ್ ಅಭಿಮಾನಿಗಳಿಗೆ ಈ ಪತ್ರ. ನಾವು ಕೆಲವು ದಿನಗಳ ಹಿಂದಷ್ಟೇ ಚಿತ್ರೀಕರಣ ಪ್ರಾರಂಭಿಸಿದ್ದೇವೆ. ಚಿತ್ರದ ಬಗ್ಗೆ ತಿಳಿದುಕೊಳ್ಳುವ ನಿಮ್ಮ ಬಯಕೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ’ ಎಂದು ಪತ್ರ ಆರಂಭಿಸಿದ್ದಾರೆ.

ಇದನ್ನೂ ಓದಿ: ಮಹೇಶ್ ಬಾಬು ತಲೆಯಲ್ಲಿರೋದು ನಿಜವಾದ ಕೂದಲಲ್ಲ; ಇಲ್ಲಿದೆ ಅಚ್ಚರಿ ವಿವರ

‘ಚಿತ್ರದ ಕಥೆ ಮತ್ತು ವ್ಯಾಪ್ತಿ ತುಂಬಾ ದೊಡ್ಡದಾಗಿದೆ. ಹೀಗಾಗಿ ಕೆಲವು ಫೋಟೋಗಳು ಮತ್ತು ಪತ್ರಿಕಾಗೋಷ್ಠಿ ಅದಕ್ಕೆ ನ್ಯಾಯ ಒದಗಿಸುವುದಿಲ್ಲ. ಸದ್ಯ ಸಿನಿಮಾ ಕೆಲಸ ನಡೆಯುತ್ತಿದೆ. ನವೆಂಬರ್ 2025ರಲ್ಲಿ ಅಪ್​ಡೇಟ್ ನೀಡುತ್ತೇವೆ. ನೀವು ಹಿಂದೆಂದೂ ನೋಡಿರದೇ ಇರುವುದನ್ನು ನಾವು ತೋರಿಸಲಿದ್ದೇವೆ. ನಿಮ್ಮ ತಾಳ್ಮೆಗೆ ಧನ್ಯವಾದ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?