AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಜ್ಯೂ. ಎನ್​ಟಿಆರ್​ ಆಪ್ತ ನಿರ್ಮಾಪಕ ಮಹೇಶ್​ ಎಸ್​. ಕೊನೆರು ನಿಧನ

ಸ್ಟಾರ್​ ನಟ ಜ್ಯೂ. ಎನ್​ಟಿಆರ್​ ಅವರಿಗೆ ಪರ್ಸನಲ್​ ಪಿಆರ್​ಓ ಆಗಿ ಮಹೇಶ್​ ಎಸ್​. ಕೊನೆರು ಅವರು ಕಾರ್ಯ ನಿರ್ವಹಿಸುತ್ತಿದ್ದರು. ಮಹೇಶ್​ ಸಾವಿನ ಸುದ್ದಿ ಕೇಳಿ ಜ್ಯೂ. ಎನ್​ಟಿಆರ್​ ತೀವ್ರ ನೋವಿನಲ್ಲಿದ್ದಾರೆ.

ಹೃದಯಾಘಾತದಿಂದ ಜ್ಯೂ. ಎನ್​ಟಿಆರ್​ ಆಪ್ತ ನಿರ್ಮಾಪಕ ಮಹೇಶ್​ ಎಸ್​. ಕೊನೆರು ನಿಧನ
ಹೃದಯಾಘಾತದಿಂದ ಮಹೇಶ್ ಎಸ್. ಕೊನೆರು ನಿಧನ
TV9 Web
| Edited By: |

Updated on:Oct 12, 2021 | 1:10 PM

Share

ತೆಲುಗು ಚಿತ್ರರಂಗದಲ್ಲಿ ಖ್ಯಾತಿ ಪಡೆದಿದ್ದ ನಿರ್ಮಾಪಕ ಮಹೇಶ್​ ಎಸ್​. ಕೊನೆರು ನಿಧನರಾಗಿದ್ದಾರೆ. ಮಂಗಳವಾರ (ಅ.12) ಅವರು ಹೃದಯಾಘಾತದಿಂದ ಮೃತರಾದರು ಎಂಬ ಕಹಿ ಸುದ್ದಿ ಕೇಳಿಬಂದಿದೆ. ಹಾರ್ಟ್​ ಅಟ್ಯಾಕ್​ ಆದಾಗ ಅವರು ವಿಶಾಖಪಟ್ಟಣದ ತಮ್ಮ ಮನೆಯಲ್ಲಿ ಇದ್ದರು ಎನ್ನಲಾಗಿದೆ. ಮಹೇಶ್​ ಕೊನೆರು ನಿಧನಕ್ಕೆ ಜ್ಯೂ. ಎನ್​ಟಿಆರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಇಡೀ ಚಿತ್ರರಂಗ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದೆ.

ಮೊದಲು ಪತ್ರಕರ್ತರಾಗಿದ್ದ ಮಹೇಶ್​ ಕೊನೆರು ಅವರು ನಂತರ ಸೆಲೆಬ್ರಿಟಿಗಳಿಗೆ ಪಿಆರ್​ಓ ಆಗಿ ಕೆಲಸ ಮಾಡಲು ಆರಂಭಿಸಿದರು. ಬಳಿಕ ನಿರ್ಮಾಪಕನಾಗಿಯೂ ಗುರುತಿಸಿಕೊಂಡಿದ್ದರು. ಸ್ಟಾರ್​ ನಟ ಜ್ಯೂ. ಎನ್​ಟಿಆರ್​ ಅವರಿಗೆ ಪರ್ಸನಲ್​ ಪಿಆರ್ ಆಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಮಹೇಶ್​ ಸಾವಿನ ಸುದ್ದಿ ಕೇಳಿ ಜ್ಯೂ. ಎನ್​ಟಿಆರ್​ ತೀವ್ರ ನೋವಿನಲ್ಲಿದ್ದಾರೆ.

‘ನನ್ನ ಆತ್ಮೀಯ ಗೆಳೆಯ ಮಹೇಶ್​ ಕೊನೆರು ಇನ್ನಿಲ್ಲ. ಇದನ್ನು ನಂಬಲ್ಲಾಗುತ್ತಿಲ್ಲ. ತೀವ್ರ ನೋವಿನೊಂದಿಗೆ ನಿಮಗೆ ಈ ವಿಷಯ ತಿಳಿಸುತ್ತಿದ್ದೇನೆ. ಈ ಸುದ್ದಿ ತಿಳಿದು ನನಗೆ ಶಾಕ್​ ಆಗಿದೆ ಮತ್ತು ಮಾತುಗಳೇ ಬರುತ್ತಿಲ್ಲ. ಅವರ ಕುಟುಂಬದವರು ಮತ್ತು ಆಪ್ತರಿಗೆ ನನ್ನ ಸಂತಾಪಗಳು’ ಎಂದು ಜ್ಯೂ. ಎನ್​ಟಿಆರ್​ ಟ್ವೀಟ್​ ಮಾಡಿದ್ದಾರೆ.

ನಂದಮೂರಿ ಕಲ್ಯಾಣ್​ರಾಮ್​ ನಟನೆಯ ‘118’ ಸಿನಿಮಾ ಮೂಲಕ ನಿರ್ಮಾಪಕರಾಗಿ ಮಹೇಶ್​ ಕೊನೆರು ಬಡ್ತಿ ಪಡೆದುಕೊಂಡಿದ್ದರು. ಅವರು ನಿರ್ಮಿಸಿದ್ದ ‘ತಿಮ್ಮರುಸು’ ಚಿತ್ರ ಜು.30ರಂದು ತೆರೆಕಂಡಿತ್ತು. ‘ಪೊಲೀಸ್​ ವಾರಿ ಹೆಚ್ಚರಿಕಾ’ ಮತ್ತು ‘ಸಭಕು ಸಮಸ್ಕಾರಂ’ ಚಿತ್ರಗಳು ನಿರ್ಮಾಣ ಹಂತದಲ್ಲಿ ಇರುವಾಗಲೇ ಅವರು ಕೊನೆಯುಸಿರು ಎಳೆದಿದ್ದಾರೆ.

ಇದನ್ನೂ ಓದಿ:

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?

Published On - 12:55 pm, Tue, 12 October 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ