AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಪರ್ಫೆಕ್ಷನ್​ನಿಂದ ಸಂಕಷ್ಟಕ್ಕೆ ಸಿಲುಕಿದ ಮಹೇಶ್ ಬಾಬು; ಇಷ್ಟೆಲ್ಲಾ ರಿಸ್ಕ್ ಬೇಕಾ?

ರಾಜಮೌಳಿ ನಿರ್ದೇಶನದ SSMB29 ಚಿತ್ರದಲ್ಲಿ ಮಹೇಶ್ ಬಾಬು ಪ್ರಮುಖ ಪಾತ್ರದಲ್ಲಿದ್ದಾರೆ. ಈ ಆಕ್ಷನ್-ಅಡ್ವೆಂಚರ್ ಚಿತ್ರಕ್ಕಾಗಿ ಮಹೇಶ್ ಬಾಬು ಎಲ್ಲಾ ಸ್ಟಂಟ್‌ಗಳನ್ನು ಸ್ವತಃ ನಿರ್ವಹಿಸುತ್ತಿದ್ದಾರೆ. ಬಾಡಿ ಡಬಲ್​ಗೆ ಇಲ್ಲಿ ಅವಕಾಶ ಇಲ್ಲ. ರಾಜಮೌಳಿ ಅವರ ಪರಿಪೂರ್ಣತೆಯ ಹುಡುಕಾಟವು ಮಹೇಶ್ ಬಾಬು ಅವರ ಮೇಲೆ ಹೆಚ್ಚಿನ ಒತ್ತಡ ಹಾಗೂ ಅಪಾಯವನ್ನು ತಂದಿದೆ.

ರಾಜಮೌಳಿ ಪರ್ಫೆಕ್ಷನ್​ನಿಂದ ಸಂಕಷ್ಟಕ್ಕೆ ಸಿಲುಕಿದ ಮಹೇಶ್ ಬಾಬು; ಇಷ್ಟೆಲ್ಲಾ ರಿಸ್ಕ್ ಬೇಕಾ?
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on:Jul 24, 2025 | 1:54 PM

Share

ನಿರ್ದೇಶಕ ರಾಜಮೌಳಿ ಅವರು ಪರಿಪೂರ್ಣತೆಗೆ ಹೆಸರಾದವರು. ಒಂದು ದೃಶ್ಯ ಸರಿ ಬಂದಿಲ್ಲ ಎಂದರೆ ಅಲ್ಲಿ ನಟಿಸುತ್ತಿರುವವರು ಯಾರೇ ಆದರೂ ಸರಿ ಮನಸ್ಸಿಗೆ ಖುಷಿ ಕೊಡುವವರೆಗೂ ರೀ-ಟೇಕ್ ತೆಗೆದುಕೊಳ್ಳುತ್ತಲೇ ಇರುತ್ತಾರೆ. ಈಗ ಇದೇ ವಿಚಾರ ಮಹೇಶ್ ಬಾಬುಗೆ ಸಂಕಟ ತಂದೊಡ್ಡುವ ಸೂಚನೆ ಕೊಟ್ಟಿದೆ. ಮಹೇಶ್ ಬಾಬು ಹಾಗೂ ರಾಜಮೌಳಿ (SS Rajamouli) ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘SSMB29’ ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಲ್ಲಿ ಮಹೇಶ್ ಬಾಬು ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತಿದ್ದಾರೆ.

ಸಾಮಾನ್ಯವಾಗಿ ಸ್ಟಂಟ್​ಗಳನ್ನು ಮಾಡುವಾಗ ಹೀರೋಗಳು ರಿಸ್ಕ್ ತೆಗೆದುಕೊಳ್ಳಲು ಇಷ್ಟಪಡೋದಿಲ್ಲ. ಈ ಕಾರಣದಿಂದಲೇ ಬಾಡಿ ಡಬಲ್ ಉಪಯೋಗಿಸುತ್ತಾರೆ. ಅಂದರೆ ಅವರನ್ನೇ ಹೋಲವು ಮತ್ತೊಂದು ವ್ಯಕ್ತಿಯಿಂದ ಸ್ಟಂಟ್ ಮಾಡಿಸುತ್ತಾರೆ. ತೆರೆಮೇಲೆ ನೋಡುವಾಗ ಹೀರೋನೆ ಸ್ಟಂಟ್ ಮಾಡುತ್ತಿದ್ದಾನೆ ಎಂಬ ರೀತಿಯಲ್ಲಿ ಕಾಣುತ್ತದೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಆದರೆ, ಈ ಬಾರಿ ಮಹೇಶ್ ಬಾಬುಗೆ ಯಾವುದೇ ಬಾಡಿ ಡಬಲ್ ಇರೋದಿಲ್ಲ.

ಕೆಲವು ವರದಿಗಳ ಪ್ರಕಾರ ‘SSMB29’ ಚಿತ್ರದ ಶೂಟ್ ವೇಳೆ ಯಾವುದೇ ಬಾಡಿ ಬಲ್ ಮಾಡಲು ಅವಕಾಶ ಇಲ್ಲ. ಎಲ್ಲಾ ಸ್ಟಂಟ್​ಗಳನ್ನು ಮಹೇಶ್ ಬಾಬು ಅವರೇ ಮಾಡಬೇಕು. ಇದು ಹೆಚ್ಚು ರಿಸ್ಕ್ ಕೂಡ ಹೌದು. ಈ ವೇಳೆ ಯಾವುದಾದರೂ ತೊಂದರೆ ಆದರೆ ಜೀವಕ್ಕೆ ಅಪಾಯ ಬರಹುದು. ಹೀಗಾಗಿ ಹೆಚ್ಚಿನ ಎಚ್ಚರಿಕೆ ಅಗತ್ಯ. ಇನ್ನು ಮಹೇಶ್ ಬಾಬು ಕೂಡ ಬಾಡಿ ಡಬಲ್ ಆಯ್ಕೆಯನ್ನು ಹೆಚ್ಚು ಇಷ್ಟಪಡೋದಿಲ್ಲ. ಈ ಮೊದಲು ಕೂಡ ಅವರು ಅಂಥ ರಿಸ್ಕ್ ತೆಗೆದುಕೊಂಡಿದ್ದರು.

ಇದನ್ನೂ ಓದಿ
Image
ಥಿಯೇಟರ್​ನಲ್ಲಿ ರಿಲೀಸ್ ಆದ ಒಂದೇ ದಿನಕ್ಕೆ ಈ ಥ್ರಿಲ್ಲರ್ ಚಿತ್ರ ಒಟಿಟಿಗೆ
Image
ನಯನತಾರ ಜೊತೆ ಚಿರಂಜೀವಿ ರೊಮ್ಯಾನ್ಸ್ ; 29 ವರ್ಷ ವಯಸ್ಸಿನ ಅಂತರ
Image
ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ 
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್

ಇದನ್ನೂ ಓದಿ: ‘ಬಾಹುಬಲಿ, ‘ಆರ್​ಆರ್​ಆರ್​’ ಅಲ್ಲ, ರಾಜಮೌಳಿಗೆ ಫೇವರಿಟ್ ಈ ಸುದೀಪ್ ಸಿನಿಮಾ

ಈ ಸಿನಿಮಾ ಆ್ಯಕ್ಷನ್ ಅಡ್ವೆಂಡಚರ್ ಸಿನಿಮಾ. ಹೀಗಾಗಿ, ಇದರಲ್ಲಿ ಸಾಕಷ್ಟು ಸ್ಟಂಟ್​ಗಳು ಇದ್ದೇ ಇರುತ್ತವೆ. ಈ ಸಿನಿಮಾದಲ್ಲಿ ದೃಶ್ಯ ವೈಭವ ಕೊಂಚ ಹೆಚ್ಚೇ ಇರಲಿದೆ. ಹೀಗಾಗಿ, ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದಲ್ಲಿ ಪ್ರಿಯಾಂಕಾ ಚೋಪ್ರಾ ಕೂಡ ಇದ್ದಾರೆ. ಈ ಸಿನಿಮಾದ ಒಂದಷ್ಟು ಶೂಟ್ ಭಾರತದಲ್ಲಿ ನಡೆದಿದೆ. ಆ ಬಳಿಕ ತಂಡ ಕೀನ್ಯಾಗೆ ಪ್ರಯಾಣ ಬೆಳೆಸಲಿದೆ. ಅಲ್ಲಿ ಚಿತ್ರದ ಬಹುತೇಕ ಶೂಟ್ ನಡೆಯಲಿದೆ ಎನ್ನಲಾಗುತ್ತಿದೆ. ಅದಕ್ಕೆ ಇನ್ನೂ ಮುಹೂರ್ತ ಫಿಕ್ಸ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Fri, 18 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ