AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಕೇಸ್​; ಪ್ರಮುಖ ಆರೋಪಿಯನ್ನು ಕೈಬಿಟ್ಟ ಕೋರ್ಟ್

ಸುಶಾಂತ್ ಸಿಂಗ್ ರಜಪೂತ್ ಅವರು 2022ರ ಜೂನ್ ತಿಂಗಳಲ್ಲಿ ನಿಧನ ಹೊಂದಿದರು. ಮುಂಬೈ ಫ್ಲ್ಯಾಟ್​ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡರು. ಇದು ಕೊಲೆ ಎಂದು ಅನೇಕರು ಆರೋಪಿಸಿದರು. ಇದನ್ನು ಹೈ ಪ್ರಾಫೈಲ್ ಕೇಸ್ ಎಂದು ಪರಿಗಣಿಸಲಾಯಿತು.

ಸುಶಾಂತ್ ಸಿಂಗ್ ಕೇಸ್​; ಪ್ರಮುಖ ಆರೋಪಿಯನ್ನು ಕೈಬಿಟ್ಟ ಕೋರ್ಟ್
ಸುಶಾಂತ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on:Aug 16, 2024 | 11:49 AM

Share

ನಟ ಸುಶಾಂತ್ ಸಿಂಗ್ ರಜಪೂತ್ ಮೃತಪಟ್ಟು ಕೆಲವು ವರ್ಷಗಳು ಕಳೆದಿವೆ. ಅವರು ಇಲ್ಲ ಎಂಬ ನೋವು ಬಹುವಾಗಿ ಕಾಡುತ್ತಿದೆ. ಅವರ ಸಾವಿನ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಮಧ್ಯೆ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಕಾರಣ ಆಗಿದೆ ಎನ್ನಲಾದ ಡ್ರಗ್ ಕೇಸ್​ನ ಆರೋಪಿ ಆಗಿದ್ದ ಆಸ್ಟ್ರೇಲಿಯಾದ ವ್ಯಕ್ತಿಯನ್ನು ನಿರಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ. ಆತ ತಪ್ಪು ಮಾಡಿದ್ದಾನೆ ಎಂದು ಹೇಳಲು ಸರಿಯಾದ ರೀತಿಯ ದಾಖಲೆಗಳು ಇಲ್ಲದ ಕಾರಣ ಕೋರ್ಟ್ ಈ ಆದೇಶ ನೀಡಿದೆ.

ಸುಶಾಂತ್ ಸಿಂಗ್ ರಜಪೂತ್ ಅವರು 2022ರ ಜೂನ್ ತಿಂಗಳಲ್ಲಿ ನಿಧನ ಹೊಂದಿದರು. ಮುಂಬೈ ಫ್ಲ್ಯಾಟ್​ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡರು. ಇದು ಕೊಲೆ ಎಂದು ಅನೇಕರು ಆರೋಪಿಸಿದರು. ಇದನ್ನು ಹೈ ಪ್ರಾಫೈಲ್ ಕೇಸ್ ಎಂದು ಪರಿಗಣಿಸಲಾಯಿತು. ಇದರ ಬೆನ್ನು ಹತ್ತಿ ಹೋದ ಪೊಲೀಸರಿಗೆ ಡ್ರಗ್ ವಾಸನೆಯೂ ಬಂದಿತ್ತು. ಮಾದಕ ವಸ್ತು ನಿಯಂತ್ರಣ ಮಂಡಳಿ ಈ ಪ್ರಕರಣದ ತನಿಖೆ ಆರಂಭಿಸಿದೆ. ಈ ಪ್ರಕರಣದಲ್ಲಿ ಆಸ್ಟ್ರೇಲಿಯಾದ ಬ್ಯಾರಟೆಲ್ಸ್ ಎಂಬಾತ ಅರೆಸ್ಟ್​ ಆಗಿದ್ದ.

2020ರ ನವೆಂಬರ್​ನಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ ಬ್ಯಾರಟೆಲ್ಸ್ ಎಂಬಾತನ ಅರೆಸ್ಟ್​ ಮಾಡಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಜಡ್ಜ್​ ಮಹೇಶ್ ಜಾಧವನ್ ಅವರು ದಾಖಲೆಯ ಕೊರತೆ ಇದೆ ಎಂದು ಅಭಿಪ್ರಾಯಪಟ್ಟರು.

‘ಬ್ಯಾರಟೆಲ್ಸ್ ಅವರು ಅಪರಾಧಿ ಎಂಬುದನ್ನು ಸಾಬೀತು ಮಾಡಲು ಯಾವುದೇ ದಾಖಲೆಗಳು ಇಲ್ಲ’ ಎಂದು ಮಹೇಶ್ ಜಾಧವ್ ಹೇಳಿದ್ದಾರೆ. ಹೀಗಾಗಿ, ಅವರನ್ನು ಬಿಡುಗಡೆ ಮಾಡಲಾಗುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ಮೇಲೆ ಈ ಆದೇಶ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಎರಡನೇ ಅಧ್ಯಾಯ’ ಆರಂಭಿಸಿದ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಗರ್ಲ್​ಫ್ರೆಂಡ್

ಸಿಬಿಐ ಸದ್ಯ ಸುಶಾಂತ್ ಸಿಂಗ್ ರಜಪೂತ್ ಕೇಸ್​ನ ವಿಚಾರಣೆ ಮಾಡುತ್ತಿದೆ. ಇದು ಕೊಲೆ ಎನ್ನುವ ಗುಮಾನಿ ಇದೆ. ಸುಶಾಂತ್ ಅವರು ಜೂನ್ 13ರಂದು ನಿಧನ ಹೊಂದಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಅವರನ್ನು ಕೊಲೆ ಮಾಡಲಾಗಿದೆಯೋ ಎನ್ನುವ ಪ್ರಶ್ನೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:48 am, Fri, 16 August 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ