AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Major Teaser: ಜೀವ ಲೆಕ್ಕಿಸದೇ ಜನರ ರಕ್ಷಿಸಿದ: ಮುಂಬೈ ದಾಳಿಯಲ್ಲಿ ಸಂದೀಪ್ ಉನ್ನಿಕೃಷ್ಣನ್ ಮಾಡಿದ ತ್ಯಾಗ ನೆನಪಿಸುವ ‘ಮೇಜರ್’ ಟೀಸರ್

ಮುಂಬೈ ದಾಳಿ ವೇಳೆ ವೀರ ಮರಣ ಹೊಂದಿದ್ದ ಮೇಜರ್​​ ಸಂದೀಪ್​ ಉನ್ನಿಕೃಷ್ಣನ್ ಅವರ ಜೀವನಾಧಾರಿತ ಸಿನಿಮಾ ‘ಮೇಜರ್’ ಟೀಸರ್​ ರಿಲೀಸ್​ ಆಗಿದೆ. ಅವರು ಬಾಲ್ಯದಲ್ಲಿ ಕಂಡ ಕನಸನ್ನು ಹೇಗೆ ನನಸು ಮಾಡಿಕೊಂಡರು, ಮುಂಬೈ ದಾಳಿ ವೇಳೆ ಹೇಗೆ ಹೋರಾಡಿದರು ಎಂಬಿತ್ಯಾದಿ ವಿಚಾರಗಳನ್ನು ಟೀಸರ್​ನಲ್ಲಿ ಕಟ್ಟಿಕೊಡಲಾಗಿದೆ. ಸಂದೀಪ್​ ಉನ್ನಿಕೃಷ್ಣನ್​ ಜೀವನ ಆಧರಿಸಿ ಮೇಜರ್​ ಸಿನಿಮಾ ಮಾಡಲಾಗುತ್ತಿದೆ. ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈಗ ಚಿತ್ರದ ಟೀಸರ್​ ಅನ್ನು ಹಿಂದಿಯಲ್ಲಿ ಸಲ್ಮಾನ್​ ಖಾನ್, ತೆಲುಗಿನಲ್ಲಿ ಮಹೇಶ್​​ […]

Major Teaser: ಜೀವ ಲೆಕ್ಕಿಸದೇ ಜನರ ರಕ್ಷಿಸಿದ: ಮುಂಬೈ ದಾಳಿಯಲ್ಲಿ ಸಂದೀಪ್ ಉನ್ನಿಕೃಷ್ಣನ್ ಮಾಡಿದ ತ್ಯಾಗ ನೆನಪಿಸುವ ‘ಮೇಜರ್’ ಟೀಸರ್
ಮೇಜರ್​ ಸಂದೀಪ್​ ಪಾತ್ರದಲ್ಲಿ ಅದಿವಿ ಶೇಷ್
ರಾಜೇಶ್ ದುಗ್ಗುಮನೆ
|

Updated on: Apr 12, 2021 | 7:13 PM

Share

ಮುಂಬೈ ದಾಳಿ ವೇಳೆ ವೀರ ಮರಣ ಹೊಂದಿದ್ದ ಮೇಜರ್​​ ಸಂದೀಪ್​ ಉನ್ನಿಕೃಷ್ಣನ್ ಅವರ ಜೀವನಾಧಾರಿತ ಸಿನಿಮಾ ‘ಮೇಜರ್’ ಟೀಸರ್​ ರಿಲೀಸ್​ ಆಗಿದೆ. ಅವರು ಬಾಲ್ಯದಲ್ಲಿ ಕಂಡ ಕನಸನ್ನು ಹೇಗೆ ನನಸು ಮಾಡಿಕೊಂಡರು, ಮುಂಬೈ ದಾಳಿ ವೇಳೆ ಹೇಗೆ ಹೋರಾಡಿದರು ಎಂಬಿತ್ಯಾದಿ ವಿಚಾರಗಳನ್ನು ಟೀಸರ್​ನಲ್ಲಿ ಕಟ್ಟಿಕೊಡಲಾಗಿದೆ.

ಸಂದೀಪ್​ ಉನ್ನಿಕೃಷ್ಣನ್​ ಜೀವನ ಆಧರಿಸಿ ಮೇಜರ್​ ಸಿನಿಮಾ ಮಾಡಲಾಗುತ್ತಿದೆ. ಹಿಂದಿ, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈಗ ಚಿತ್ರದ ಟೀಸರ್​ ಅನ್ನು ಹಿಂದಿಯಲ್ಲಿ ಸಲ್ಮಾನ್​ ಖಾನ್, ತೆಲುಗಿನಲ್ಲಿ ಮಹೇಶ್​​ ಬಾಬು ಹಾಗೂ ಮಲಯಾಳಂನಲ್ಲಿ ಪೃಥ್ವಿರಾಜ್​ ಟೀಸರ್​ ಲಾಂಚ್ ಮಾಡಿದ್ದಾರೆ.

ಸಂದೀಪ್​ ಅವರ ಬಾಲ್ಯ ಹೇಗಿತ್ತು, ಗಡಿಯಲ್ಲಿರುವಾಗ ಅವರ ಜೀವನ ಯಾವ ರೀತಿ ಇತ್ತು, ಅವರ ವೈವಾಹಿಕ ಜೀವನ, ಮುಂಬೈ ದಾಳಿಯನ್ನು ಅವರು ಅದನ್ನು ಹೇಗೆ ಎದುರಿಸಿದರು ಎನ್ನುವುದನ್ನು ಟೀಸರ್​ನಲ್ಲಿ ತೋರಿಸಲಾಗಿದೆ.

ಸಂದೀಪ್​ ಅವರ ಪಾತ್ರದಲ್ಲಿ ಅದಿವಿ ಶೇಷ್​​ ನಟಿಸುತ್ತಿದ್ದಾರೆ. ಇತ್ತೀಚೆಗೆ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ ಆಗಿತ್ತು. ಇದನ್ನು ನೋಡಿ ಅಭಿಮಾನಿಗಳು ತುಂಬಾನೇ ಖುಷಿಯಾಗಿದ್ದರು. 2008ರಲ್ಲಿ ಮುಂಬೈ ದಾಳಿ ನಡೆದಿತ್ತು. ಈ ದಾಳೆ ವೇಳೆ ಮೇಜರ್​ ಸಂದೀಪ್​ ಹುತಾತ್ಮರಾಗಿದ್ದರು. ಹಿಂದಿ, ತೆಲುಗು ಹಾಗೂ ಮಲಯಾಳಂನಲ್ಲಿ ಸಿನಿಮಾ ರಿಲೀಸ್​ ಆಗುತ್ತಿದೆ. ಶಶಿ ಕಿರಣ್​ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇತ್ತೀಚೆಗೆ ಪ್ಯಾನ್​ ಇಂಡಿಯಾ ಸಿನಿಮಾಗಳು ಸಾಕಷ್ಟು ತೆರೆಗೆ ಬರುತ್ತಿವೆ. ಬೇರೆ ಬೇರೆ ಭಾಷೆಯ ಪ್ರೇಕ್ಷಕರನ್ನು ಸೆಳೆಯಲು ಪ್ಯಾನ್​ ಇಂಡಿಯಾ ಸಿನಿಮಾ ಸಹಕಾರಿ. ಸಂದೀಪ್​ ಖ್ಯಾತಿ ಇಡೀ ದೇಶಾದ್ಯಂತ ಹಬ್ಬಿದೆ. ಹೀಗಾಗಿ, ಮೂರು ಭಾಷೆಗಳಲ್ಲಿ ಸಿನಿಮಾ ರಿಲೀಸ್​ ಮಾಡುವ ಮೂಲಕ ಹೆಚ್ಚು ಪ್ರೇಕ್ಷಕರನ್ನು ತಲುಪುವ ಆಲೋಚನೆ ನಿರ್ದೇಶಕರದ್ದು.

ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸಿನಿಮಾಕ್ಕಾಗಿ ಒಂದಾದ ಸಲ್ಮಾನ್​ ಖಾನ್​, ಮಹೇಶ್​ ಬಾಬು, ಪೃಥ್ವಿರಾಜ್!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್