AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಕೇಸ್​; ಪ್ರಮುಖ ಆರೋಪಿಯನ್ನು ಕೈಬಿಟ್ಟ ಕೋರ್ಟ್

ಸುಶಾಂತ್ ಸಿಂಗ್ ರಜಪೂತ್ ಅವರು 2022ರ ಜೂನ್ ತಿಂಗಳಲ್ಲಿ ನಿಧನ ಹೊಂದಿದರು. ಮುಂಬೈ ಫ್ಲ್ಯಾಟ್​ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡರು. ಇದು ಕೊಲೆ ಎಂದು ಅನೇಕರು ಆರೋಪಿಸಿದರು. ಇದನ್ನು ಹೈ ಪ್ರಾಫೈಲ್ ಕೇಸ್ ಎಂದು ಪರಿಗಣಿಸಲಾಯಿತು.

ಸುಶಾಂತ್ ಸಿಂಗ್ ಕೇಸ್​; ಪ್ರಮುಖ ಆರೋಪಿಯನ್ನು ಕೈಬಿಟ್ಟ ಕೋರ್ಟ್
ಸುಶಾಂತ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on:Aug 16, 2024 | 11:49 AM

Share

ನಟ ಸುಶಾಂತ್ ಸಿಂಗ್ ರಜಪೂತ್ ಮೃತಪಟ್ಟು ಕೆಲವು ವರ್ಷಗಳು ಕಳೆದಿವೆ. ಅವರು ಇಲ್ಲ ಎಂಬ ನೋವು ಬಹುವಾಗಿ ಕಾಡುತ್ತಿದೆ. ಅವರ ಸಾವಿನ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಮಧ್ಯೆ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಕಾರಣ ಆಗಿದೆ ಎನ್ನಲಾದ ಡ್ರಗ್ ಕೇಸ್​ನ ಆರೋಪಿ ಆಗಿದ್ದ ಆಸ್ಟ್ರೇಲಿಯಾದ ವ್ಯಕ್ತಿಯನ್ನು ನಿರಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ. ಆತ ತಪ್ಪು ಮಾಡಿದ್ದಾನೆ ಎಂದು ಹೇಳಲು ಸರಿಯಾದ ರೀತಿಯ ದಾಖಲೆಗಳು ಇಲ್ಲದ ಕಾರಣ ಕೋರ್ಟ್ ಈ ಆದೇಶ ನೀಡಿದೆ.

ಸುಶಾಂತ್ ಸಿಂಗ್ ರಜಪೂತ್ ಅವರು 2022ರ ಜೂನ್ ತಿಂಗಳಲ್ಲಿ ನಿಧನ ಹೊಂದಿದರು. ಮುಂಬೈ ಫ್ಲ್ಯಾಟ್​ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡರು. ಇದು ಕೊಲೆ ಎಂದು ಅನೇಕರು ಆರೋಪಿಸಿದರು. ಇದನ್ನು ಹೈ ಪ್ರಾಫೈಲ್ ಕೇಸ್ ಎಂದು ಪರಿಗಣಿಸಲಾಯಿತು. ಇದರ ಬೆನ್ನು ಹತ್ತಿ ಹೋದ ಪೊಲೀಸರಿಗೆ ಡ್ರಗ್ ವಾಸನೆಯೂ ಬಂದಿತ್ತು. ಮಾದಕ ವಸ್ತು ನಿಯಂತ್ರಣ ಮಂಡಳಿ ಈ ಪ್ರಕರಣದ ತನಿಖೆ ಆರಂಭಿಸಿದೆ. ಈ ಪ್ರಕರಣದಲ್ಲಿ ಆಸ್ಟ್ರೇಲಿಯಾದ ಬ್ಯಾರಟೆಲ್ಸ್ ಎಂಬಾತ ಅರೆಸ್ಟ್​ ಆಗಿದ್ದ.

2020ರ ನವೆಂಬರ್​ನಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ ಬ್ಯಾರಟೆಲ್ಸ್ ಎಂಬಾತನ ಅರೆಸ್ಟ್​ ಮಾಡಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಜಡ್ಜ್​ ಮಹೇಶ್ ಜಾಧವನ್ ಅವರು ದಾಖಲೆಯ ಕೊರತೆ ಇದೆ ಎಂದು ಅಭಿಪ್ರಾಯಪಟ್ಟರು.

‘ಬ್ಯಾರಟೆಲ್ಸ್ ಅವರು ಅಪರಾಧಿ ಎಂಬುದನ್ನು ಸಾಬೀತು ಮಾಡಲು ಯಾವುದೇ ದಾಖಲೆಗಳು ಇಲ್ಲ’ ಎಂದು ಮಹೇಶ್ ಜಾಧವ್ ಹೇಳಿದ್ದಾರೆ. ಹೀಗಾಗಿ, ಅವರನ್ನು ಬಿಡುಗಡೆ ಮಾಡಲಾಗುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ಮೇಲೆ ಈ ಆದೇಶ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಎರಡನೇ ಅಧ್ಯಾಯ’ ಆರಂಭಿಸಿದ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಗರ್ಲ್​ಫ್ರೆಂಡ್

ಸಿಬಿಐ ಸದ್ಯ ಸುಶಾಂತ್ ಸಿಂಗ್ ರಜಪೂತ್ ಕೇಸ್​ನ ವಿಚಾರಣೆ ಮಾಡುತ್ತಿದೆ. ಇದು ಕೊಲೆ ಎನ್ನುವ ಗುಮಾನಿ ಇದೆ. ಸುಶಾಂತ್ ಅವರು ಜೂನ್ 13ರಂದು ನಿಧನ ಹೊಂದಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಅವರನ್ನು ಕೊಲೆ ಮಾಡಲಾಗಿದೆಯೋ ಎನ್ನುವ ಪ್ರಶ್ನೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:48 am, Fri, 16 August 24

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ