Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭವಿಷ್ಯವನ್ನು ಒಟ್ಟಿಗೆ ಕಳೆಯುವ ಆಸೆ ಇದೆ’; ಅರ್ಜುನ್ ಕಪೂರ್ ಬಗ್ಗೆ ಮಲೈಕಾ ಮಾತು

ಮಲೈಕಾ ಅವರಿಗೆ ಇತ್ತೀಚೆಗೆ ಕಾರು ಅಪಘಾತ ಉಂಟಾಗಿತ್ತು. ಈ ವೇಳೆ ಅವರು ಗಾಯಗೊಂಡಿದ್ದರು. ಈ ಬಗ್ಗೆಯೂ ಮಲೈಕಾ ಮಾತನಾಡಿದ್ದಾರೆ. ಕಾರು ಅಪಘಾತಕ್ಕೆ ಒಳಗಾದ 15 ದಿನಗಳವರೆಗೆ ನಾನು ಭಯದಲ್ಲೇ ಇದ್ದೆ ಎಂದಿದ್ದಾರೆ

‘ಭವಿಷ್ಯವನ್ನು ಒಟ್ಟಿಗೆ ಕಳೆಯುವ ಆಸೆ ಇದೆ’; ಅರ್ಜುನ್ ಕಪೂರ್ ಬಗ್ಗೆ ಮಲೈಕಾ ಮಾತು
ಮಲೈಕಾ-ಅರ್ಜುನ್
Follow us
TV9 Web
| Updated By: ಮದನ್​ ಕುಮಾರ್​

Updated on: May 06, 2022 | 9:11 AM

ನಟಿ ಮಲೈಕಾ ಅರೋರಾ (Malaika Arora) ಹಾಗೂ ಅರ್ಜುನ್ ಕಪೂರ್ (Arjun Kapoor) ಪರಸ್ಪರ ರಿಲೇಶನ್​ಶಿಪ್​ನಲ್ಲಿದ್ದಾರೆ. 2019ರಿಂದ ಇಲ್ಲಿವರೆಗೆ ಇಬ್ಬರೂ ಅನೇಕ ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಇವರು ಲಿವ್​-ಇನ್​-ರಿಲೇಶನ್​ಶಿಪ್​ನಲ್ಲಿದ್ದಾರೆ ಎಂದು ಕೂಡ ವರದಿ ಆಗಿದೆ. ಆದರೆ, ಇವರು ಮದುವೆ ಆಗುವ ಬಗ್ಗೆ ಎಲ್ಲಿಯೂ ಹೇಳಿಕೊಂಡಿಲ್ಲ. ಅರ್ಜುನ್​ಗಿಂತ ಮಲೈಕಾ ವಯಸ್ಸಿನಲ್ಲಿ ತುಂಬಾನೇ ದೊಡ್ಡವರು. ಈ ಕಾರಣಕ್ಕೆ ಇವರದ್ದು ಟೈಮ್​ಪಾಸ್ ಲವ್ ಎಂದು ಕೆಲವರು ದೂರಿದ್ದಿದೆ. ಆದರೆ, ಮಲೈಕಾ ಭಿನ್ನ ಕನಸುಗಳನ್ನು ಹೊಂದಿದ್ದಾರೆ. ಇವರಿಗೆ ಭವಿಷ್ಯದಲ್ಲಿ ಒಟ್ಟಾಗಿ ಇರುವ ಆಲೋಚನೆ ಇದೆ. ಈ ಬಗ್ಗೆ ಮಲೈಕಾ ಹೇಳಿಕೊಂಡಿದ್ದಾರೆ.

ಟೈಮ್ಸ್ ಆಫ್​ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಮಲೈಕಾ, ‘ಪ್ರತಿಯೊಂದು ಸಂಬಂಧವು ಅದರದ್ದೇ ಆದ ರೀತಿ-ನೀತಿಗಳನ್ನು ಹೊಂದಿರುತ್ತದೆ. ನಾವು ಒಟ್ಟಿಗೆ ಭವಿಷ್ಯವನ್ನು ಕಳೆಯಲು ಬಯಸುತ್ತೇವೆಯೇ ಎನ್ನುವ ವಿಚಾರ ನಮಗೆ ತಿಳಿದಿರಬೇಕು’ ಎಂದಿದ್ದಾರೆ ಮಲೈಕಾ. ಈ ಮೂಲಕ ಅಭಿಮಾನಿಗಳಿಗೆ ಅವರು ರಿಲೇಶನ್​ಶಿಪ್ ಟಿಪ್ಸ್ ನೀಡಿದ್ದಾರೆ.

‘ನಾವು (ಮಲೈಕಾ-ಅರ್ಜುನ್ ಕಪೂರ್) ಬಹಳಷ್ಟು ವಿಷಯಗಳನ್ನು ಚರ್ಚಿಸುತ್ತೇವೆ. ನಾವು ಒಂದೇ ರೀತಿಯ ಆಲೋಚನೆಗಳನ್ನು ಹೊಂದಿದ್ದೇವೆ. ನಾವು ನಿಜವಾಗಿಯೂ ಒಬ್ಬರನ್ನೊಬ್ಬರು ಇಷ್ಟಪಡುತ್ತೇವೆ. ನಾವು ಪ್ರಬುದ್ಧವಾಗಿ ಆಲೋಚಿಸುತ್ತೇವೆ. ನಾವು ಭವಿಷ್ಯದಲ್ಲಿ ಒಟ್ಟಿಗೆ ಇರಲು ಬಯಸುತ್ತೇವೆ. ನಿಮ್ಮ ಸಂಬಂಧದಲ್ಲಿ ನೀವು ಪಾಸಿಟಿವ್​ ವೈಬ್ ಹೊಂದಿರಬೇಕು ಮತ್ತು ಸೇಫ್ ಎಂಬ ಭಾವನೆ ನಿಮ್ಮಲ್ಲಿ ಇರಬೇಕು’ ಎಂದಿದ್ದಾರೆ ಮಲೈಕಾ.

ಇದನ್ನೂ ಓದಿ
Image
ಪ್ರಾದೇಶಿಕ ಸಿನಿಮಾಗಳನ್ನು ಹೆಚ್ಚು ಜನರಿಗೆ ತಲುಪಿಸಲು ಬಾಲಿವುಡ್ ಮಂದಿ ರಿಮೇಕ್ ಮಾಡುತ್ತಿದ್ದಾರೆ ಎಂದ ನಟಿ
Image
‘ದಂಗಲ್​’ ದಾಖಲೆ ಉಡೀಸ್​ ಮಾಡಿದ ಯಶ್​​; ಅತಿ ಹೆಚ್ಚು ಹಣ ಗಳಿಸಿದ​ 2ನೇ ಸಿನಿಮಾ ‘ಕೆಜಿಎಫ್​ 2’
Image
‘ಅಮೇರಿಕನ್ ಗಾಯಕಿಯರ ಉಡುಪನ್ನು ಹೊಗಳುವವರು, ನಮ್ಮನ್ನು ಟ್ರೋಲ್ ಮಾಡುವುದೇಕೆ?’; ಮಲೈಕಾ ನೇರ ಪ್ರಶ್ನೆ
Image
Malaika Arora: ಬ್ರೇಕಪ್ ಮಾಡಿಕೊಂಡ್ರಾ ಮಲೈಕಾ- ಅರ್ಜುನ್? ವೈರಲ್ ಆಗಿರೋ ಈ ಸುದ್ದಿಯ ಅಸಲಿಯತ್ತು ಇಲ್ಲಿದೆ

ಮಲೈಕಾ ಅವರಿಗೆ ಇತ್ತೀಚೆಗೆ ಕಾರು ಅಪಘಾತ ಉಂಟಾಗಿತ್ತು. ಈ ವೇಳೆ ಅವರು ಗಾಯಗೊಂಡಿದ್ದರು. ಈ ಬಗ್ಗೆಯೂ ಮಲೈಕಾ ಮಾತನಾಡಿದ್ದಾರೆ. ‘ಕಾರು ಅಪಘಾತಕ್ಕೆ ಒಳಗಾದ 15 ದಿನಗಳವರೆಗೆ ನಾನು ಭಯದಲ್ಲೇ ಇದ್ದೆ. ಕಾರು ಹತ್ತಲು ನನಗೆ ಹೆದರಿಕೆ ಆಗುತ್ತಿತ್ತು. ಕಾರು ಸೇಫ್ ಅಲ್ಲ ಎನ್ನುವ ಫೀಲ್ ಬರುತ್ತಿತ್ತು’ ಎಂದಿದ್ದಾರೆ ಅವರು.

ಪುಣೆಯಲ್ಲಿ ಒಂದು ಫ್ಯಾಷನ್​ ಇವೆಂಟ್​ ಮುಗಿಸಿಕೊಂಡು ಮಲೈಕಾ ಹಿಂದಿರುಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿತ್ತು. ಮುಂಬೈನ ಖಾಸಗಿ ಆಸ್ಪತ್ರೆಗೆ ಮಲೈಕಾ ಅವರನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಅಪಘಾತದಿಂದ ಕಾರಿನ ಮುಂಭಾಗ ಝಕಂ ಆಗಿತ್ತು. ಈ ಫೋಟೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿತ್ತು. ಮಲೈಕಾ ಅವರು ಚಿಕಿತ್ಸೆ ಪಡೆದು ತಮ್ಮ ಮನೆಗೆ ಮರಳಿದ್ದಾರೆ. ಅರ್ಜುನ್ ಕಪೂರ್ ಅವರು ಮಲೈಕಾ ಮನೆಗೆ ಭೇಟಿ ನೀಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ