AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಬರ್ತ್​ಡೇ ದಿನ ಅರ್ಧ ಪೋಸ್ಟರ್​ ಬಿಟ್ಟು ಅಭಿಮಾನಿಗಳಿಗೆ ಪತ್ರ ಬರೆದ ರಾಜಮೌಳಿ

ಮಹೇಶ್ ಬಾಬು ಅವರ ಜನ್ಮದಿನದಂದು, ನಿರೀಕ್ಷೆಯಂತೆ 'SSMB29' ಚಿತ್ರದ ಬಗ್ಗೆ ಮಾಹಿತಿ ಬಹಿರಂಗಗೊಳ್ಳಲಿಲ್ಲ. ಆದರೆ, ನಿರ್ದೇಶಕ ರಾಜಮೌಳಿ ಅವರು ನವೆಂಬರ್ 2025ರಲ್ಲಿ ಚಿತ್ರದ ಕುರಿತು ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಘೋಷಿಸಿದ್ದಾರೆ. ಒಂದು ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರದ ಬಗ್ಗೆ ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದ್ದಾರೆ.

ಮಹೇಶ್ ಬಾಬು ಬರ್ತ್​ಡೇ ದಿನ ಅರ್ಧ ಪೋಸ್ಟರ್​ ಬಿಟ್ಟು ಅಭಿಮಾನಿಗಳಿಗೆ ಪತ್ರ ಬರೆದ ರಾಜಮೌಳಿ
ರಾಜಮೌಳಿ-ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Aug 09, 2025 | 1:26 PM

Share

ಟಾಲಿವುಡ್​ನ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಅವರಿಗೆ ಇಂದು (ಆಗಸ್ಟ್ 9) ಜನ್ಮದಿನ. ಈ ವಿಶೇಷ ದಿನದಂದು ಮಹೇಶ್ ಬಾಬು ಮುಂದಿನ ಸಿನಿಮಾ ‘ಎಸ್​​ಎಸ್​ಎಂಬಿ 29’ ಬಗ್ಗೆ ಅಪ್​ಡೇಟ್ ಸಿಗಲಿದೆ ಎಂದು ಹೇಳಲಾಗಿತ್ತು. ಆದರೆ, ಹಾಗಾಗಿಲ್ಲ. ಬದಲಿಗೆ ರಾಜಮೌಳಿ ಕಡೆಯಿಂದ ಅದ್ಭುತ ಅಪ್​​ಡೇಟ್ ಒಂದು ಸಿಕ್ಕಿದೆ. ನವೆಂಬರ್​ನಲ್ಲಿ ಚಿತ್ರದ ಬಗ್ಗೆ ಮಾಹಿತಿ ರಿವೀಲ್ ಮಾಡೋದಾಗಿ ಅವರು ಹೇಳಿದ್ದಾರೆ. ಇಷ್ಟಕ್ಕೆ ಫ್ಯಾನ್ಸ್ ತೃಪ್ತಿ ಪಟ್ಟುಕೊಂಡಿದ್ದಾರೆ.

ಮಹೇಶ್ ಬಾಬು ಬರ್ತ್​ಡೇ ದಿನ ‘ಎಸ್​ಎಸ್​ಎಂಬಿ 29’ ಚಿತ್ರದ ಟೈಟಲ್ ರಿವೀಲ್ ಆಗಬಹುದು ಎಂದು ಕಾಯಲಾಗಿತ್ತು. ಆದರೆ, ಹಾಗಾಗಿಲ್ಲ. ಆದರೆ, ರಾಜಮೌಳಿ ಕಡೆಯಿಂದ ಅಪ್​ಡೇಟ್ ಸಿಕ್ಕಿದೆ. ಮುಖವನ್ನು ರಿವೀಲ್ ಮಾಡದೇ ಒಂದು ಪೋಸ್ಟರ್ ರಿವೀಲ್ ಮಾಡಲಾಗಿದೆ. ಈ ಪೋಸ್ಟರ್​​ನಲ್ಲಿ ಈ ಚಿತ್ರದ ಬಗ್ಗೆ ನವೆಂಬರ್​ನಲ್ಲಿ ಮಾಹಿತಿ ನೀಡೋದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಮಹೇಶ್ ಬಾಬು ಇಷ್ಟೊಂದು ಶ್ರೀಮಂತರೇ? ನಟನ ಆಸ್ತಿ ಬಗ್ಗೆ ಇಲ್ಲಿದೆ ವಿವರ
Image
‘ಬ್ಲಾಕ್​ಬಸ್ಟರ್’; ಒಂದು ವಾರ ಮೊದಲೇ ಹೊರಬಿತ್ತು ಕೂಲಿ ಸಿನಿಮಾ ವಿಮರ್ಶೆ
Image
ತೆಲುಗು ರಿಲೀಸ್ ಬೆನ್ನಲ್ಲೇ ಮತ್ತೆ ಹೆಚ್ಚಿತು ‘ಸು ಫ್ರಮ್ ಸೋ’ ಕಲೆಕ್ಷನ್
Image
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

ಸದ್ಯ ರಿವೀಲ್ ಆಗಿರೋ ಪೋಸ್ಟರ್​ನಲ್ಲಿ ಮಹೇಶ್ ಬಾಬು ಕತ್ತಿನಲ್ಲಿ ಲಾಕೆಟ್ ಇದೆ. ಇದರಲ್ಲಿ ತ್ರಿಶೂಲ ಹಾಗೂ ಬಸವನ ಇದೆ. ಕುತ್ತಿಗೆಯಿಂದ ರಕ್ತ ಸೋರುತ್ತಿದೆ. ಈ ಫೋಟೋ ನೋಡಿದ ಫ್ಯಾನ್ಸ್ ಸಂತೋಷಗೊಂಡಿದ್ದಾರೆ. ಸಂಪೂರ್ಣ ಪೋಸ್ಟರ್ ಬಹಿರಂಗಗೊಳ್ಳದಿದ್ದರೂ, ಇಷ್ಟಾದರೂ ಅಪ್​ಡೇಟ್ ಸಿಕ್ಕಿತಲ್ಲ ಎಂದು ಫ್ಯಾನ್ಸ್ ತೃಪ್ತಿ ಪಟ್ಟುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್​ನಲ್ಲಿ ರಾಜಮೌಳಿ ಅವರು ಅಭಿಮಾನಿಗಳಿಗಾಗಿ ಪತ್ರ ಬರೆದಿದ್ದಾರೆ. ‘ಪ್ರಪಂಚದಾದ್ಯಂತ ಇರುವ  ಚಲನಚಿತ್ರ ಪ್ರಿಯರಿಗೆ ಮತ್ತು ಮಹೇಶ್ ಅಭಿಮಾನಿಗಳಿಗೆ ಈ ಪತ್ರ. ನಾವು ಕೆಲವು ದಿನಗಳ ಹಿಂದಷ್ಟೇ ಚಿತ್ರೀಕರಣ ಪ್ರಾರಂಭಿಸಿದ್ದೇವೆ. ಚಿತ್ರದ ಬಗ್ಗೆ ತಿಳಿದುಕೊಳ್ಳುವ ನಿಮ್ಮ ಬಯಕೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ’ ಎಂದು ಪತ್ರ ಆರಂಭಿಸಿದ್ದಾರೆ.

ಇದನ್ನೂ ಓದಿ: ಮಹೇಶ್ ಬಾಬು ತಲೆಯಲ್ಲಿರೋದು ನಿಜವಾದ ಕೂದಲಲ್ಲ; ಇಲ್ಲಿದೆ ಅಚ್ಚರಿ ವಿವರ

‘ಚಿತ್ರದ ಕಥೆ ಮತ್ತು ವ್ಯಾಪ್ತಿ ತುಂಬಾ ದೊಡ್ಡದಾಗಿದೆ. ಹೀಗಾಗಿ ಕೆಲವು ಫೋಟೋಗಳು ಮತ್ತು ಪತ್ರಿಕಾಗೋಷ್ಠಿ ಅದಕ್ಕೆ ನ್ಯಾಯ ಒದಗಿಸುವುದಿಲ್ಲ. ಸದ್ಯ ಸಿನಿಮಾ ಕೆಲಸ ನಡೆಯುತ್ತಿದೆ. ನವೆಂಬರ್ 2025ರಲ್ಲಿ ಅಪ್​ಡೇಟ್ ನೀಡುತ್ತೇವೆ. ನೀವು ಹಿಂದೆಂದೂ ನೋಡಿರದೇ ಇರುವುದನ್ನು ನಾವು ತೋರಿಸಲಿದ್ದೇವೆ. ನಿಮ್ಮ ತಾಳ್ಮೆಗೆ ಧನ್ಯವಾದ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು