AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ಜ್ಯೂ. ಎನ್​ಟಿಆರ್​ ಆಪ್ತ ನಿರ್ಮಾಪಕ ಮಹೇಶ್​ ಎಸ್​. ಕೊನೆರು ನಿಧನ

ಸ್ಟಾರ್​ ನಟ ಜ್ಯೂ. ಎನ್​ಟಿಆರ್​ ಅವರಿಗೆ ಪರ್ಸನಲ್​ ಪಿಆರ್​ಓ ಆಗಿ ಮಹೇಶ್​ ಎಸ್​. ಕೊನೆರು ಅವರು ಕಾರ್ಯ ನಿರ್ವಹಿಸುತ್ತಿದ್ದರು. ಮಹೇಶ್​ ಸಾವಿನ ಸುದ್ದಿ ಕೇಳಿ ಜ್ಯೂ. ಎನ್​ಟಿಆರ್​ ತೀವ್ರ ನೋವಿನಲ್ಲಿದ್ದಾರೆ.

ಹೃದಯಾಘಾತದಿಂದ ಜ್ಯೂ. ಎನ್​ಟಿಆರ್​ ಆಪ್ತ ನಿರ್ಮಾಪಕ ಮಹೇಶ್​ ಎಸ್​. ಕೊನೆರು ನಿಧನ
ಹೃದಯಾಘಾತದಿಂದ ಮಹೇಶ್ ಎಸ್. ಕೊನೆರು ನಿಧನ
TV9 Web
| Edited By: |

Updated on:Oct 12, 2021 | 1:10 PM

Share

ತೆಲುಗು ಚಿತ್ರರಂಗದಲ್ಲಿ ಖ್ಯಾತಿ ಪಡೆದಿದ್ದ ನಿರ್ಮಾಪಕ ಮಹೇಶ್​ ಎಸ್​. ಕೊನೆರು ನಿಧನರಾಗಿದ್ದಾರೆ. ಮಂಗಳವಾರ (ಅ.12) ಅವರು ಹೃದಯಾಘಾತದಿಂದ ಮೃತರಾದರು ಎಂಬ ಕಹಿ ಸುದ್ದಿ ಕೇಳಿಬಂದಿದೆ. ಹಾರ್ಟ್​ ಅಟ್ಯಾಕ್​ ಆದಾಗ ಅವರು ವಿಶಾಖಪಟ್ಟಣದ ತಮ್ಮ ಮನೆಯಲ್ಲಿ ಇದ್ದರು ಎನ್ನಲಾಗಿದೆ. ಮಹೇಶ್​ ಕೊನೆರು ನಿಧನಕ್ಕೆ ಜ್ಯೂ. ಎನ್​ಟಿಆರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಇಡೀ ಚಿತ್ರರಂಗ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದೆ.

ಮೊದಲು ಪತ್ರಕರ್ತರಾಗಿದ್ದ ಮಹೇಶ್​ ಕೊನೆರು ಅವರು ನಂತರ ಸೆಲೆಬ್ರಿಟಿಗಳಿಗೆ ಪಿಆರ್​ಓ ಆಗಿ ಕೆಲಸ ಮಾಡಲು ಆರಂಭಿಸಿದರು. ಬಳಿಕ ನಿರ್ಮಾಪಕನಾಗಿಯೂ ಗುರುತಿಸಿಕೊಂಡಿದ್ದರು. ಸ್ಟಾರ್​ ನಟ ಜ್ಯೂ. ಎನ್​ಟಿಆರ್​ ಅವರಿಗೆ ಪರ್ಸನಲ್​ ಪಿಆರ್ ಆಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಮಹೇಶ್​ ಸಾವಿನ ಸುದ್ದಿ ಕೇಳಿ ಜ್ಯೂ. ಎನ್​ಟಿಆರ್​ ತೀವ್ರ ನೋವಿನಲ್ಲಿದ್ದಾರೆ.

‘ನನ್ನ ಆತ್ಮೀಯ ಗೆಳೆಯ ಮಹೇಶ್​ ಕೊನೆರು ಇನ್ನಿಲ್ಲ. ಇದನ್ನು ನಂಬಲ್ಲಾಗುತ್ತಿಲ್ಲ. ತೀವ್ರ ನೋವಿನೊಂದಿಗೆ ನಿಮಗೆ ಈ ವಿಷಯ ತಿಳಿಸುತ್ತಿದ್ದೇನೆ. ಈ ಸುದ್ದಿ ತಿಳಿದು ನನಗೆ ಶಾಕ್​ ಆಗಿದೆ ಮತ್ತು ಮಾತುಗಳೇ ಬರುತ್ತಿಲ್ಲ. ಅವರ ಕುಟುಂಬದವರು ಮತ್ತು ಆಪ್ತರಿಗೆ ನನ್ನ ಸಂತಾಪಗಳು’ ಎಂದು ಜ್ಯೂ. ಎನ್​ಟಿಆರ್​ ಟ್ವೀಟ್​ ಮಾಡಿದ್ದಾರೆ.

ನಂದಮೂರಿ ಕಲ್ಯಾಣ್​ರಾಮ್​ ನಟನೆಯ ‘118’ ಸಿನಿಮಾ ಮೂಲಕ ನಿರ್ಮಾಪಕರಾಗಿ ಮಹೇಶ್​ ಕೊನೆರು ಬಡ್ತಿ ಪಡೆದುಕೊಂಡಿದ್ದರು. ಅವರು ನಿರ್ಮಿಸಿದ್ದ ‘ತಿಮ್ಮರುಸು’ ಚಿತ್ರ ಜು.30ರಂದು ತೆರೆಕಂಡಿತ್ತು. ‘ಪೊಲೀಸ್​ ವಾರಿ ಹೆಚ್ಚರಿಕಾ’ ಮತ್ತು ‘ಸಭಕು ಸಮಸ್ಕಾರಂ’ ಚಿತ್ರಗಳು ನಿರ್ಮಾಣ ಹಂತದಲ್ಲಿ ಇರುವಾಗಲೇ ಅವರು ಕೊನೆಯುಸಿರು ಎಳೆದಿದ್ದಾರೆ.

ಇದನ್ನೂ ಓದಿ:

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

ಅನುಮಾನಾಸ್ಪದವಾಗಿ ಮೃತಪಟ್ಟ ‘ಕಾಂಚನ 3’ ನಟಿ; ಇದರ ಹಿಂದಿದೆ ಬಾಯ್​ಫ್ರೆಂಡ್​ ಕೈವಾಡ?

Published On - 12:55 pm, Tue, 12 October 21

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ